Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೆಹಲಿ ಚುನಾವಣೆ : ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು

 

ನವದೆಹಲಿ : ದೆಹಲಿ ವಿದಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಟ್ರೆಂಡ್‌ ಪ್ರಕಾರ ಬಿಜೆಪಿ ಭರ್ಜರಿ ಜಯದತ್ತ ದಾಪುಗಾಲು ಇಡುತ್ತಿದೆ. ಇದೇ ಟ್ರೆಂಡ್‌ ಮುಂದುವರಿದರೆ ಒಂದು ದಶಕದಿಂದ ಪ್ರಾಬಲ್ಯ ಹೊಂದಿದ್ದ ದೆಹಲಿಯ ರಾಜಕೀಯ ಭೂದೃಶ್ಯದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಕ್ಷವು ಅಧಿಕಾರ ಕಳೆದುಕೊಳ್ಳಲಿದೆ.
ಮತ ಎಣಿಕೆ ನಡೆಯುತ್ತಿದ್ದು, 27 ವರ್ಷಗಳ ನಂತರ ಬಿಜೆಪಿ ತನ್ನ ಮುನ್ನಡೆ ಸಾಧಿಸಿದ್ದು, ದೆಹಲಿಯಲ್ಲಿ ಸರ್ಕಾರ ರಚಿಸಬಹುದೇ ಎಂಬುದನ್ನು ಅಂತಿಮ ಫಲಿತಾಂಶಗಳು ನಿರ್ಧರಿಸಲಿವೆ.

ಈ ವರದಿ ಬರೆಯುವ ವೇಳೆಗೆ ಬಿಜೆಪಿ ಮತ್ತು ಎಎಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ 47 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎಎಪಿ-22 ಮತ್ತು ಕಾಂಗ್ರೆಸ್ 1 ಸ್ಥಾನ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
27 ವರ್ಷಗಳ ನಂತರ ರಾಜಧಾನಿಯನ್ನು ಮರಳಿ ಪಡೆಯಲು ಬಿಜೆಪಿ ದೃಢ ಪ್ರಯತ್ನ ನಡೆಸುತ್ತಿದೆ. 2013ರವರೆಗೆ 15 ವರ್ಷಗಳ ಕಾಲ ದೆಹಲಿಯನ್ನು ಆಳಿದ್ದ ಕಾಂಗ್ರೆಸ್, ಕಳೆದ ಎರಡು ಚುನಾವಣೆಗಳಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಆದರೆ ಈ ಬಾರಿ ಅದು ಕಳೆದ ಬಾರಿಗಿಂತ ಉತ್ತಮ ನಿರ್ವಹಣೆ ತೋರುವ ಸಾಧ್ಯತೆ ಕಂಡುಬರುತ್ತಿದೆ.

ಪ್ರಮುಖ ಆಪ್‌ ಅಭ್ಯರ್ಥಿಗಳಿಗೆ ಹಿನ್ನಡೆ
ಆರಂಭಿಕ ಟ್ರೆಂಡ್‌ಗಳಲ್ಲಿ ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹಿನ್ನಡೆಯಲ್ಲಿದ್ದಾರೆ. ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಮುನ್ನಡೆ ಸಾಧಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅತಿಶಿ ಕಲ್ಕಾಜಿ ಕ್ಷೇತ್ರದಿಂದ ಹಿನ್ನಡೆ ಅನುಭವಿಸಿದ್ದಾರೆ. ಅವರ ವಿರುದ್ಧ ಬಿಜೆಪಿ ರಮೇಶ ಬಿದುರಿಯಾ ಮುನ್ನಡೆ ಸಾಧಿಸಿದ್ದಾರೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರು ಜಂಗ್‌ಪುರ ಕ್ಷೇತ್ರದಿಂದ ಹಿಂದೆ ಬಿದ್ದಿದ್ದಾರೆ.
ಆರ್ ಕೆ ಪುರಂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲಕುಮಾರ ಶರ್ಮಾ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ನಾಯಕ ಓಂ ಪ್ರಕಾಶ್ ಶರ್ಮಾ ಆರಂಭಿಕ ಟ್ರೆಂಡ್‌ಗಳಲ್ಲಿ ವಿಶ್ವಾಸ್ ನಗರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಸಂಜಯ ಗೋಯಲ್ ಅವರು ಮುನ್ನಡೆ ಸಾಧಿಸಿದ್ದಾರೆ.

ರೋಹಿಣಿಯಲ್ಲಿ ಬಿಜೆಪಿಯ ರವೀಂದರ ಗುಪ್ತಾ ಮುನ್ನಡೆ ಸಾಧಿಸಿದ್ದಾರೆ. ಎಎಪಿಯ ಅವಧ್ ಓಜಾ ಹಿಂದೆ ಬಿದ್ದಿದ್ದಾರೆ.
ಬಿಜೆಪಿಯ ಕರವಾಲ್ ನಗರ ಅಭ್ಯರ್ಥಿ ಕಪಿಲ್ ಮಿಶ್ರಾ ಮುನ್ನಡೆಯಲ್ಲಿದ್ದರೆ, ಗ್ರೇಟರ್ ಕೈಲಾಶ್ ಕ್ಷೇತ್ರದಲ್ಲಿ ಎಎಪಿಯ ಸೌರಭ ಭಾರದ್ವಾಜ್ ಮುಂದಿದ್ದಾರೆ.
1.55 ಕೋಟಿ ಅರ್ಹ ಮತದಾರರನ್ನು ಹೊಂದಿರುವ ದೆಹಲಿಯಲ್ಲಿ ಫೆಬ್ರವರಿ 5 ರಂದು ನಡೆದ ಚುನಾವಣೆಯಲ್ಲಿ ಶೇಕಡಾ 60.54 ರಷ್ಟು ಮತದಾನವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ