Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BIG NEWS ಕೋಲಾರಕ್ಕೆ ಅಚ್ಚರಿ ಅಭ್ಯರ್ಥಿ ಘೋಷಣೆ

ಬೆಂಗಳೂರು : ತೀವ್ರ ಕೋಲಾಹಲಕ್ಕೆ ಕಾರಣವಾಗಿರುವ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಇದೀಗ ಹೊಸ ತಿರುವು ಪಡೆದುಕೊಂಡಿದ್ದು ಇಬ್ಬರ ನಡುವಿನ ಜಗಳದಲ್ಲಿ ಮೂರನೇ ವ್ಯಕ್ತಿಗೆ ಲಾಭವಾಗಿದೆ. ಮಾಜಿ ಮೇಯರ್ ವಿಜಯಕುಮಾರ್ ಪುತ್ರ ಗೌತಮ್ ಕುಮಾರ್ ಅವರ ಹೆಸರು ಮುಂಚೂಣಿಯಲ್ಲಿದ್ದು ಅವರ ಆಯ್ಕೆ ಅಂತಿಮವಾಗಿದೆ. ಅದರ ಟಿಕೆಟ್ ಗೆ ಸಚಿವ ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಈ ನಿಟ್ಟಿನಲ್ಲಿ ಮಧ್ಯ ಪ್ರವೇಶ ಮಾಡಿದ ಮುನಿಯಪ್ಪ ತಮ್ಮ ಅಳಿಯ ಚಿಕ್ಕ ಪೆದ್ದಣ್ಣ ಅವರಿಗೆ ಟಿಕೆಟ್ ಕೊಡಿಸಲು ಬಲವಾದ ಲಾಬಿ ನಡೆಸಿದ್ದರು. ಆದರೆ ರಮೇಶ್ ಕುಮಾರ್ ಬಣ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಕೆಲ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಹೈಡ್ರಾಮಾ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿದ್ದರು. ಇದೀಗ ಕೊನೆಗೂ ತೂಗಿ ಅಳೆದಿರುವ ಕಾಂಗ್ರೆಸ್ ಪಕ್ಷ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

ಮುನಿಯಪ್ಪ, ರಮೇಶ್‌ ಕುಮಾರ್‌ ಬಣಗಳ ಹಗ್ಗ ಜಗ್ಗಾಟದಿಂದ ಕಗ್ಗಂಟಾಗಿದ್ದ ಕೋಲಾರ ಲೋಕಸಭೆ ಕ್ಷೇತ್ರಕ್ಕೆ ಕೋಲಾರ ಪಾಲಿಕೆಯ ಮಾಜಿ ಮೇಯರ್ ವಿಜಯಕುಮಾರ್ ಪುತ್ರ ಕೆ.ವಿ. ಗೌತಮ್‌ ಅವರನ್ನು ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹೇಳಿಕೆ ಬಿಡುಗಡೆ ಮಾಡಿದ್ದು, ಕೋಲಾರ ಕ್ಷೇತ್ರದಿಂದ ಕೆ.ವಿ. ಗೌತಮ್‌ ಅವರನ್ನು ಕಣಕ್ಕಿಳಿಸಲು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ತೀರ್ಮಾನಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಕರ್ನಾಟಕದ ಎಲ್ಲ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ. ಬಾಕಿ ಇದ್ದ ನಾಲ್ಕು ಕ್ಷೇತ್ರಗಳ ಪೈಕಿ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರಕ್ಕೆ ಶುಕ್ರವಾರ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದ ಕಾಂಗ್ರೆಸ್‌ಗೆ ಕೋಲಾರದಲ್ಲಿ ಮಾತ್ರ ಸ್ಪಷ್ಟ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಗೌತಮ್ ಬೆಂಗಳೂರು ಜಿಲ್ಲೆ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ