Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಧಾನ ಪರಿಷತ್ ನಲ್ಲಿ ನೇಕಾರರ ಸಮಸ್ಯೆ ತೆರೆದಿಟ್ಟ ಚನ್ನರಾಜ ಹಟ್ಟಿಹೊಳಿ

 

 

ಬೆಳಗಾವಿ : ಈ ಭಾಗದ ಪ್ರಮುಖ ಉದ್ಯಮವಾದ ನೇಕಾರಿಕೆಯಲ್ಲಿ ತೊಡಗಿಕೊಂಡವರ ಹಲವು ಸಂಕಷ್ಟಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬುಧವಾರ ಗಮನ ಸೆಳೆದರು.

ರಾಜ್ಯದಲ್ಲಿ ಸುಮಾರು 54,250 ಕೈಮಗ್ಗ ನೇಕಾರರು ಹಾಗೂ 97,133 ವಿದ್ಯುತ್ ಮಗ್ಗ ನೇಕಾರರಿದ್ದಾರೆ. ಈ ಪೈಕಿ ಬೆಳಗಾವಿ ಜಿಲ್ಲೆಯಲ್ಲಿ 22,524 ವಿದ್ಯುತ್ ಮಗ್ಗ ನೇಕಾರರು ಹಾಗೂ 5353 ಕೈಮಗ್ಗ ನೇಕಾರರಿದ್ದಾರೆ. ಸರಕಾರ 1.25 ರೂ. ದರದಲ್ಲಿ ವಿದ್ಯುತ್ ಸಬ್ಸಿಡಿ ಯೋಜನೆ ನೀಡಿರುವುದಾಗಿ ಸರಕಾರ ಹೇಳಿಕೊಂಡಿದೆ.

ಆದರೆ ಜಿಎಸ್ ಟಿ, ಎಫ್ ಐ ಇತ್ಯಾದಿ ಸೇರಿ ಪ್ರತಿ ಯುನಿಟ್ ಗೆ 3.25 ಪೈಸೆ ಆಗುತ್ತಿದೆ. ಹೀಗಾಗಿ ಎಲ್ಲವನ್ನೂ ಸೇರಿಸಿ 1.25 ರೂ. ದರದಲ್ಲಿ ವಿದ್ಯುತ್ ಒದಗಿಸಲು ಸರಕಾರ ಕ್ರಮ ವಹಿಸಬೇಕು ಎಂದು ಚನ್ನರಾಜ ಹಟ್ಟಿಹೊಳಿ ಆಗ್ರಹಿಸಿದರು.

ಕೋವಿಡ್ ಸಂದರ್ಭದಲ್ಲಿ ನೇಕಾರರು ಸಾಕಷ್ಟು ಸಂಕಷ್ಟಪಟ್ಟಿದ್ದಾರೆ. ಈ ವೇಳೆ ಸರಕಾರ ಅವರಿಗೆ ಶೇ.3 ಬಡ್ಡಿದರದ ಸಾಲ ನೀಡಿರುವುದಾಗಿ ಸರಕಾರ ತಿಳಿಸಿದೆ. ಆದರೆ ಕೆಲ ನೇಕಾರರು ತಮ್ಮಲ್ಲಿ ಹೇಳಿಕೊಂಡ ಪ್ರಕಾರ ಕಳೆದ ನಾಲ್ಕು ವರ್ಷಗಳಿಂದ ಶೇ.3 ಬಡ್ಡಿದರದ ಸಾಲ ಯೋಜನೆ ನೇಕಾರರಿಗೆ ತಲುಪಿಲ್ಲ. ಅವರು ಈ ಹಿಂದೆ ಪಡೆದ ಶೇ.13 ಹಾಗೂ 14 ದರದಲ್ಲೇ ಸಾಲದ ಕಂತು ಕಟ್ಟುತ್ತಿದ್ದಾರೆ. ಸರಕಾರ ಈ ಕುರಿತು ಕ್ಷಿಪ್ರ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ಇದಕ್ಕೆ ಉತ್ತರಿಸಿದ ಜವಳಿ ಹಾಗೂ ಕೈಮಗ್ಗ ಸಚಿವರು, ತಮಿಳುನಾಡು ಮಾದರಿಯಲ್ಲಿ ತಮಗೆ ಪ್ಯಾಕೇಜ್ ನೀಡಬೇಕೆಂಬುದು ನೇಕಾರರ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.17ರಂದು ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸಭೆ ಸೇರಿ ನೇಕಾರರ ಶೇ. 99 ರಷ್ಟು ಬೇಡಿಕೆಗಳನ್ನು ಈಡೇರಿಸಿ ಸರಕಾರಿ ಆದೇಶ ಹೊರಡಿಸಲಾಗಿದ್ದು ಇನ್ನಷ್ಟು ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುತ್ತಿದೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ