Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಛತ್ತೀಸ್‌ಗಢಕ್ಕೆ ಕೊನೆಗೂ ಹೊಸ ಮುಖ್ಯಮಂತ್ರಿ ಆಯ್ಕೆ

 

ದೆಹಲಿ:
ಬುಡಕಟ್ಟು ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಿಷ್ಣು ದೇವ್ ಸಾಯಿ ಅವರು ಛತ್ತೀಸ್‌ಗಢದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿಯ ಆಯ್ಕೆಯಾಗಿದ್ದಾರೆ.

ಅವರು ಇದುವರೆಗೆ ರಾಜ್ಯದಲ್ಲಿ ಪಕ್ಷದ ಅತಿ ಉನ್ನತ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರಿಗೆ ಆಪ್ತರು.
ಸಾಯಿ ಅವರು 2006 ರಲ್ಲಿ ಪಕ್ಷದ ಛತ್ತೀಸ್‌ಗಢ ಘಟಕದ ಅಧ್ಯಕ್ಷರಾಗಿದ್ದರು ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದರು.
ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿಯೂ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಅವರನ್ನು ಬಿಜೆಪಿ ಕೇಂದ್ರ ನಾಯಕತ್ವವು ಭಾನುವಾರ ಆಯ್ಕೆ ಮಾಡಿದೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.

ರಾಯ್‌ಪುರದಲ್ಲಿ ಬಿಜೆಪಿಯ ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿಯವರನ್ನು ಮುಖ್ಯಮಂತ್ರಿ ಹುದ್ದೆಗೆ ಘೋಷಿಸಲಾಯಿತು.

 

59 ವರ್ಷದ ಸಾಯಿ ಅವರು ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಕುನ್‌ಕುರಿ ಕ್ಷೇತ್ರದಿಂದ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಮೂರು ಬಾರಿ ಛತ್ತೀಸ್‌ಗಢ ಬಿಜೆಪಿ ಅಧ್ಯಕ್ಷರಾಗಿದ್ದರು. (2006ರಿಂದ 2010, 2014ರಲ್ಲಿ ಕೆಲವುತಿಂಗಳು, 2020ರಿಂದ 2022). 2014ರಿಂದ 2019ರವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರದಲ್ಲಿ ಉಕ್ಕು ಸಚಿವರಾಗಿದ್ದರು.

ಛತ್ತೀಸ್‌ಗಢ ಇನ್ನೂ ಮಧ್ಯಪ್ರದೇಶದ ಭಾಗವಾಗಿದ್ದಾಗ ಜನಿಸಿದ್ದರು. ಮಧ್ಯಪ್ರದೇಶದ ತಪ್ಕಾರ ಕ್ಷೇತ್ರದ ಶಾಸಕರಾಗಿ ರಾಜಕೀಯ ಜೀವನ ಆರಂಭಿಸಿದರು. ಪ್ರಸ್ತುತ ಛತ್ತೀಸ್‌ಗಢದ ಬುಡಕಟ್ಟು ಸಮುದಾಯದ ಪ್ರಬಲ ನಾಯಕರಲ್ಲೊಬ್ಬರು. ಬಿಜೆಪಿ ನಾಯಕತ್ವ ಬುಡಕಟ್ಟು ಸಮುದಾಯವನ್ನು ಆದ್ಯತೆಯಾಗಿಸಿಕೊಂಡಿದ್ದು, ವಿಷ್ಣು ದೇವ್‌ ಅವರಿಗೆ ಪಟ್ಟ ಒಲಿದಿದೆ.

ಬುಡಕಟ್ಟು ಸಮುದಾಯದ ಮತಗಳೇ ನಿರ್ಣಾಯಕವಾಗಿದ್ದು, ಮತಗಳು ಪೂರ್ಣ ಪ್ರಮಾಣದಲ್ಲಿ ಬಿಜೆಪಿಯತ್ತ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಲೋಕಸಭಾ ಚುನಾವಣೆಯಲ್ಲೂ ರಾಷ್ಟ್ರ ಮಟ್ಟದಲ್ಲಿ ಬುಡಕಟ್ಟು ಸಮುದಾಯದ ಮತಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹುದ್ದೆ ನೀಡಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

ವಿಷ್ಣು ದೇವ ಸಾಯಿ ಅವರು ಕುಂಕುರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 87,604 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಿಜೆಪಿಯ ಮಾಜಿ ರಾಜ್ಯ ಮುಖ್ಯಸ್ಥರಾದ ದೇವ್ ಸಾಯಿ ಅವರು ಬುಡಕಟ್ಟು ಮುಖವನ್ನು ಆಯ್ಕೆ ಮಾಡಿದರೆ ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ಮೊದಲ ಆಯ್ಕೆಯಾಗುತ್ತಾರೆ ಎಂದು ಊಹಿಸಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ