ಬೆಳಗಾವಿ: ಕಾಗವಾಡ ತಾಲೂಕು ಉಗಾರನ ಹಿರಿಯ ಸಕ್ಕರೆ ಉದ್ಯಮಿ ರಾಜಾಭಾವು ಶಿರಗಾಂವಕರ (91) ಗುರುವಾರದಂದು ಕೊಲ್ಲಾಪುರದ ನಿವಾಸದಲ್ಲಿ ನಿಧನರಾದರು. ಅವರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ರಾಜಾಭಾವು ಅವರ ಅಂತ್ಯಕ್ರಿಯೆ ಉಗಾರದಲ್ಲಿ ಗುರುವಾರ ಸಂಜೆ ನೆರವೇರಿತು.
ನವದೆಹಲಿಯ ಇಂಡಿಯನ್ ಶುಗರ್ ಎಕ್ಸಿಮ್ ಕಾರ್ಪೊರೇಷನ್ (ಐಎಸ್ಇಸಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಉಗಾರ ಲಯನ್ಸ್ ಕ್ಲಬ್ನ ಸಂಸ್ಥಾಪಕ, ಸಾಂಗ್ಲಿಯ ನೂತನ ಬುದ್ಧಿಬಲ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ.
ಕಾಗವಾಡ ತಾಲೂಕಿನ ಉಗಾರ ಪಟ್ಟಣದ ಉಗಾರ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದ ಅವರು, ಹಿರಿಯ ಸಕ್ಕರೆ ಉದ್ಯಮಿ ಹಾಗೂ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದಾರೆ. ಉಗಾರ ಸಕ್ಕರೆ ಕಾರ್ಖಾನೆಯ ಅಭಿವೃದ್ದಿಗೆ ಶ್ರಮಿಸುವ ಮೂಲಕ ಈ ಭಾಗದಲ್ಲಿ ಕಬ್ಬು ಬೆಳೆಗಾರ ರೈತರ ಆರ್ಥಿಕ ಶಕ್ತಿಯಾಗಿದ್ದರು.
