Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜಿ.ಎ.ಪಪೂ ಮಹಾವಿದ್ಯಾಲಯದ ಎನ್ ಎಸ್ ಎಸ್ ಶಿಬಿರ ಸಂಪನ್ನ

 

ಬೆಳಗಾವಿ :
ಕೆಎಲ್ ಇ ಸಂಸ್ಥೆಯ ಜಿ.ಎ. ಪದವಿಪೂರ್ವ ಮಹಾವಿದ್ಯಾಲಯದ 2022- 2023 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಭೂತರಾಮನಹಟ್ಟಿ ಮುಕ್ತಿಮಠದಲ್ಲಿ ನಡೆಯಿತು.

ಸಮಾರಂಭದಲ್ಲಿ ಹೊಸ ವಂಟಮುರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಮಪ್ಪ ಹಂಚಿನಮನಿ ಮಾತನಾಡಿ, ಗ್ರಾಮಗಳು ಅಭಿವೃದ್ಧಿ ಆಗಬೇಕಾದರೆ ಯುವ ಜನರು ನಗರಗಳಿಗೆ ವಲಸೆ ಹೋಗುವುದನ್ನು ಕಡಿಮೆ ಮಾಡಬೇಕು. ತಮ್ಮನ್ನು ತಾವು ಗ್ರಾಮೀಣ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರ್.ಎಸ್.ಪಾಟೀಲ ಮಾತನಾಡಿ, ಗಾಂಧೀಜಿಯವರು ಕಂಡ ಗ್ರಾಮ ಭಾರತ ಪರಿಕಲ್ಪನೆ ಸಾಕಾರವಾಗಬೇಕಾದರೆ ಗ್ರಾಮಗಳ ಅಭಿವೃದ್ಧಿಯಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಗಾಂಧೀಜಿಯವರು ಹೇಳಿರುವಂತೆ ನೀನು ಭಾರತವನ್ನು ನೋಡುವುದಾದರೆ ಹಳ್ಳಿಗಳಿಗೆ ಬಾ. ಇಂಡಿಯಾವನ್ನು ನೋಡಬೇಕಾದರೆ ನಗರಗಳಿಗೆ ಹೋಗು ಎಂಬ ಮಾತಿನಂತೆ ಗ್ರಾಮ ಭಾರತ ತನ್ನ ಶ್ರೇಷ್ಠತೆಯನ್ನು ತೋರಿಸುತ್ತದೆ. ಏಕೆಂದರೆ ಭಾರತದ ಶೇಕಡಾ 70ರಷ್ಟು ಜನಸಂಖ್ಯೆ ಈಗಲೂ ಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದರು. ಸಮಾರೋಪ ಸಮಾರಂಭದಲ್ಲಿ ಎನ್ ಎಸ್ ಎಸ್ ಘಟಕದ ಸಹಾಯಕ ಶಿಬಿರ ಅಧಿಕಾರಿ ಲಲಿತ ಅಕ್ಕಿ ಸ್ವಾಗತಿಸಿದರು. ಸಹಾಯಕ ಶಿಬಿರಾರ್ಥಿ ಡಿ.ಎಸ್. ಪವಾರ್ ಶಿಬಿರದ ಉದ್ದೇಶ ತಿಳಿಸಿದರು. ಎನ್ಎಸ್ಎಸ್ ಏಳು ದಿನಗಳವರೆಗೆ ಭೂತ ರಾಮನ ಹಟ್ಟಿ ಹಾಗೂ ಪಂಚಗ್ರಾಮ ಮುಕ್ತಿ ಮಠದಲ್ಲಿ ಹಮ್ಮಿಕೊಂಡ ವಿವಿಧ ಸೇವಾ ಕಾರ್ಯಗಳ ಬಗ್ಗೆ ವಿವರ ನೀಡಿದರು. ಶಿಬಿರಾರ್ಥಿಗಳಾದ ಸಚಿನ್ ಲಮಾಣಿ, ವಂದನಾ ರಾಠೋಡ್ ಏಳು ದಿನಗಳ ಕಾಲ ನಡೆದ ಶಿಬಿರದ ಸಿಹಿ ಅನುಭವವನ್ನು ಹಂಚಿಕೊಂಡರು. ಹಿರಿಯರಾದ ರಾಮ ಜುಂಟ ಹಾಗೂ ಕಲ್ಲಪ್ಪ ನಾಯಿಕ್ ಭಾಗವಹಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ