Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ : ಕೆಎಲ್ಇ ಡೀಮ್ಡ್ ವಿಶ್ವವಿದ್ಯಾಲಯ (ಕಾಹೇರ್) ವತಿಯಿಂದ ಎಜುಕೇಶನ್ ಎಕ್ಸ್‌ಪೋ–2026 ಆಯೋಜನೆ 

ಬೆಳಗಾವಿ : ಬೆಳಗಾವಿಯ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (KAHER) 13 ಏಪ್ರಿಲ್ 2006ರಂದು ಸ್ಥಾಪಿತವಾದ ಡೀಮ್ಡ್ ವಿಶ್ವವಿದ್ಯಾಲಯವಾಗಿದೆ. ಕಾಹೇರ್ ಮತ್ತು ಅದರ ಅಂಗ ಸಂಸ್ಥೆಗಳು ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಅಂತರಶಾಖಾ ವಿಜ್ಞಾನಗಳಲ್ಲಿ ವಿವಿಧ ಪದವಿ (Under-Graduate) ಕಾರ್ಯಕ್ರಮಗಳನ್ನು ನೀಡುತ್ತಿವೆ. ಕಾಹೇರ್ ವತಿಯಿಂದ ಎಜುಕೇಶನ್ ಎಕ್ಸ್‌ಪೋ–2026 ಅನ್ನು 2026ರ ಮೇ 4 (ಸೋಮವಾರ) ಮತ್ತು ಮೇ 5 (ಮಂಗಳವಾರ)ರಂದು ಬೆಳಿಗ್ಗೆ 10.00ರಿಂದ ಸಂಜೆ 5.00ರವರೆಗೆ ಬೆಳಗಾವಿಯ ನೆಹರು ನಗರದಲ್ಲಿರುವ ಜೆಎನ್‌ಎಂಸಿ ಕ್ಯಾಂಪಸ್‌ನ ಕೆಎಲ್ಇ ಸೆಂಟಿನರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿದೆ. 

ಈ ಎಜುಕೇಶನ್ ಎಕ್ಸ್‌ಪೋವನ್ನು ಆಯೋಜಿಸುವ ಮುಖ್ಯ ಉದ್ದೇಶವು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ NEET ವ್ಯಾಪ್ತಿಗೆ ಒಳಪಡುವುದಿಲ್ಲದ ವಿವಿಧ ಆರೋಗ್ಯ ವೃತ್ತಿ ಮತ್ತು ಕೌಶಲ್ಯಾಧಾರಿತ ಉದ್ಯೋಗಮುಖಿ ಪದವಿ ಕೋರ್ಸ್‌ಗಳ ಬಗ್ಗೆ ಅರಿವು ಮೂಡಿಸುವುದಾಗಿದೆ. ಇದರಲ್ಲಿ ಫಾರ್ಮಸಿ, ಫಿಸಿಯೋಥೆರಪಿ, ನರ್ಸಿಂಗ್ ಸೈನ್ಸಸ್, ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಅಂತರಶಾಖಾ ವಿಜ್ಞಾನಗಳು ಸೇರಿವೆ. ಈ ಸಂದರ್ಭದಲ್ಲಿ ಕೋರ್ಸ್ ಸಂಯೋಜಕರು ಹಾಗೂ ವಿಷಯ ತಜ್ಞರು ಅರ್ಹತಾ, ಅವಧಿ, ಉದ್ಯೋಗಾವಕಾಶಗಳು ಮುಂತಾದ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾರ್ಗದರ್ಶನ ನೀಡಲಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಎಜುಕೇಶನ್ ಎಕ್ಸ್‌ಪೋಗೆ ಭೇಟಿ ನೀಡಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ ಎಂದು ರಿಜಿಸ್ಟ್ರಾರ್
ಪ್ರೊ. ಡಾ. ವಿ.ಎಂ. ಪಟ್ಟಣಶೆಟ್ಟಿ ತಿಳಿಸಿದರು.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ