Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರಕಾರದ ಯೋಜನೆಗಳ ಸದುಪಯೋಗ ನಾಗರಿಕರಿಗೆ ಸಿಗಬೇಕು

ಬೆಳಗಾವಿ : ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರು ಪ್ರತಿ ವರ್ಷ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಖಾನಾಪುರ ಶಾಂತಿನಿಕೇತನ ಶಾಲೆಯ ಸಭಾಗೃಹದಲ್ಲಿ ಮಂಗಳವಾರ ಕ್ಷೇತ್ರದ ಶಾಸಕ ವಿಠ್ಠಲ ಹಲಗೇಕರ ಅವರ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಮತ್ತು ಚಕ್ಕಡಿ ಓಡಿಸುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ರೈತರು, ಜನಸಾಮಾನ್ಯರು ಹಾಗೂ ಆರ್ಥಿಕವಾಗಿ ಹಿಂದುಳಿದವರನ್ನು ಪ್ರತಿನಿಧಿಸುತ್ತಿರುವ ವಿಠ್ಠಲ ಹಲಗೇಕರ ಅವರು ಈ ಭಾಗದ ಜನರ ಉಜ್ವಲ ಭವಿಷ್ಯಕ್ಕಾಗಿ ಅವಿತರವಾಗಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಶಾಸಕರಾಗುವ ಪೂರ್ವದಲ್ಲೇ ಹಲವು ವರ್ಷಗಳಿಂದ ಸಹಕಾರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿ ಅನುಭವ ಹೊಂದಿದ್ದಾರೆ. ಇಂತಹ ದೂರದೃಷ್ಟಿಯ ನಾಯಕನ ಅಲ್ಪಾವಧಿ ರಾಜಕೀಯ ಪಯಣದಲ್ಲಿ ಕ್ಷೇತ್ರ ಬಹಳಷ್ಟು ಸುಧಾರಣೆ ಕಂಡಿದೆ. ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ನಿಟ್ಟಿನಲ್ಲಿ ತಮ್ಮ ಜನ್ಮದಿನದ ನಿಮಿತ್ತ ಕೃಷಿ ವಸ್ತು ಪ್ರದರ್ಶನ ಮತ್ತು ಸರ್ಕಾರಿ ಯೋಜನೆಗಳ ಮಾಹಿತಿ ಶಿಬಿರ ಆಯೋಜಿಸಿರುವುದು ವಿಠ್ಠಲ ಹಲಗೇಕರ ಅವರ ಜನಪರ ಕಾಳಜಿ ತೋರ್ಪಡಿಸುತ್ತಿದೆ. ಮುಂಬರುವ ದಿನಗಳಲ್ಲಿ ಕೇಂದ್ರದ ವಿವಿಧ ಯೋಜನೆಗಳ ಮೂಲಕ ಖಾನಾಪುರ
ತಾಲೂಕಿನಲ್ಲಿ ವಿಶೇಷ ಕಾಮಗಾರಿ ಆರಂಭಿಸುವ ಇರಾದೆ ಹೊಂದಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಈ ಭಾಗದ ಅಭಿವದ್ಧಿ ಹಾಗೂ ಕೃಷಿ ಹಾಗೂ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಅನುಷ್ಠಾನಕ್ಕೆ ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ಸರಳ ಜೀವಿ ವಿಠ್ಠಲ ಹಲಗೇಕರ ಅವರು ದೀನದಲಿತರು, ದುರ್ಬಲರು ಮತ್ತು ಅಸಂಘಟಿತರ ಪಾಲಿನ ಆಶಾಕಿರಣವಾಗಿ ಕ್ಷೇತ್ರದ ಜನರ ವಿಶ್ವಾಸ ಗಳಿಸಿದ್ದಾರೆ. ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಯೊಂದಿಗೆ ಸಹಕಾರಿ ಕ್ಷೇತ್ರವನ್ನು ಸುಧಾರಿಸುವತ್ತ ಶ್ರಮ ವಹಿಸಿದ್ದಾರೆ. ಕೈಗಾರಿಕೆ, ತಂತ್ರಜ್ಞಾನ, ಉನ್ನತ ಶಿಕ್ಷಣ ಸೇರಿದಂತೆ ಭವಿಷ್ಯದಲ್ಲಿ ರೈತರ ಮತ್ತು ನಿರುದ್ಯೋಗಿಗಳ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತಿದ್ದಾರೆ. ಮುಚ್ಚಿದ್ದ ಕಾರ್ಖಾನೆ ಆರಂಭಕ್ಕೆ ಅವರು ಕೈಗೊಂಡ ಕ್ರಮಗಳು ಶ್ಲಾಘನೀಯ ಎಂದು ಬಣ್ಣಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಪೋಷಣ ಅಭಿಯಾನದಡಿ ಗರ್ಭಿಣಿಯರ ಸೀಮಂತ, ಚಿಕ್ಕಮಕ್ಕಳ
ಅನ್ನಪ್ರಾಶನ ಹಾಗೂ ಸುಕನ್ಯಾ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪಾಸ್ ಬುಕ್ ವಿತರಣೆ ಕಾರ್ಯಕ್ರಮ ಜರುಗಿತು. ಶಾಸಕರ ಪತ್ನಿ ರುಕ್ಕಿಣಿ ಹಲಗೇಕರ ಅವರು ಗರ್ಭಿಣಿಯರ ಸೀಮಂತ ಶಾಸ್ತ್ರ ನೆರವೇರಿಸಿದರು.
ಮಾಜಿ ಶಾಸಕರಾದ ಅರವಿಂದ ಪಾಟೀಲ, ಸಂಜಯ ಪಾಟೀಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೋಚೇರಿ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಅವರೊಳ್ಳಿ-ಬೆಳಕಿಯ ಚನ್ನಬಸವ ದೇವರು, ಹಂಡಿ ಭಡಂಗನಾಥ ಮಠದ
ಮಂಗಳನಾಥ ಸ್ವಾಮಿ, ತೋವಿನಕಟ್ಟಿ ಸಿದ್ಧಾರೂಢ ಮಠದರಾಮದಾಸ ಸ್ವಾಮೀಜಿ, ಧನಶ್ರೀದೇಸಾಯಿ, ಬಸವರಾಜ ಸಾಣಿಕೊಪ್ಪ ಮತ್ತಿತರರು ಉಪಸ್ಥಿತರಿದ್ದರು. ಲೈಲಾ ಶುಗರ್ಸ್ ಎಂಡಿ ಸದಾನಂದ ಪಾಟೀಲ ಸ್ವಾಗತಿಸಿದರು.ಮಲ್ಲಪ್ಪ ಮಾರಿಹಾಳ ನಿರೂಪಿಸಿದರು. ತುಕಾರಾಮ ಹುಂದರೆ ವಂದಿಸಿದರು.

ಎತ್ತಿನಗಾಡಿ ಸ್ಪರ್ಧೆ ಉದ್ಘಾಟನೆ: ಶಾಸಕರ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಶಾಸಕ ವಿಶ್ವಲ ಹಲಗೇಕರ ಇತರರು ಉದ್ಘಾಟಿಸಿದರು.

ಆರೋಗ್ಯ ಶಿಬಿರ: ಶಾಸಕರ ಜನ್ಮದಿನದ ನಿಮಿತ್ತ
ಶಾಂತಿನಿಕೇತನ ಶಾಲಾ ಆವರಣದಲ್ಲಿ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು. ಖಾನಾಪುರದ ಸರ್ಕಾರಿ ಆಸ್ಪತ್ರೆ ಹಾಗೂ ಕೆಎಲ್‌ಇ ಸೆಂಟಿನರಿ ಆಸ್ಪತ್ರೆಗಳು ಆಶ್ರಯದಲ್ಲಿ ಆಯೋಜಿಸಿದ್ದ ಆರೋಗ್ಯ ಶಿಬಿರದಲ್ಲಿ 500ಕ್ಕೂ ಅಧಿಕ ನಾಗರಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರಕ್ತದಾನ ಶಿಬಿರದಲ್ಲಿ 200ಕ್ಕೂ ಅಧಿಕ ಜನರು ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ