Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಸಂಸದ ಈರಣ್ಣ ಕಡಾಡಿ

ಬೆಳಗಾವಿ:ರಾಜ್ಯದಲ್ಲಿರುವ ಬೀದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಸ್ಥರು ನಡೆಸುವ ಪೊನ್ ಪೇ, ಗೂಗಲ್ ಪೇ, ಆನ್ ಲೈನ್ ಪೇಮೆಂಟಗಳ ಬಗ್ಗೆ ರಾಜ್ಯದಲ್ಲಿ ತಲೆದೂರಿರುವ ತೆರಿಗೆ ಇಲಾಖಾ ನೋಟಿಸ್ ಗಳಿಂದ ಇವರ ಹಿತರಕ್ಷಣೆಗಾಗಿ ಬಿಜೆಪಿ ವತಿಯಿಂದ ಸಹಾಯವಾಣಿ ಕೇಂದ್ರ ತೆರಯಲಾಗಿದ್ದು ತೊಂದರೆಗೆಒಳಗಾದ ವ್ಯಾಪಾರಸ್ಥರು, ಹಾಗೂ ನೋಟಿಸ್ ಬಗ್ಗೆ ಪರಿಹಾರಕ್ಕಾಗಿ ಸಹಾಯವಾಣಿ ನಂ 8884245123 ಕಾಲ್ ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಕೊಳ್ಳಬಹುದಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು, ಈ ಸಹಾಯವಾಣಿ ಜು21 ರಿಂದ ಪ್ರಾರಂಭವಾಗಿದೆ. ಬೀದಿಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳಿಗೆ ಈಗಾಗಲೇ ನೋಟಿಸ್ ಗಳನ್ನು ರಾಜ್ಯ ಸರ್ಕಾರದ ಮೂಲಕ ನೀಡಲಾಗಿದೆ. ಈ ವಿಚಾರದಲ್ಲಿ ದೊಡ್ಡ ಗೊಂದಲ ಶುರುವಾಗಿದ್ದು, ಬಡ ವ್ಯಾಪಾರಿಗಳಲ್ಲಿ ಆತಂಕದ ಛಾಯೆ ಮೂಡಿದೆ. ಇದರ ಪರಿಹಾರೋಪಾಯಗಳನ್ನು ಕಾಂಗ್ರೆಸ್ ಸರ್ಕಾರ ಮಾಡಬೇಕಿತ್ತು ಎಂದು ಅವರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಎಲ್ಲಿಯೂ ನಿಜವಾದ ತೆರಿಗೆ ಮೊತ್ತ ಯಾವುದು ಮತ್ತು ವಿಧಿಸಲಾಗದ ತೆರಿಗೆ ಮೊತ್ತ ಯಾವುದು ಎಂದು ಕೂಲಂಕಶ ಚರ್ಚೆ ಮಾಡಿಲ್ಲ ಮತ್ತು ವ್ಯಾಪಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದ ಮಾಹಿತಿಯ ಪ್ರಕಾರ ವಾರ್ಷಿಕ ವಹಿವಾಟು 40 ಲಕ್ಷ ಮೀರಿದರೆ ಅವರು ಜಿಎಸ್‍ಟಿಯಡಿ ನೋಂದಾಯಿಸಿಕೊಳ್ಳಬೇಕು ಮತ್ತು ಪಾವತಿಸಬೇಕು. ಜಿಎಸ್‍ಟಿ ವಾರ್ಷಿಕ ವಹಿವಾಟು 20 ಲಕ್ಷ ರೂ ಮೀರಿರುವ ಸೇವಾ ಪೂರೈಕೆದಾರರು ತೆರಿಗೆ ಕಟ್ಟಬೇಕು ಎಂದು ವ್ಯಾಪಾರಿಗಳಿಗೆ ನೋಟಿಸ್ ಕಳುಹಿಸಿದ್ದಾರೆ. ಆದರೆ ಇದು ಸಲ್ಲದು ಎಂದು ಆಕ್ಷೇಪಿಸಿದ್ದಾರೆ.
ವ್ಯಾಪಾರಿಗಳು ಯಾವುದೇ ಕಾರಣಕ್ಕೂ ಕಳ್ಳರಲ್ಲ ಮತ್ತು ತೆರಿಗೆಯನ್ನು ವಂಚಿಸುವವರಲ್ಲ. ಆದರೆ ತೆರಿಗೆಯ ಪರಿಸ್ಥಿತಿ ಅವರಿಗೆ ಅರ್ಥವಾಗಿಲ್ಲ ಮತ್ತು ರಾಜ್ಯ ಸರ್ಕಾರದವರು ಅವರಿಗೆ ಅರ್ಥ ಮಾಡಿಸಿರುವುದಿಲ್ಲ ಎಂದು ದೂರಿದರು. ಬಡ ವ್ಯಾಪಾರಿಗಳು ಗೊಂದಲದಲ್ಲಿದ್ದಾರೆ ಹಾಗೂ ಆತಂಕಗೊಂಡಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಇದನ್ನು ಗಮನಿಸಬೇಕು ಬಡಜನರ ರಕ್ಷಣೆಗೆ ಬರಬೇಕು ಎಂದು ಅವರು ಆಗ್ರಹಿಸಿದರು.
ಕೇಂದ್ರ ಸರ್ಕಾರದ ನೀತಿಯ ಪ್ರಕಾರವೇ ವಾರ್ಷಿಕ ವಹಿವಾಟು 1 ಕೋಟಿ 50 ಲಕ್ಷ ಮೀರಿದರೆ ಅವರು ಶೇ 1 ವರೆಗೆ ಜಿಎಸ್‍ಟಿ ಪಾವತಿಸಬೇಕು. ಬೀದಿಬದಿ ವ್ಯಾಪಾರಿಗಳು ಎಂದರೆ ಅವರಿಗೆ ಶಾಶ್ವತ ಸ್ಥಳವಿರುವ ಅಂಗಡಿ ಮತ್ತು ವಿಳಾಸ ಇದ್ದರೆ ಅವರಿಗೆ ಜಿಎಸ್‍ಟಿ ತೆರಿಗೆ ಸಂಗ್ರಹಿಸಲು ನೋಟಿಸ್ ಕೊಡಬಹುದು. ವಾರ್ಷಿಕ ವಹಿವಾಟು 40 ಲಕ್ಷದವರೆಗೆ ವಿನಾಯಿತಿ ಇದೆ. ವಾರ್ಷಿಕ ವಹಿವಾಟು 20 ಲಕ್ಷ ಮೀರಿದ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ರಾಜ್ಯ ಸರ್ಕಾರ ಗೊಂದಲ ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.
ಯುಪಿಐ ರಿಜಿಸ್ಟ್ರೇಷನ್ ಮೂಲಕ ಬ್ಯಾಂಕ್ ವಹಿವಾಟನ್ನು ಮಾಡಿಕೊಂಡಿರುವ ಅಪ್ಲಿಕೇಶನ್‍ಗಳಾದ ಪೇಟಿಎಂ, ಫೋನ್ ಪೇ, ಗೂಗಲ್ ಪೇ, ಇಂತಹವುಗಳನ್ನು ಟ್ರಾಕ್ ಮಾಡುತ್ತಾರೆ. ವ್ಯಾಪಾರಿಗಳು ಪಡೆದ ವಹಿವಾಟಿನ ಹಣ ನೇರವಾಗಿ ಬ್ಯಾಂಕಿಗೆ ಹೋಗುತ್ತದೆ. ಬ್ಯಾಂಕ್ ವಹಿವಾಟು 40 ಲಕ್ಷ ಮೀರಿದರೆ ಅವರಿಗೆ ನೋಟಿಸ್ ನೀಡುತ್ತಾರೆ ಮತ್ತು ಸೇವಾ ಪೂರೈಕೆಯಲ್ಲಿ ವಹಿವಾಟು 20 ಲಕ್ಷ ಮೀರಿದರೆ ಅವರಿಗು ನೋಟಿಸ್ ನೀಡುತ್ತಿದ್ದಾರೆ. ಆದರೆ ವ್ಯಾಪಾರಿಗಳ ವಹಿವಾಟು ಎಂಥದ್ದು, ವ್ಯಾಪಾರಿಗಳಿಗೆ ಸಾಲದ ರೂಪದಲ್ಲಿ ಮತ್ತು ಬೇರೆ ಬೇರೆ ರೀತಿಯಲ್ಲಿ ವ್ಯವಹಾರ ಮಾಡಿದಾಗ ವಹಿವಾಟನ್ನು ಮೀರಿದೆಯೆ ಅಥವಾ ವ್ಯಾಪಾರ ಮಾಡಿ ವಹಿವಾಟು ಮೀರಿದೆಯೇ ಎಂದು ಪರಿಶೀಲನೆ ಮಾಡಿಲ್ಲ ಎಂದು ವಿವರಿಸಿದ್ದಾರೆ.
ಹೂವು, ಹಣ್ಣು, ತರಕಾರಿ ವ್ಯಾಪಾರಿಗಳು ಜಿಎಸ್‍ಟಿ ಕಾಯ್ದೆಗೆ ಒಳಪಡುವುದಿಲ್ಲ.
ಕೆಲವು ವಸ್ತುಗಳ ಮೇಲೆ ಜಿಎಸ್‍ಟಿಯನ್ನು ವಿಧಿಸುವುದಿಲ್ಲ. ಹೂವು, ಹಣ್ಣು, ತರಕಾರಿ, ಹಾಲು, ಮಾಂಸ, ಪನ್ನೀರು, ಬಳೆ ಮತ್ತು ಸಾಕಷ್ಟು ಪದಾರ್ಥಗಳು ಜಿಎಸ್‍ಟಿ ವ್ಯಾಪ್ತಿಗೆ ಬರುವುದಿಲ್ಲ. ಈ ವಿನಾಯಿತಿ ಪದಾರ್ಥಗಳಲ್ಲಿ ನೀವು 10 ಕೋಟಿ ವ್ಯಾಪಾರ ಮಾಡಿದ್ದರೂ ಜಿಎಸ್‍ಟಿ ನೋಂದಣಿ ಮಾಡುವುದು ಕಡ್ಡಾಯವಲ್ಲ. ಆದರೆ ಹಣ್ಣು ಮತ್ತು ಹೂವು ಮಾರುವವರಿಗೂ ರಾಜ್ಯ ಜಿಎಸ್‍ಟಿ ಘಟಕದಿಂದ ನೋಟಿಸ್ ನೀಡಿದ್ದಾರೆ.
ಜಿಎಸ್‍ಟಿ ಕಾಯ್ದೆಯಲ್ಲಿ ಮೂರನೇ ವ್ಯಕ್ತಿಯ ಮಾಹಿತಿಯನ್ನು ಇಟ್ಟುಕೊಂಡು ತೆರಿಗೆ ಹೆಸರಿನಲ್ಲಿ ನೋಟಿಸ್ ನೀಡುವುದಿಲ್ಲ. ಇದು ಕಾನೂನಿಗೆ ವಿರುದ್ಧವಾಗಿದೆ. ಪೇಟಿಎಂ, ಫೋನ್ ಪೇ, ಗೂಗಲ್ ಪೇ ಅಪ್ಲಿಕೇಷನ್‍ನಂತಹ ಮೂರನೇ ವ್ಯಕ್ತಿಯಿಂದ ಪಡೆದ ಮಾಹಿತಿಯನ್ನು ರಾಜ್ಯ ಜಿಎಸ್‍ಟಿ ಘಟಕದ ಅಧಿಕಾರಿಗಳು ಮೊದಲು ಪರಿಶೀಲಿಸಬೇಕು. ವ್ಯಾಪಾರಿಗಳು ಯಾವ ವ್ಯಾಪಾರ ಮಾಡುತ್ತಿದ್ದಾರೆ, ಈ ವ್ಯಾಪಾರಕ್ಕೆ ಜಿಎಸ್‍ಟಿ ಅನ್ವಯವಾಗುತ್ತದೆಯೇ ಇಲ್ಲವೇ ಎಂದು ಪರಿಶೀಲನೆ ಮಾಡಿದ ನಂತರ ನೋಟಿಸ್ ಕೊಡಬೇಕಿತ್ತು. ಇದ್ಯಾವುದೇ ಕ್ರಮಗಳನ್ನು ರಾಜ್ಯ ಘಟಕದ ಜಿಎಸ್‍ಟಿ ಅಧಿಕಾರಿಗಳು ಮಾಡಿರುವುದಿಲ್ಲ ಎಂದು ದೂರಿದರು.
ಬೀದಿಬದಿ ವ್ಯಾಪಾರಿಗಳಿಗೆ ತೆರಿಗೆ ಬಗ್ಗೆ ಯಾವುದೇ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಜಿಎಸ್‍ಟಿ ಘಟಕ ಮಾಡಿರುವುದಿಲ್ಲ. ಶೇ 90 ರಷ್ಟು ವರ್ತಕರು ರಾಜ್ಯ ಜಿಎಸ್‍ಟಿ ಅಡಿಯಲ್ಲಿ ಬರುತ್ತಾರೆ. ಶೇ 10 ರಷ್ಟು ವರ್ತಕರು ಮಾತ್ರ ಕೇಂದ್ರದ ಜಿಎಸ್‍ಟಿ ಅಡಿಯಲ್ಲಿ ಬರುತ್ತಾರೆ ಎಂದು ತಿಳಿಸಿದ್ದಾರೆ.
ಈ 90 ರಷ್ಟು ವರ್ತಕರಿಗೆ ರಾಜ್ಯ ಜಿಎಸ್‍ಟಿ ಘಟಕದ ವತಿಯಿಂದ ಯಾವುದೇ ಜಾಹಿರಾತು ಮಾಹಿತಿ ನೀಡದೆ ಮತ್ತು ತೆರಿಗೆ ಮಾಹಿತಿಯನ್ನು ಕೊಡದೆ ಸಣ್ಣ ವ್ಯಾಪಾರಿಗಳಲ್ಲಿ ಆತಂಕ ಸೃಷ್ಟಿಸಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರದ ಅಧಿಕಾರಿಗಳು ರಾಜ್ಯ ಸರ್ಕಾರ ವ್ಯಾಪಾರಿಗಳಿಗೆ ನೀಡಿರುವ 14000 ನೋಟಿಸ್ ಕಾನೂನಿಗೆ ವಿರುದ್ಧವಾಗಿದೆ ಮತ್ತು ಸಂವಿಧಾನ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ