Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ  ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ  ಸೇವೆಗೆ ಸಿಎಂ ಡಿ.ಕೆ.ಶಿವಕುಮಾರ್  ಚಾಲನೆ

ಬೆಂಗಳೂರು :

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ  "ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ" ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ  ಚಾಲನೆ ನೀಡಿದರು. 

ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್ ಸೈಟ್  ಹಾಗೂ ವಾಟ್ಸ್ ಆ್ಯಪ್ ಸೇವೆಗೆ ಚಾಲನೆ ನೀಡಿದರು. 

ಕರ್ನಾಟಕ ರಾಜ್ಯ  ಬದುಕು ಕಟ್ಟಿಕೊಳ್ಳುವವ ಪ್ರತಿಯೊಬ್ಬರಿಗೂ  ಮೂಲ ಸೌಕರ್ಯ ಒದಗಿಸಿಕೊಟ್ಟು ಅವರ ಹಕ್ಕು ಸಂರಕ್ಷಿಸಲು ಸದಾ ಮುಂಚೂಣಿಯಲ್ಲಿರುವ ರಾಜ್ಯ. ಎಸ್ ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮನೆ ಬಾಗಿಲಿಗೆ ಪಹಣಿ ನೀಡುವ  ಮೂಲಕ ಹೊಸ ಹೆಜ್ಜೆ ಇಟ್ಟಿತ್ತು. ನಾನು ಮುಖ್ಯಮಂತ್ರಿಯಾಗುವ ಮುನ್ನ ಹಾಗೂ ನಂತರವೂ "ನಿಮ್ಮ ಮತ ನಿಮ್ಮ ಹಕ್ಕು," ನಿಮ್ಮ ಮತ-  ನಿಮ್ಮ ಬದುಕು" ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ ಎನ್ನುವುದು ನಮ್ಮ ಮಂತ್ರ  ಹಾಗೂ ತತ್ವವಾಗಿದೆ ಎಂದರು. 

ಭಾರತದಲ್ಲಿಯೇ ಶಾಶ್ವತವಾದ ಪ್ರಮಾಣ ಪತ್ರವನ್ನು ಉಚಿತವಾಗಿ ಮನೆ ಮನೆಗೆ ತೆರಳಿ ಪ್ರಮಾಣ ಪತ್ರವನ್ನು ನೀಡಲಾಗುವ ಐತಿಹಾಸಿಕ  ಅಭಿಯಾನವನ್ನು  ಸರ್ಕಾರ ಕೈಗೊಂಡಿದೆ. ಮತದಾರರ ಪಟ್ಟಿಗೆ ಸೇರಲು ಚುನಾವಣಾ ಆಯೋಗ ಸೂಚಿಸಿರುವ 11 ದಾಖಲೆಗಳಲ್ಲಿ ಒಂದಾದ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವ ಐತಿಹಾಸಿಕ ಕಾರ್ಯಕ್ರಮವನ್ನು ಕೈಗೊಂಡಿದೆ ಎಂದರು.

ದೇಶದಲ್ಲಿಯೇ 4.85 ಕೋಟಿ ಕುಟುಂಬಗಳಿಗೆ ಈ ದಾಖಲೆ ಮನೆಗೆ ತಲುಪಿಸುವ ಕಾರ್ಯ ಕೈಗೊಂಡ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎನ್ನುವುದು ನಮ್ಮ ಹೆಮ್ಮೆ  ಎಂದರು. 
ಚುನಾವಣಾ ಆಯೋಗ ಸೂಚಿಸಿರುವ ಕ್ರಮಗಳನ್ನು ಚಾಚೂ ತಪ್ಪದೆ ಸರ್ಕಾರ  ಪಾಲಿಸುತ್ತಿದೆ.  ರಾಜ್ಯದ ನಿವಾಸಿಗಳಿಗೆ ಅಗತ್ಯವಿರುವ ಪ್ರಮಾಣಪತ್ರಗಳನ್ನು ನೀಡುವುದು ರಾಜ್ಯ ಸರ್ಕಾರದ ಹೊಣೆಗಾರಿಕೆ. ಇದನ್ನು ಪಕ್ಷಾತೀತವಾಗಿ ನಾವು ಜವಾಬ್ದಾರಿಯಿಂದ ಕೈಗೊಂಡಿದ್ದೇವೆ ಎಂದರು.

ಸರ್ಕಾರ  ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರುವವರಿದ್ದು,  ಆದರೆ  ಜನರಿಗೆ ನೆರವಾಗುವುದು  ಸರ್ಕಾರದ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಅರ್ಜಿಗಳನ್ನು ಆನ್ ಲೈನ್ ಮೂಲಕ, ಸೇವಾ ಕೇಂದ್ರಗಳಲ್ಲಿ, ಹೋಬಳಿ ಮಟ್ಟದಲ್ಲಿ ತೆರೆಯಲಾಗಿರುವ facilitation centre ಗಳಲ್ಲಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ನನ್ನ ಮತ್ತು ಉಪಮುಖ್ಯಮಂತ್ರಿಗಳ ಭಾವಚಿತ್ರವಿರುವ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ.  BLO ಗಳು ನೀಡುವ ಅರ್ಜಿಗಳನ್ನು ಭರ್ತಿ  ಮಾಡಿ ಅವರಿಗೆ  ತಲುಪಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಕಳೆದುಕೊಂಡರೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.  ಐದು ಗ್ಯಾರಂಟಿಗಳ ಜೊತೆ ಭೂಮಿ ಗ್ಯಾರಂಟಿಯನ್ನೂ ನೀಡುತ್ತಿದ್ದು, ಇದರ  ಜೊತೆಗೆ ರಾಜ್ಯದಲ್ಲಿ  ವಿಶೇಷ ಆಂದೋಲನವನ್ನು ಸರ್ಕಾರ ಕೈಗೊಂಡು ಮತದಾನದ  ಗ್ಯಾರಂಟಿಯನ್ನು ಜಾರಿಗೊಳಿಸಿದ್ದೇವೆ.

ಜನರ ಬದುಕು, ಗುರುತು  ಬಹಳ ಮುಖ್ಯ. ಗುರುತಿದ್ದಲ್ಲಿ ಬದುಕು ಇದೆ.  ಅದರಲ್ಲಿ ಶಕ್ತಿ ಇದ್ದು, ಮುಂದಿನ ದಿನಗಳಲ್ಲಿ ಅವರ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಇದು ಅತ್ಯಗತ್ಯ ಎಂದರು. 

ಆಡಳಿತ ವ್ಯವಸ್ಥೆಯಲ್ಲಿಯೇ ಕರ್ನಾಟಕ ಸರ್ಕಾರ ಕೈಗೊಂಡಿರುವ  ಐತಿಹಾಸಿಕ ಹೆಜ್ಜೆ:
ಜನರ ಬದುಕಿಗೆ  ನೇರವಾಗಿ ಸಹಾಯ ಮಾಡುವುದು ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಯಲ್ಲಿಯೇ ಕರ್ನಾಟಕ ಸರ್ಕಾರ ಕೈಗೊಂಡಿರುವ  ಐತಿಹಾಸಿಕ ಹೆಜ್ಜೆ ಇದಾಗಿದೆ ಎಂದು ಸಿಎಂ ಬಣ್ಣಿಸಿದರು. 

ಜನರು ಯಾವುದೇ ಕಾರಣಕ್ಕೂ ತಮ್ಮ ಹಕ್ಕುಗಳಿಂದ ವಂಚಿತರಾಗಬಾರದು: 
ಅಭಿಯಾನದ ಮೂಲಕ ಜನರ ಸೌಲಭ್ಯಗಳನ್ನು ನೇರವಾಗಿ ಮನೆಬಾಗಿಲಿಗೆ ತಲುಪಿಸಲಾಗುತ್ತಿದೆ. ಸರ್ಕಾರ ಮತ್ತು ಜನರ ನಡುವಿನ ಅಂತರ ನಿವಾರಣೆಯಾಗಬೇಕು ಎನ್ನುವ ದೃಷ್ಟಿಯಿಂದ ಹಾಗು ಜನರು ಸರ್ಕಾರಿ ಕಚೇರಿಗಳಿಗೆ  ಅಲೆಯಬಾರದು ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಂಡಿದೆ ಎಂದರು.

ರಾಜಕಾರಣ ಮುಖ್ಯವಲ್ಲ, ಜನರ ಬದುಕು ಹಾಗೂ ಹಕ್ಕು ಮುಖ್ಯ:

ಈ ಸೌಲಭ್ಯವನ್ನು ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ  ಗ್ರಾಮ ಲೆಕ್ಕಿಗರು ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಶ್ರಮ ಅಭಿನಂದನೀಯ ಎಂದು ಮುಖ್ಯಮಂತ್ರಿಗಳು ಜನರು  ಶಾಶ್ವತ ಸಾಕ್ಷಿ ಪತ್ರವನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ಶಾಸಕಾಂಗದಲ್ಲಿ  ನಿಯಮಗಳನ್ನು ರೂಪಿಸಿದರೂ, ಅದನ್ನು ಕಾರ್ಯಾಂಗ ನಿಷ್ಠೆಯಿಂದ ಅನುಷ್ಠಾನಗೊಳಿಸಿದಾಗ ಮಾತ್ರ  ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ ಎಂದರು. 

ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮನೀಶ್ ಮೌದ್ಗಿಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!