Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದನಿಯಿಲ್ಲದವರಿಗೆ, ಶಕ್ತಿ ಯಿಲ್ಲವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿ: ವಕೀಲರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

 

ಮೈಸೂರು : ದನಿಯಿಲ್ಲದವರಿಗೆ, ಶಕ್ತಿ ಯಿಲ್ಲವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕೀಲರಿಗೆ ಕರೆ ನೀಡಿದರು.

ಅವರು ಇಂದು ಮೈಸೂರು ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

*ಮೈಸೂರು ಭಾಗದ ವಕೀಲರ ಕೊಡುಗೆ*
ಕಾನೂನನ್ನು ಗಂಭೀರವಾಗಿ ಪರಿಗಣಿಸದೆ ಇದ್ದುದರಿಂದ ಎರಡು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾದೆ. ಮೈಸೂರು ಭಾಗದ ಬಹುತೇಕ ವಕೀಲರು ನನ್ನ ಪರವಾಗಿ ಕೆಲಸ ಮಾಡಿದ್ದಾರೆ ಎಂದರು. ನಾನು ಗೆಲ್ಲಬೇಕೆಂದು ಶುಭ ಹಾರೈಸಿ, ದೇವರಲ್ಲಿ ಪ್ರಾರ್ಥನೆ ಮಾಡಿದವರು ಹಾಗೂ ನೇರವಾಗಿ ನನ್ನ ಪರವಾಗಿ ಕೆಲಸ ಮಾಡಿದವರು ಇದ್ದಾರೆ. ಈ ಬಾರಿ ಗೆಲ್ಲಲು ಮೈಸೂರು ಭಾಗದ ವಕೀಲರ ಕೊಡುಗೆ ಇದೆ ಎಂದರು.

*ಅವಕಾಶ ವಂಚಿತ ಜನರಿಗೆ ಅವಕಾಶ ದೊರೆತಾಗ ಸ್ವಾತಂತ್ರ್ಯ ಸಾರ್ಥಕ*
ಅವಕಾಶ ವಂಚಿತ ಜನರಿಗೆ ಅವಕಾಶ ದೊರೆತಾಗ ಮಾತ್ರ, ಸಾಮಾಜಿಕ, ಆರ್ಥಿಕ ಸಬಲತೆ ಬಂದಾಗ ಮಾತ್ರ ಸ್ವಾತಂತ್ರ್ಯ ದೊರೆತದ್ದಕ್ಕೆ ಸಾರ್ಥಕವಾಗುತ್ತದೆ. ಈ ದಿಕ್ಕಿನಲ್ಲಿ ಸ್ವಲ್ಪವಾದರೂ ಪ್ರಯತ್ನ ಮಾಡೋಣ ಎಂದು ನಾನು ರಾಜಕೀಯಕ್ಕೆ ಬಂದದ್ದು . ಮುಖ್ಯಮಂತ್ರಿಯಾಗುವ ಅವಕಾಶ ದೊರೆತಾಗ ಸಾಮಾಜಿಕ ನ್ಯಾಯ ದೊರಕುವಂತೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಐದು ಗ್ಯಾರಂಟಿಗಳನ್ನು ಮೂರು ತಿಂಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಕವಿ ದಿವಂಗತ ಸಿದ್ದಲಿಂಗಯ್ಯ ನವರು ಕವನಗಳ ಮೂಲಕ ಜನರನ್ನು ಜಾಗೃತಗೊಳಿಸುವ ಕೆಲಸ ಮಾಡಿದ್ದಾರೆ. ಯಾರಿಗೆ ಬಂತು ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದ್ದಾರೆ. ಸ್ವಾತಂತ್ರ್ಯ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಬಂದಾಗ ಮಾತ್ರ ನಿಜವಾಗಿಯೂ ಸ್ವಾತಂತ್ರ್ಯ ದೊರೆತಂತಾಗುತ್ತದೆ. ಅದಾನಿ ಅಂಬಾನಿಗಳಿಗೆ ಬಂದಿರುವ ಸ್ವಾತಂತ್ರ್ಯ ಕಾಳ, ಬೋರ, ತಿಮ್ಮನಿಗೂ ಬಂದರೆ ದೇಶಕ್ಕೆ ಸ್ವಾ5 ಬಂದಂತೆ. ಕೊಂಡುಕೊಳ್ಳುವ ಸಾಮರ್ಥ್ಯ ಎಲ್ಲರಿಗೂ ಬಂದಾಗ ಮಾತ್ರ ದೇಶಕ್ಕೆ ಸ್ವಾತಂತ್ರ್ಯ ದೊರೆತಂತಾಗುವುದು ಎಂದರು.

*ಸಾಮಾಜಿಕ ನ್ಯಾಯ ದೊರಕಿಸಲು ಗಟ್ಟಿ ಹೆಜ್ಜೆ*
ನಾಳೆ 1.28 ಕೋಟಿ ಕುಟುಂಬಗಳ ಮನೆಯ ಯಜಮಾನಿಯರಿಗೆ 2000 ರೂ.ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಯಾಗುತ್ತಿದೆ. ಇದರಿಂದ ಬಡವರಿಗೆ ಬೆಲೆಯೇರಿಕೆಯ ಬಿಸಿಯಿಂದ ಸ್ವಲ್ಪವಾದರೂ ಸಹಾಯ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಆ ಮೂಲಕ ಸಾಮಾಜಿಕ ನ್ಯಾಯ ದೊರಕಿಸಲು ಗಟ್ಟಿಯಾದ ಹೆಜ್ಜೆಗಳನ್ನು ಇಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ರಾಜಕೀಯಕ್ಕೆ ಬಂದು ಮಂತ್ರಿಯಾಗಿ, ವಿರೋಧ ಪಕ್ಷದ ನಾಯಕನಾಗಿ, ಮುಖ್ಯಮಂತ್ರಿಯಾಗಿ ನ್ಯಾಯ ದೊರಕದ ಜನರ ಧ್ವನಿಯಾಗಿ , ಕೆಲಸ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದರು.

*ಹೆಚ್.ಗಂಗಾಧರನ್ ಚಿತ್ರವನ್ನು ಅನಾವರಣ*
ಹೆಚ್.ಗಂಗಾಧರನ್ ಅವರ ಚಿತ್ರವನ್ನು ಅನಾವರಣ ಮಾಡಿದ್ದು,ಅವರು ರಾಜಕಾರಣದಲ್ಲಿದ್ದು ಹಾಗೂ ಸ್ವಲ್ಪ ಕಾಲ ವಕೀಲರಾಗಿಯೂ ಕೆಲಸ ಮಾಡಿದ್ದರು. ಒಳ್ಳೆಯ ವ್ಯಕ್ತಿಯಾಗಿದ್ದ ಅವರು ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು. ಶಾಸಕರಾಗಿದ್ದ ಸಂದರ್ಭದಲ್ಲಿ ಒಟ್ಟಿಗೆ ಆಯ್ಕೆಯಾಗಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅವರ ಚಿತ್ರವನ್ನು ಅನಾವರಣ ಮಾಡಿರುವುದು ಉತ್ತಮ ಕೆಲಸ ಎಂದರು. ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ