ಬೆಂಗಳೂರು: ನಾಯಕತ್ವಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಕೇಂದ್ರ ಬಿಜೆಪಿ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಬಸವರಾಜ ಯತ್ನಾಳ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಹತ್ತು ದಿನಗಳೊಳಗೆ ಸ್ಪಷ್ಟೀಕರಣ ಕೊಡದಿದ್ದಲ್ಲಿ ನಿಮ್ಮ ತಪ್ಪು ನೀವೇ ಒಪ್ಪಿಕೊಂಡಂತೆ. ನಾವು ಕ್ರಮಕ್ಕೆ ಮುಂದಾಗಲು ನಿಮ್ಮ ಒಪ್ಪಿಗೆ ಇದೆಯೆಂದು ಭಾವಿಸುತ್ತೇವೆ. ಇದೇ ವಿಷಯವಾಗಿ ಈ ಹಿಂದೆ ಹಲವು ಬಾರಿ ನಿಮಗೆ ಎಚ್ಚರಿಕೆ ನೀಡಲಾಗಿತ್ತು, ಆ ವೇಳೆ ಮುಂದೆ ಈ ರೀತಿಯ ತಪ್ಪಾಗದಂತೆ ನೋಡಿಕೊಳ್ಳುವುದಾಗಿ ಹೇಳಿದ್ದೀರಿ, ಆದರೆ ಯಥಾ ಪ್ರಕಾರ ಇದು ಮುಂದುವರಿದಿದೆ, ಹೀಗಾಗಿ ಇದಕ್ಕೆ ವಿವರಣೆ ನೀಡಬೇಕೆಂದು ನೋಟಿಸ್ನಲ್ಲಿ ಸೂಚಿಸಿದ್ದಾರೆ.
https://twitter.com/BasanagoudaBJP/status/1863432659663241522?ref_src=twsrc%5Etfw%7Ctwcamp%5Etweetembed%7Ctwterm%5E1863432659663241522%7Ctwgr%5E7802c03f8402bd6a7d2773da4fd86caf1c9d0384%7Ctwcon%5Es1_&ref_url=https%3A%2F%2Fpublictv.in%2Fshow-cause-notice-issued-by-central-bjp-disciplinary-committee-to-basanagouda-patil-yatnal%2F
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ನೀಡಿದ್ದ ಬಹಿರಂಗ ಹೇಳಿಕೆಗಳ ಕುರಿತು ಈಗ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಶೋಕಾಸ್ ನೊಟೀಸ್ (Show Cause Notice) ಗೆ ತಾನು ಉತ್ತರ ನೀಡುವುದಾಗಿ ಯತ್ನಾಳ್ ಹೇಳಿದ್ದಾರೆ. ತನಗೆ ನೀಡಿರುವ ಶೋಕಾಸ್ ನೋಟಿಸ್ ಅನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ಅವರು ತಾನು ನೋಟಿಸ್ಗೆ ಉತ್ತರ ಕೊಡುತ್ತೇನೆ. ಅಲ್ಲದೆ, ವರಿಷ್ಠರ ಮುಂದೆ ರಾಜ್ಯ ಬಿಜೆಪಿಯ ವಸ್ತುಸ್ಥಿತಿಯನ್ನೂ ಮುಂದಿಡುತ್ತೇನೆ ಎಂದು ಹೇಳಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿಯಲ್ಲಿ ಅನೇಕರು ಒತ್ತಾಯಿಸಿದ್ದರು. ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಅವರಿಗೆ ವಕ್ಫ್ ವಿರೋಧಿ ಜನಜಾಗೃತಿ ವರದಿ ಸಲ್ಲಿಸಲು ಭಾನುವಾರವೇ ಯತ್ನಾಳ್ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.