Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಂಇಎಸ್ ಆಟಾಟೋಪಕ್ಕೆ ಕಡಿವಾಣ ಹಾಕಿದ ಬೊಮ್ಮಾಯಿ !

 

ಕಳೆದ ವರ್ಷ ಕರ್ನಾಟಕ ವಿಧಾನ ಮಂಡಲ ವಿಶೇಷ ಅಧಿವೇಶನ ಬೆಳಗಾವಿಯಲ್ಲಿ ಆಯೋಜನೆಗೊಂಡ ಸಂದರ್ಭದಲ್ಲಿ ಎಂಇಎಸ್ ಕೃಪಾಪೋಷಿತ ಶಕ್ತಿಗಳು ಬೆಳಗಾವಿಯಲ್ಲಿ ರಾತ್ರಿ ಹೊತ್ತು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಗಲಭೆ ನಡೆಸಿದ್ದರು. ಕರ್ನಾಟಕ ಸರಕಾರವೇ ಬೆಳಗಾವಿಯಲ್ಲಿದ್ದಾಗ ನಡೆದ ಗಲಭೆಗೆ ನಾಡಿನೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದನ್ನೇ ಪ್ರಮುಖ ಆಧಾರವಾಗಿರಿಸಿಕೊಂಡ ಕರ್ನಾಟಕ ಪೊಲೀಸ್ ಈ ಬಾರಿ ಯಾವುದೇ ಗಲಭೆಗಳಿಗೆ ಆಸ್ಪದ ನೀಡಿದೇ ಕಾನೂನು ವ್ಯವಸ್ಥೆ ಕಾಪಾಡಿಕೊಂಡಿತು. ಎಂಇಎಸ್ ಕಳೆದ ವರ್ಷ ಅಧಿವೇಶನಕ್ಕೆ ಬಂದ ವಾಹನಗಳ ಮೇಲೆ ಕಲ್ಲು ತೂರಿ ಗಾಜು ಒಡೆದು ನಡೆಸಿದ ದಾಂದಲೆಯನ್ನು ಪ್ರಮುಖ ಕಾರಣವಾಗಿಸಿಕೊಂಡು ಪೊಲೀಸರು ಈ ಬಾರಿ ಮಹಾಮೇಳಾವ ನಡೆಸಲು ಅವಕಾಶ ನಿರಾಕರಿಸಿದರು.

ಬೆಳಗಾವಿ :
ಕರ್ನಾಟಕ ವಿಧಾನ ಮಂಡಲ ಅಧಿವೇಶನದ ಮೊದಲ ದಿನ ಎಂಇಎಸ್ ಪ್ರತಿ ವರ್ಷ ಮಹಾಮೇಳಾವ ಏರ್ಪಡು ಮಾಡುತ್ತಾ ಬಂದಿದೆ. ಆದರೆ, ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮೊದಲ ಬಾರಿಗೆ ಮೇಳಾವಕ್ಕೆ ಕಡಿವಾಣ ಹಾಕುವ ಮೂಲಕ ಎಂಇಎಸ್ ಗೆ ತಕ್ಕ ತಿರುಗೇಟು ನೀಡಿದೆ. ಸೋಮವಾರದಿಂದ ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಆರಂಭವಾಗಿದೆ. ಆದರೆ, ಇದಕ್ಕೆ ಪ್ರತಿಯಾಗಿ ಎಂಇಎಸ್ ಟಿಳಕವಾಡಿಯ ವ್ಯಾಕ್ಸಿನ್ ಡಿಪೋದಲ್ಲಿ ಮಹಾಮೇಳಾವದ ಹೆಸರಿನಲ್ಲಿ ಮರಾಠಿಗರನ್ನು ಪ್ರತಿ ವರ್ಷವೂ ಪ್ರಚೋದಿಸುವ ಕೆಲಸ ಮಾಡುತ್ತಿದೆ. ಕನ್ನಡ ಸಂಘಟನೆಗಳ ತೀವ್ರ ವಿರೋಧಕ್ಕೆ ಮಣಿದ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಈ ವರ್ಷ ಯಾವುದೇ ಮುಲಾಜಿಲ್ಲದೆ
ಮಹಾಮೇಳಾವಕ್ಕೆ ಲಗಾಮು ಹಾಕಿದೆ. ಎಂಇಎಸ್ ನಾಯಕ ಹಾಗೂ ಮಾಜಿ ಶಾಸಕ ಮನೋಹರ ಕಿಣೇಕರ, ಯುವ ಧುರೀಣ ಶುಭಂ ಶೆಳಕೆ ಅವರಿಗೆ ಪ್ರಚೋದನೆಯ ಈ ಕಾರ್ಯಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂದು ವಾರ್ನಿಂಗ್ ನೀಡಿದರು.

ವ್ಯಾಕ್ಸಿನ್ ಡಿಪೋದಲ್ಲಿ ಹಾಕಿದ್ದ ಮೇಳಾವ್ ವೇದಿಕೆಯ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡರು.

ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಬೆಳಗಾವಿ ನಗರ ಡಿಸಿಪಿ ರವೀಂದ್ರ ಗಡಾದಿ ಅವರು ಸ್ಥಳಕ್ಕೆ ಭೇಟಿ ನೀಡಿ ವೇದಿಕೆಯ ಪೆಂಡಾಲ್ ಹಾಗೂ ಇದರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಿದರು. ಪೊಲೀಸರು ತಕ್ಷಣ ಕಾರ್ಯ ಪ್ರವೃತ್ತರಾಗಿ ಅವುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡರು. ಇದಕ್ಕೂ ಮುಂಚಿತವಾಗಿ ಮಹಾಮೇಳಾವ ನಡೆಸುವ ಸ್ಥಳ ಸೇರಿದಂತೆ ಬೆಳಗಾವಿ ನಗರದಲ್ಲಿ ಕಲಂ 144 ಅನ್ನು ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ