ಬೆಳಗಾವಿ : ನಕಲಿ ಆಧಾರ್ ಕಾರ್ಡ್ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಕಲಿ ವ್ಯಕ್ತಿಯನ್ನು ಜಾಮೀನುದಾರನಾಗಿಸಿ ನ್ಯಾಯಾಲಯಕ್ಕೆ ವಂಚಿಸಿದ ಆರೋಪದ ಮೇಲೆ ಇಬ್ಬರನ್ನು ಇಲ್ಲಿನ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.
ಉಜ್ವಲ ನಗರ 2ನೇ ಕ್ರಾಸ್ ನಿವಾಸಿ ಇಮ್ರಾನ್ ಅಬ್ದುಲ್ ಮಿಶ್ರಿಕೋಟೆ (48) ಹಾಗೂ ಗಣೇಶಪುರದ ಜ್ಯೋತಿ ನಗರದ ಅವಿನಾಶ ಪಾಂಡುರಂಗ ಲಾಕೆ (39) ಬಂಧಿತರು. ಬಂಧಿತರಿಂದ ನಕಲಿ ಆಧಾರ್ ಕಾರ್ಡ್ ಹಾಗೂ ದಾಖಲೆಗಳನ್ನು ತಯಾರಿಸಲು ಬಳಸಲಾಗುತ್ತಿದ್ದ ಕಂಪ್ಯೂಟರ್, ಅದರ ಬಿಡಿಭಾಗಗಳು ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
