Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

10 ರೂ.ಗಳ ವಿಷಯಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಬಸ್ ಕಂಡಕ್ಟರ್…!

ಜೈಪುರ : 75 ವರ್ಷದ ನಿವೃತ್ತ ಐಎಎಸ್‌ (IAS) ಅಧಿಕಾರಿಯೊಬ್ಬರು ಜೈಪುರದಲ್ಲಿ ಬಸ್ ಕಂಡಕ್ಟರ್‌ ಗೆ 10 ರೂಪಾಯಿ ಹೆಚ್ಚುವರಿ ಹಣ ನೀಡಲು ನಿರಾಕರಿಸಿದ ಆರೋಪದ ಮೇಲೆ ಅವರ ಮೇಲೆ ನಿರ್ವಾಹಕ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ಘಟನೆಯ ವೀಡಿಯೊ ವೈರಲ್ ಆಗಿದೆ. ಘಟನೆ ಶುಕ್ರವಾರ ನಡೆದಿದ್ದು, ನಿವೃತ್ತ ಐಎಎಸ್‌ (IAS) ಅಧಿಕಾರಿ ತಾವು ಇಳಿಯಬೇಕಾದ ಬಸ್ ನಿಲ್ದಾಣದಲ್ಲಿ ಗೊತ್ತಾಗದೆ ಇಳಿಯದಿದ್ದಾಗ ಮುಂದಿನ ನಿಲ್ದಾಣದವರೆಗೆ ಹೋಗಲು ಅವರ ಬಳಿ 10 ರೂ ಹೆಚ್ಚುವರಿ ಹಣ ನೀಡುವಂತೆ ಕೇಳಲಾಯಿತು. ಅದಕ್ಕೆ ಅವರು ನಿರಾಕರಿಸಿದ್ದು ಈ ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ.

 

ನೋಟಾ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಉದಯ್ ಸಿಂಗ್ ಪ್ರಕಾರ, ನಿವೃತ್ತ ಅಧಿಕಾರಿ ಆರ್‌.ಎಲ್. ಮೀನಾ ಅವರು ಆಗ್ರಾ ರಸ್ತೆಯಲ್ಲಿರುವ ಕನೋಟಾ ಬಸ್ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಕಂಡಕ್ಟರ್ ಅವರಿಗೆ ಆ ನಿಲ್ದಾಣದ ಬಗ್ಗೆ ತಿಳಿಸಲಿಲ್ಲ, ನಂತರ ಬಸ್ ಮುಂದಿನ ನಿಲ್ದಾಣವನ್ನು ತಲುಪಿತು. ಕಂಡಕ್ಟರ್ ಮೀನಾ ಅವರಿಗೆ ಹೆಚ್ಚುವರಿ ನಿವೃತ್ತ ಐಎಎಸ್‌ (IAS) ಅಧಿಕಾರಿ ಬಳಿ ಅಲ್ಲಿ ವರೆಗಿನ ಹೆಚ್ಚುವರಿ ದರವನ್ನು ಕೇಳಿದಾಗ ವಾಗ್ವಾದ ನಡೆಯಿತು, ಆದರೆ ನಿವೃತ್ತ ಐಎಎಸ್‌ (IAS) ಅಧಿಕಾರಿ ಅದನ್ನು ಪಾವತಿಸಲು ನಿರಾಕರಿಸಿದರು. ಕಂಡಕ್ಟರ್ ಮೀನಾ ಅವರನ್ನು ತಳ್ಳಿದ್ದಾನೆ, ಆಗ ಅವರು ಕಂಡಕ್ಟರ್‌ಗೆ ಕಪಾಳಮೋಕ್ಷ ಮಾಡಿದರು, ನಂತರ ಕಂಡಕ್ಟರ್‌ ಅವರ ಮೇಲೆ ನಿರಂತರವಾಗಿ ಅವರು ಬಸ್ಸಿನಿಂದ ಇಳಿಯುವ ವರೆಗೂ ಹಲ್ಲೆ ನಡೆಸಿದ್ದಾನೆ ಎಂದು ಸಿಂಗ್ ಹೇಳಿದರು.

ಬಸ್‌ ನಿರ್ವಾಹಕನನ್ನು ಘನಶ್ಯಾಮ ಶರ್ಮಾ ಎಂದು ಗುರುತಿಸಲಾಗಿದೆ ಎಂದು ಸಿಂಗ್ ಹೇಳಿದರು. ಶನಿವಾರದಂದು ಮೀನಾ ಅವರು ಕನೋಟಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಘನಶ್ಯಾಮ ಶರ್ಮಾ ವಿರುದ್ಧ ದೂರು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.
ದುರ್ವರ್ತನೆಗಾಗಿ ಜೈಪುರ ಸಿಟಿ ಟ್ರಾನ್ಸ್‌ಪೋರ್ಟ್ ಸರ್ವಿಸಸ್ ಲಿಮಿಟೆಡ್ ಆರೋಪಿ ಕಂಡಕ್ಟರ್‌ ಘನಶ್ಯಾಮ ಶರ್ಮಾ ಅವರನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ