Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಿರಸಿಯಲ್ಲಿ ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ

ಶಿರಸಿ:
ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಶಿರಸಿಗೆ ಭಾನುವಾರ ಭೇಟಿ ನೀಡಿದ ವೇಳೆ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಇದಕ್ಕಾಗಿ ಅನುದಾನ ಮೀಸಲಿಡಲಾಗುವುದು. ಈಗಾಗಲೇ ತೋಟಗಾರಿಕೆ, ಅರಣ್ಯ ಕಾಲೇಜು ಶಿರಸಿಯಲ್ಲಿದೆ. ಇವುಗಳನ್ನು ವಿಲೀನಗೊಳಿಸಿ ವನ್ಯಜೀವಿ ರಕ್ಷಣೆ, ಪರಿಸರ ಸಂರಕ್ಷಣೆ, ಕೃಷಿ ಸೇರಿದಂತೆ ಪರಿಸರ ಪೂರಕ ಅಧ್ಯಯನಗಳಿಗೆ ಅನುಕೂಲವಾಗಲು ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದಲ್ಲಿ ಭೂಕುಸಿತ ಉಂಟಾಗದಂತೆ ಕ್ರಮಕೈಗೊಳ್ಳಲಾಗುವುದು. ಪುನರ್ವಸತಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದು ಅವರು ಭರವಸೆ ನೀಡಿದರು.

 

 

ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳು ಭಯಪಡುವ ಅಗತ್ಯವಿಲ್ಲ. ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕೆಂಬ ಮನವಿ ಮಾಡಲಾಗಿದೆ. ಅರಣ್ಯ ವಾಸಿಗಳಿಗೆ ಜೀವನಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಅರಣ್ಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುವುದಿಲ್ಲ.ಅರಣ್ಯವಾಸಿಗಳು ತಲೆತಲಾಂತರದಿಂದ ಅಲ್ಲಿ ಜೀವನ ಮಾಡುತ್ತಿದ್ದಾರೆ. ಅದಕ್ಕಾಗಿ ಈಗ ಸರ್ಕಾರ ಮೂರು ತಲೆಮಾರುಗಳ ಬದಲು ಒಂದು ತಲೆಮಾರಿನ ಬಗ್ಗೆ ಮಾಹಿತಿ ಪಡೆದು ಹಕ್ಕುಪತ್ರ ನೀಡಲು ಚಿಂತನೆ ನಡೆಸಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಅಭಿಪ್ರಾಯಗಳನ್ನು ಸುಪ್ರೀಂ ಕೋರ್ಟಿಗೆ ತಿಳಿಸಲಾಗಿದೆ ಸುಪ್ರಿಂಕೋರ್ಟ್ ನಿರ್ಣಯ ಬರುವವರೆಗೂ ಅತಿಕ್ರಮಣದಾರರಿಗೆ ಯಾವುದೇ ತೊಂದರೆ ನೀಡದಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಎಂದು ತಿಳಿಸಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಮ ಹೆಬ್ಬಾರ, ಕೋಟ ಶ್ರೀನಿವಾಸ ಪೂಜಾರಿ, ಸಿ.ಸಿ.ಪಾಟೀಲ ಮೊದಲಾದವರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ