Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಗಣೇಶೋತ್ಸವಕ್ಕೆ ಇಂದೇ ತೆರೆ

ಬೆಳಗಾವಿ : 10 ದಿನಗಳ ಕಾಲ ಭಕ್ತಿಯಿಂದ ಪೂಜಿಸಿದ ಗಣಪತಿಗೆ ಮಂಗಳವಾರ ರಾತ್ರಿ ಬೀಳ್ಕೊಡಲಾಗುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿದೆ.

 

ಮಂಗಳವಾರ 17 ರಂದು ಆಯೋಜಿಸಲಾದ ಗಣಪತಿ ವಿಸರ್ಜನೆ ಮೆರವಣಿಗೆ ಮರುದಿನ ಮಧ್ಯಾಹ್ನದವರೆಗೆ ಮುಂದುವರಿಯುತ್ತದೆ. ಮೆರವಣಿಗೆಯಲ್ಲಿ ನಗರ ವ್ಯಾಪ್ತಿಯ 390 ಕ್ಕೂ ಹೆಚ್ಚು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಭಾಗವಹಿಸುತ್ತವೆ. ಭದ್ರತೆ ವ್ಯವಸ್ಥೆಗಾಗಿ 3000 ಪೊಲೀಸರನ್ನು ನಿಯೋಜಿಸಲಾಗುತ್ತಿದೆ.

ಇದೇ ವೇಳೆ ಭಕ್ತರಿಗಾಗಿ ವಿವಿಧ ಕಡೆಗಳಲ್ಲಿ ಪ್ರೇಕ್ಷಕರ ಗ್ಯಾಲರಿಗಳನ್ನು ನಿರ್ಮಿಸಲಾಗಿದ್ದು, ಕಪಿಲೇಶ್ವರ ಮತ್ತು ಕಪಿಲತೀರ್ಥ ಕೆರೆಗಳನ್ನು ಅಲಂಕರಿಸಲಾಗಿದೆ. ಬೆಳಗಾವಿಯ ಗಣೇಶೋತ್ಸವಕ್ಕೆ ಬಹುದೊಡ್ಡ ಸಂಪ್ರದಾಯವಿದೆ. ಪುಣೆ, ಮುಂಬೈ ನಂತರ ಬೆಳಗಾವಿಯಲ್ಲಿ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಗಣೇಶ ಚತುರ್ಥಿಯ ದಿನ ಗಣರಾಯನ ಆಗಮನದ ನಂತರ ಮಂಗಳವಾರದ ಅನಂತ ಚತುರ್ದಶಿಯಂದು ಶ್ರೀಮೂರ್ತಿ ವಿಸರ್ಜನೆಯಾಗುತ್ತಿದೆ. ನಗರದ ಬಹುತೇಕ ಮಂಡಲಗಳ ಗಣೇಶ ಮೂರ್ತಿಗಳನ್ನು ಕಪಿಲೇಶ್ವರ ಮತ್ತು ಕಪಿಲತೀರ್ಥ ಕೆರೆಗಳಿಗೆ ತರಲಾಗುತ್ತದೆ. ಆದ್ದರಿಂದ, ಒಳಚರಂಡಿ ವ್ಯವಸ್ಥೆಯ ನಿರ್ವಹಣೆ,
ಅಪಾಯಕಾರಿ ಕೊಂಬೆಗಳನ್ನು ತೆಗೆಯುವುದರೊಂದಿಗೆ ವಿದ್ಯುತ್ ತಂತಿಗಳ ಅಡೆತಡೆಗಳನ್ನು ತೆಗೆದು ಹಾಕಲಾಗಿದೆ. ಮಂಗಳವಾರ ಆರಂಭವಾಗುವ ಮೆರವಣಿಗೆ ಮರುದಿನ ಮಧ್ಯಾಹ್ನದವರೆಗೆ ನಡೆಯಲಿದೆ. ಹಾಗಾಗಿ ಭದ್ರತೆಯ ಹೊಣೆಗಾರಿಕೆ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಸ್ಥಳೀಯ ಪೊಲೀಸರೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಒಟ್ಟು 517 ಕ್ಯಾಮೆರಾಗಳು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ನಿಗಾ ಇಡಲಿವೆ. ಪೊಲೀಸರು ಎಲ್ಲೆಂದರಲ್ಲಿ ಪಥಸಂಚಲನ ನಡೆಸಿದ್ದಾರೆ. ಮಹಾನಗರ ಪಾಲಿಕೆ ವತಿಯಿಂದ ವಿಸರ್ಜನೆ ಕೆರೆಯಲ್ಲಿ ಕ್ರೇನ್ ವ್ಯವಸ್ಥೆ ಮಾಡಲಾಗಿದ್ದು, ವಿಸರ್ಜನಾ ಮಾರ್ಗದಲ್ಲಿ ಬೀದಿದೀಪಗಳ ವ್ಯವಸ್ಥೆ ಮಾಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ