Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಪಹಾರಕೂಟದಲ್ಲೇ ರಾಜೀನಾಮೆ ಸುಳಿವು ನೀಡಿದ ಸಿಎಂ : ಸಹೋದ್ಯೋಗಿಗಳ ಸಮ್ಮುಖದಲ್ಲೇ ರಾಜೀನಾಮೆ  ಘೋಷಿಸಿದ ಸಿದ್ದರಾಮಯ್ಯ..!

Advertisement

ಬೆಂಗಳೂರು: ಕಳೆದ ಕೆಲ ತಿಂಗಳುಗಳಿಂದ ಹರಿದಾಡುತ್ತಿದ್ದ ಸುದ್ದಿ ಈಗ ನಿಜವಾಗುವ ಸಮಯ ಹತ್ತಿರವಾಗಿದೆ. ಸಿದ್ದರಾಮಯ್ಯ ಅವರ ಪಾಲಿಗೆ ಗುರುವಾರ ಮುಖ್ಯಮಂತ್ರಿ ಹುದ್ದೆ ಕೊನೆಯ ದಿನವಾಗುವ ಸುಳಿವು ದೊರೆತಿದೆ. ಸಚಿವ ಸಂಪುಟದ ಸಹೋದ್ಯೋಗಿಗಳ ಎದುರು ಅವರು ತಾವು ಹುದ್ದೆಯಿಂದ ನಿರ್ಗಮಿಸುವುದಾಗಿ ತಿಳಿಸಿದ್ದು ಕೆಲವೇ ಗಂಟೆಗಳಲ್ಲಿ ಅವರು ಸ್ಥಾನ ತ್ಯಜಿಸುವುದು ಖಚಿತವಾಗಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಗುರುವಾರ ಕಾವೇರಿ ನಿವಾಸದಲ್ಲಿ ಆಯೋಜಿಸಿದ್ದ ಉಪಹಾರ ಕೂಟದ ಸಭೆಯಲ್ಲಿ  ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವರು, ಶಾಸಕರ ಸಮ್ಮುಖದಲ್ಲಿ ಘೋಷಿಸಿದ್ದಾರೆಂದು ಮಾಧ್ಯಮಗಳ ವರದಿ ತಿಳಿಸಿದೆ.

ನವದೆಹಲಿಯ ಇಂದಿರಾ ಭವನದಲ್ಲಿ ನಡೆದ ಪಕ್ಷದ ಹೈಕಮಾಂಡ್‌ ಸಭೆಯಲ್ಲಿ ನೀಡಿರುವ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯನವರು ಸಚಿವರಿಗೆ ಮನವರಿಕೆ ಮಾಡಿದ್ದಾರೆನ್ನಲಾಗಿದೆ.

ಕಳೆದ ಮೂರು ವರ್ಷಗಳ ಕಾಲ ನನಗೆ ಸಹಕಾರ ನೀಡಿದ್ದೀರಿ. ನಮ್ಮ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಹೊಣೆಗಾರಿಕೆ ನಿಮ್ಮದಾಗಿದೆ. ಮುಂದಿನ ನಿರ್ಣಯಗಳನ್ನು ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದು, ಸಚಿವರು, ಶಾಸಕರಿಗೆ ಅಭಿನಂದನೆ ಸಲ್ಲಿಸಿರುವುದಾಗಿ ವರದಿ ವಿವರಿಸಿದೆ.‌

ಸಿದ್ದರಾಮಯ್ಯನವರ ರಾಜೀನಾಮೆ ಘೋಷಣೆ ಮೂಲಕ ಕಳೆದ ಎರಡು ದಿನಗಳಿಂದ ರಾಜ್ಯರಾಜಕಾರಣದಲ್ಲಿ ನಡೆಯುತ್ತಿದ್ದ ಗೊಂದಲಗಳಿಗೆ ತೆರೆ ಬಿದ್ದಿದೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಹುದ್ದೆಗೇರುವ ಹಾದಿ ಸುಗಮವಾದಂತಾಗಿದೆ.

ಸಿಎಂ ಕಾಲಿಗೆ ಬಿದ್ದ ಡಿಕೆಶಿ:

ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿದ್ದ ಉಪಹಾರ ಕೂಟಕ್ಕೆ ಆಗಮಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯನವರನ್ನು ಆಲಂಗಿಸಿ, ನಂತರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಸಿದ್ದರಾಮಯ್ಯನವರು ಅಭಿನಂದನೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯರಿದ್ದಾರೆ...ಏನಿದರ ಅರ್ಥ ?ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತುಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?ಜಿಂಕೆಯನ್ನೇ ನುಂಗಿದ ಹೆಬ್ಬಾವು !ಪುಸ್ತಕ ಅವಲೋಕನ ಕಾರ್ಯಕ್ರಮಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..! ಶತಮಾನದ ಇತಿಹಾಸ ಹೊಂದಿದೆ ಈ ಪ್ರತಿಷ್ಠಿತ ಶಾಲೆಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!