Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ

ಬೆಂಗಳೂರು: ನಾಡಗೀತೆಯಲ್ಲಿ ಇರುವ 'ಪಾರಸಿಕ ಜೈನ ರುದ್ಯಾನ' ಸಾಲನ್ನು ಪರಿಷ್ಕರಿಸಿ 'ಬೌದ್ಧ' ಪದವನ್ನೂ ಒಳಗೊಂಡಂತೆ 'ಪಾರಸಿಕ ಜೈನ ಬೌದ್ಧರುದ್ಯಾನ' ಎಂದು ಮಾರ್ಪಾಡು ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಒಳಗೊಂಡ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ ಸರ್ವಾನುಮತದಿಂದ ಶಿಫಾರಸು ಮಾಡಿದೆ.

ರಾಷ್ಟ್ರಕವಿ ಕುವೆಂಪು ಅವರು 1924 ರಲ್ಲಿ ಬರೆದಿದ್ದ ನಾಡಗೀತೆಯ ಮೊದಲ ಕರಡು ಪ್ರತಿಯಲ್ಲಿ 'ಬೌದ್ಧರುದ್ಯಾನ' ಎಂಬ ಪದವಿತ್ತು. ಆದರೆ, 1930 ರಲ್ಲಿ ಅವರ 'ಕೊಳಲು' ಕವನ ಸಂಕಲನದಲ್ಲಿ ಈ ಹಾಡು ಪ್ರಕಟವಾದಾಗ ಅದು 'ಜೈನರುದ್ಯಾನ' ಎಂದಾಗಿತ್ತು. ಬೌದ್ಧ ಧರ್ಮಕ್ಕೆ ಇರುವ ಐತಿಹಾಸಿಕ ಮಹತ್ವ ವನ್ನು ಪರಿಗಣಿಸಿ, ಮತ್ತೆ ಬೌದ್ಧ ಪದ ಸೇರಿಸಬೇಕು ಎಂದು ಕೋರಿ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಅವರು 2025 ರ ನವೆಂಬರ್‌ನಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದರು.

ಅವರ ಸೂಚನೆಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 8 ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಇದರ ಪದನಿಮಿತ್ತ ಅಧ್ಯಕ್ಷರಾಗಿದ್ದು, ಸಾಹಿತಿಗಳಾದ ಹಂಪ ನಾಗರಾಜಯ್ಯ, ಕುವೆಂಪು ಅವರ ಅಳಿಯ ಡಾ.ಕೆ. ಚಿದಾನಂದ, ಎಸ್.ಜಿ.
ದೇವಿ, ಸಿದ್ದರಾಮಯ್ಯ, ದ್ವಾರಕಾನಾಥ ಚೊಕ್ಕ, ಮೂಡ್ನಾಕೂಡು ಚಿನ್ನಸ್ವಾಮಿ, ಕಾಳೇಗೌಡ ನಾಗವಾರ ಹಾಗೂ ಬರಗೂರು ರಾಮಚಂದ್ರಪ್ಪ ಅವರು ಸಮಿತಿಯ ಸದಸ್ಯರಾಗಿದ್ದರು.

ಬರಗೂರು ಹೊರತುಪಡಿಸಿ ಉಳಿದೆಲ್ಲರೂ ಸಭೆ ಸೇರಿ ಈ ಶಿಫಾರಸು ಮಾಡುವ ತೀರ್ಮಾನ ಕೈಗೊಂಡಿದ್ದರು. ಈ ಬಗ್ಗೆ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಈ ಪದ ಸೇರ್ಪಡೆ ಕುವೆಂಪು ಅವರ ಆಶಯಗಳಿಗೆ ವಿರುದ್ಧವಾಗಿಲ್ಲ.' ಹಾಡಿನ ಉದ್ದ ಹೆಚ್ಚಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲಾಗಿದೆ ಎಂದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!