Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ

 

ಗದಗ:
ಪೂಜ್ಯರ ಅಭಿಮಾನಿ ಭಕ್ತರ ಮಹಾ ಬಳಗವಾದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ‘ತ್ರಿಭಾಷಾ ಕವಿ’ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಘನ ಉದ್ದೇಶದಿಂದ, ಕಳೆದ ೨೩ ವರ್ಷಗಳಿಂದಲೂ ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ ನೀಡುತ್ತಾ ಬಂದಿದೆ. ಅದರಂತೆ ಈ ವರ್ಷವೂ ಕೂಡಾ ಈ ಪ್ರಶಸ್ತಿಗಾಗಿ ೨೦೨೧-೨೨ ಮತ್ತು ೨೦೨೨-೨೩ ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಗೆ ಕನ್ನಡದ ಕೃತಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಹಿಂದಿ ಮತ್ತು ಸಂಸ್ಕೃತ ಕೃತಿಗಳಲ್ಲಿ ಉತ್ತಮ ಕೃತಿ ಆಯ್ಕೆಮಾಡಿ ಉತ್ತಮ ಕೃತಿ ಕರ್ತರಿಗೆ ಪುಟ್ಟರಾಜ ಸಾಹಿತ್ಯ ಸಮ್ಮಾನ ನೀಡಲಾಗುವದು.
ಈ ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಯು ೫,೦೦೦/-ರೂ (ಐದು ಸಾವಿರ ರೂಪಾಯಿಗಳು) ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಗೆ ಆಯ್ಕೆಯಾದ ಕೃತಿ ಕರ್ತರಿಗೆ ೦೧ ಅಕ್ಟೋಬರ್ ೨೦೨೩ ರಂದು ಬೆಳಗಾವಿಯಲ್ಲಿ ನಡೆಯುವ ಡಾ. ಪಂ. ಪುಟ್ಟರಾಜ ಸಾಹಿತ್ಯೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸೇವಾ ಸಮಿತಿಯ ರಾಜ್ಯ ಕಾರ್ಯದರ್ಶಿ ಪ್ರೊ. ಮಂಜುಶ್ರೀ ಬ. ಹಾವಣ್ಣವರ ಬೆಳಗಾವಿ ತಿಳಿಸಿದ್ದಾರೆ.

ಪ್ರಶಸ್ತಿಗೆ ಸಮೀಪದ ಪ್ರತಿಸ್ಪರ್ಧಿಯಾದ ವಿವಿದ ಪ್ರಕಾರದ ೧೦ ಕೃತಿಗಳನ್ನು ಗುರುತಿಸಿ ವರ್ಷದ ಶ್ರೇಷ್ಠ ಕೃತಿ ಸಮ್ಮಾನ ನೀಡಿ ಗೌರವಿಸಲಾಗುವುದು.
ಆಸಕ್ತ ಲೇಖಕರು ತಮ್ಮ ೩ ಕೃತಿಗಳೊಂದಿಗೆ ಪರಿಚಯ ಪತ್ರ, ಒಂದು ಭಾವಚಿತ್ರ ಮರು ಉತ್ತರಕ್ಕಾಗಿ ಅಗತ್ಯ ಅಂಚೆ ಚೀಟಿ ಅಂಟಿಸಿದ ಲಕೊಟೆ ಸಹಿತ ೧೫ ಅಗಸ್ಟ ೨೦೨೩ ರ ಒಳಗಾಗಿ ತಲುಪುವಂತೆ ಕಳಿಸಿಕೊಡಲು ಕೋರಲಾಗಿದೆ. ಪುಸ್ತಕಗಳನ್ನು ಕಳಿಸಿಕೊಡುವ ವಿಳಾಸ: ಅಧ್ಯಕ್ಷರು ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಆಯ್ಕೆ ಸಮಿತಿ , ಡಾ. ಪಂ. ಪುಟ್ಟರಾಜ ಸೇವಾ ಸಮಿತಿ (ರಿ) ‘ಗಿರಿಜಾ ನಿವಾಸ’ ಪಂಚಾಕ್ಷರಿ ನಗರ ೩ನೆಯ ಅಡ್ಡರಸ್ತೆ ಗದಗ-೫೮೨೧೦೧ ಇಲ್ಲಿಗೆ ಕಳಿಸುವಂತೆ ಕೋರಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ