Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆ

ಕೋಲ್ಕತ್ತ: ಪಶ್ಚಿಮ ಬಂಗಾಳ ಸರ್ಕಾರದ ಎಲ್ಲಾ ಆಡಳಿತಾತ್ಮಕ ಮತ್ತು ಅಧಿಕೃತ ಸಂವಹನವನ್ನು ಸೆಪ್ಟೆಂಬರ್ 1ರಿಂದ ಬಂಗಾಳಿ ಭಾಷೆಯಲ್ಲೇ ಕಡ್ಡಾಯವಾಗಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ.

ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುವೇಂದು, ರಾಜ್ಯ ಆಡಳಿತದ ಪ್ರತಿಯೊಂದು ಹಂತದಲ್ಲೂ ಬಂಗಾಳಿ ಭಾಷೆಯ ಬಳಕೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮಗೆ ಪತ್ರದ ಮೂಲಕ ಮನವಿ ಮಾಡಿದ್ದರು ಎಂಬ ವಿಷಯವನ್ನು ಹಂಚಿಕೊಂಡರು.

2026 ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಬಂಗಾಳಿ ಭಾಷೆಯ ಬಳಕೆ ಕಡ್ಡಾಯವಾಗಲಿದೆ.

ಕೇಂದ್ರ ಸರ್ಕಾರ ಹಾಗೂ ಇತರ ರಾಜ್ಯಗಳೊಂದಿಗೆ ನಡೆಸುವ ಪತ್ರ ವ್ಯವಹಾರಗಳಿಗೂ ಬಂಗಾಳಿಯನ್ನು ಬಳಸಲಾಗುವುದು. ಆದರೆ, ಕೇಂದ್ರ ಸರ್ಕಾರದೊಂದಿಗಿನ ಸಂವಹನ ಬಂಗಾಳಿಯ ಜೊತೆಗೆ ಹಿಂದಿ ಭಾಷೆಯನ್ನೂ ಬಳಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಅಮಿತ್ ಶಾ ಪತ್ರದ ಹಿನ್ನೆಲೆ
ಇತ್ತೀಚಿನ ಮೂರು ದಿನಗಳ ಪಶ್ಚಿಮ ಬಂಗಾಳ ಪ್ರವಾಸದ ಅವಧಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ಬಂಗಾಳಿ ಭಾಷೆಯಲ್ಲೇ ಪತ್ರ ಬರೆದಿದ್ದರು. ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮ ಪ್ರಸಾದ್ ಮುಖರ್ಜಿ ಅವರು ದೇಶದ ಆಡಳಿತ, ಶಿಕ್ಷಣ ಮತ್ತು ಸಾರ್ವಜನಿಕ ಜೀವನದಲ್ಲಿ ಭಾರತೀಯ ಭಾಷೆಗಳಿಗೆ ಸೂಕ್ತ ಸ್ಥಾನಮಾನ ಸಿಗಬೇಕೆಂದು ಬಲವಾಗಿ ಪ್ರತಿಪಾದಿಸಿದ್ದರು ಎಂಬುದನ್ನು ಶಾ ತಮ್ಮ ಪತ್ರದಲ್ಲಿ ಸ್ಮರಿಸಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ