Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಾಲಕರ ಸೇವಾ ಕೇಂದ್ರದಲ್ಲಿ ಡಾ.ಪ್ರಭಾಕರ ಕೋರೆಯವರ ಹುಟ್ಟುಹಬ್ಬ ಸಂಭ್ರಮಾಚರಣೆ

 

ಬೆಳಗಾವಿ :
ಕರ್ತೃತ್ವಶಕ್ತಿಯಿಂದ ನೂರಾರು ಸಂಸ್ಥೆಗಳನ್ನು ಹುಟ್ಟುಹಾಕಿ ಶಿಕ್ಷಣ, ಸಾಹಿತ್ಯ, ಸಂಸ್ಕೃತಿ ಹಾಗೂ ವಿಶೇಷವಾಗಿ ಆರೋಗ್ಯಸೇವಾ ಕ್ಷೇತ್ರಗಳಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ವ್ಯಕ್ತಿ ಡಾ. ಪ್ರಭಾಕರ ಕೋರೆ ಅವರು ಎಂದು ಲಿಂಗರಾಜ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ ಹೇಳಿದರು.

ಬೆಳಗಾವಿಯ ಸ್ವಾಮಿ ವಿವೇಕಾನಂದ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲಕರ ಸೇವಾ ಕೇಂದ್ರದಲ್ಲಿ ಡಾ.ಪ್ರಭಾಕರ ಕೋರೆಯವರ ೭೬ನೇ ಹುಟ್ಟುಹಬ್ಬದ ನಿಮಿತ್ತವಾಗಿ ಸಿಹಿತಿಂಡಿಗಳನ್ನು ವಿತರಿಸಿ ಮಾತನಾಡಿದರು. ಶಿಕ್ಷಣದಿಂದ ಆರೋಗ್ಯದವರೆಗೆ, ಸಂಪ್ರದಾಯಕ ಶಿಕ್ಷಣದಿಂದ ವೈಜ್ಞಾನಿಕ ಕ್ಷೇತ್ರದವರೆಗೆ, ಅಧ್ಯಯನದಿಂದ ಸಂಶೋಧನೆಯವರೆಗೆ, ಶಿಕ್ಷಣದ ಬೇಕುಬೇಡಿಕೆಗಳನ್ನು ನಿತ್ಯ ಪೂರೈಸುವುದರ ಮೂಲಕ ಶಿಕ್ಷಣದ ರೂಪರೇಷೆಗಳಿಗೆ ನೂತನ ಭಾಷ್ಯ ಬರೆದವರು ಡಾ.ಕೋರೆಯವರು.
ಶಿಕ್ಷಣದಿಂದಲೇ ಸಮಾಜದಲ್ಲಿ ಆರೋಗ್ಯಪೂರ್ಣ ವಾತಾವರಣ ನಿರ್ಮಾಣವಾಗಲು ಸಾಧ್ಯ. ಶಿಕ್ಷಣವೇ ಸಮಾಜ ನಿರ್ಮಾಣಕ್ಕೆ ಮೂಲತಳಹದಿ ಎಂಬ ತತ್ವವನ್ನು ಬಲವಾಗಿ ನಂಬಿರುವ ಡಾ. ಕೋರೆ ಅವರು ಶೈಕ್ಷಣಿಕ ಕ್ರಾಂತಿಯನ್ನೇ ಉಂಟು ಮಾಡಿದ್ದಾರೆ. ಮಾತ್ರವಲ್ಲದೆ ಸಹಕಾರಿ, ಕೃಷಿ ಕ್ಷೇತ್ರದಲ್ಲಿಯು ಸಲ್ಲಿಸಿರುವ ಕೊಡುಗೆ ಅಪಾರ. ಭಗವಂತನು ಅವರಿಗೆ ಇನ್ನೂ ಹೆಚ್ಚಿನ ಆಯುಷ್ಯ ಆರೋಗ್ಯವನ್ನು ಕರುಣಿಸಲಿ ಅವರಿಂದ ಇನ್ನಷ್ಟು ಜನಪರವಾದ ಕೆಲಸಗಳು ಜರುಗಲೆಂದು ಶುಭಕೋರಿದರು.

ಡಾ.ಜಿ.ಎನ್.ಶೀಲಿ, ಡಾ.ಮಲ್ಲಣ್ಣಾ, ಪಿಯು ಪ್ರಾಚಾರ್ಯ ಗಿರಿಜಾ ಹಿರೇಮಠ, ಲಕ್ಷ್ಮೀ ಬಿರಾದಾರ ಪ್ರೊ.ರವೀಂದ್ರ ಬಡಿಗೇರ, ಮೊದಲಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ