Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಶಿವಗಿರಿ ಕೋ ಅಪ್ ಕ್ರೆಡಿಟ್ ಸೊಸೈಟಿ 25 ನೇ ವಾರ್ಷಿಕ ಮಹಾಸಭೆ : ಸಂಸ್ಥೆಯ ಸಾಮಾಜಿಕ ಕಾರ್ಯ ಅಭಿನಂದನೀಯ

ಬೆಳಗಾವಿ : ಶಿವಗಿರಿ ಕೋ ಅಪ್ ಕ್ರೆಡಿಟ್ ಸೊಸೈಟಿಯ 25 ನೇ ವಾರ್ಷಿಕ ಮಹಾಸಭೆ ರವಿವಾರ (ದಿನಾಂಕ 22/9/2024 ರಂದು) ನಗರದ ಮಹಾದ್ವಾರ ರಸ್ತೆಯ ಸೊಸೈಟಿಯ ಕಾರ್ಯಾಲಯದಲ್ಲಿ ನಡೆಯಿತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಸೊಸೈಟಿ ಅಧ್ಯಕ್ಷ ಸುಜನ್ ಕುಮಾರ್ ಅವರು, ಸಂಸ್ಥೆ ನಡೆದು ಬಂದ ದಾರಿ ಹಾಗೂ ಮುಂದೆ ಸಂಸ್ಥೆಯ ಗುರಿಯನ್ನು ತಲುಪಲು ಎಲ್ಲರೂ ಇನ್ನು ಹೆಚ್ಚಿನ ಪರಿಶ್ರಮದೊಂದಿಗೆ ಶ್ರಮಿಸಿ, ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸೋಣ ಎಂದು ಸಲಹೆ ನೀಡಿದರು.

ನಿರ್ದೇಶಕ ಸುಧೀರ್ ಕುಮಾರ್ ಸಾಲಿಯಾನ್ ಮಾತನಾಡಿ, ಸಹಕಾರ ತತ್ವದಂತೆ ಸಂಸ್ಥೆ ಗ್ರಾಹಕರಿಗೆ ಉತ್ತಮ
ಸೇವೆಯ ಜೊತೆಗೆ ಅನೇಕ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು.

ಜಯಂತ ಕೆ. ಪೂಜಾರಿ ಹಾಗೂ ಉಪಾಧ್ಯಕ್ಷ ಸುನಿಲ್ ಆರ್. ಪೂಜಾರಿ ಮಾತನಾಡಿ, ಸಂಸ್ಥೆಯು ಸದಸ್ಯರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದು ಮುಂದಿನ ದಿನಗಳಲ್ಲಿ ಸಂಸ್ಥೆಯನ್ನು ಇನ್ನಷ್ಟು ಅಭಿವೃದ್ಧಿಯತ್ತ ಎಲ್ಲರೂ ಸೇರಿ ಬೆಳೆಸೋಣ ಎಂದರು.

ಸಂಸ್ಥೆಯ ಮುಖ್ಯ ಕಾರ್ಯ
ನಿರ್ವಾಹಕ ಸೋಮನಾಥ ಕಡಕೋಳ ಅವರು 2023-24 ನೇ ಸಾಲಿನ ಲೆಕ್ಕಪತ್ರ ಹಾಗೂ ವಾರ್ಷಿಕ ವರದಿಯನ್ನು ಮಂಡಿಸಿದರು. ನಂತರ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ಸ್ವಸಹಾಯ ಗುಂಪಿನ ಸದಸ್ಯರು, ಪ್ರಸಕ್ತ ವರ್ಷದ ಉತ್ತಮ ಸ್ವ ಸಹಾಯ ಗುಂಪನ್ನು ಗುರುತಿಸಿ ಗೌರವಿಸಲಾಯಿತು.



ನಿರ್ದೇಶಕರಾದ ಸುಂದರ ಕೋಟ್ಯಾನ್, ಕೃಷ್ಣ ಎಸ್. ಪೂಜಾರಿ, ಮಾಧವ ಕೋಟ್ಯಾನ್, ಸುರೇಶ ಕೆ.
ಜತ್ತನ್ , ಬಾಳಪ್ಪ ಕಾಳೆನಟ್ಟಿ,
ರಮೇಶ್ ಬಸನಾಯಕ ಮತ್ತು ಬೇಬಿ ಆರ್. ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಿಬ್ಬಂದಿವರ್ಗ ಹಾಗೂ ಪಿಗ್ಮಿ ಸಂಗ್ರಹಕಾರರು ಹಾಜರಿದ್ದರು. ಸನ್ನಿಧಿ ಶೆಟ್ಟಿ ಪ್ರಾರ್ಥಿಸಿದರು. ಶಾಖಾ ವ್ಯವಸ್ಥಾಪಕ ಚಂದ್ರ ಎಚ್.ಪೂಜಾರಿ ನಿರೂಪಿಸಿ ವಂದಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ