Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾನೂನಿಗೆ ಸಂಬಂಧಿಸಿದ ಕನ್ನಡ ನಿಘಂಟು ತಯಾರಿಸಲು ಸಿಎಂ ಸೂಚನೆ

 

ಬೆಂಗಳೂರು:
ನ್ಯಾಯಾಂಗ ಹಾಗೂ ಕಾನೂನಿಗೆ ಸಂಬಂಧಿಸಿದ ಎಲ್ಲ ಪಾರಿಭಾಷಿಕ ಪದಗಳನ್ನು ಒಳಗೊಂಡ ಕನ್ನಡ‌ ನಿಘಂಟು ರೂಪಿಸುವುದು ಹಾಗೂ ನ್ಯಾಯಾಲಯಗಳ ತೀರ್ಪುಗಳನ್ನು ಕನ್ನಡಕ್ಕೆ ತರ್ಜುಮೆ ಮಾಡುವ ಕೆಲಸ ಆರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಕನ್ನಡದಲ್ಲಿ ತೀರ್ಮಾನ ನೀಡಿದ ನ್ಯಾಯಾಧೀಶರು, ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಗಳು ಹಾಗೂ ವಕೀಲರಿಗೆ 'ನ್ಯಾಯಾಂಗದಲ್ಲಿ ಕನ್ನಡ ಪ್ರಶಸ್ತಿ' ಪ್ರದಾನ ಮಾಡಿ ಅವರು ಮಾತನಾಡಿದರು.

ನ್ಯಾಯಾಂಗದಲ್ಲಿ ಕನ್ನಡ ಬಳಕೆಗೆ ಹಲವು ಮಿತಿಗಳಿವೆ.‌ ಅವುಗಳನ್ನು ಮೀರಿ ಕನ್ನಡ ಬಳಸಬೇಕಾದರೆ ಕನ್ನಡದ ನಿಘಂಟು ಅಗತ್ಯ. ನ್ಯಾಯಾಲಯಗಳ ತೀರ್ಪು ಮತ್ತು ಆದೇಶಗಳನ್ನು ಜನರು ಅರ್ಥ ಮಾಡಿಕೊಳ್ಳಬೇಕಾದರೆ ಅವುಗಳನ್ನು ಆನ್ಲೈನ್ ನಲ್ಲಿ ಪ್ರಕಟಿಸಬೇಕು.‌ ಈ ಕೆಲಸವನ್ನು ಪ್ರಾಧಿಕಾರ ಮಾಡಬೇಕು ಎಂದರು.

ಪ್ರಕರಣವೊಂದರಲ್ಲಿ ನ್ಯಾಯಾಲಯದ ತೀರ್ಮಾನ ಬರುವುದಷ್ಟೇ ಮುಖ್ಯವಲ್ಲ. ಆ ತೀರ್ಮಾನದ ಸರಿಯಾದ ವ್ಯಾಖ್ಯಾನ ಮತ್ತು ಅನುಷ್ಠಾನ ಅಗತ್ಯ. ಕೆಲವೊಮ್ಮೆ‌ ಅಧಿಕಾರಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ನ್ಯಾಯಾಲಯದ ತೀರ್ಮಾನವನ್ನು ವ್ಯಾಖ್ಯಾನ ಮಾಡುತ್ತಾರೆ. ಇಂತಹ ಅಪಾಯ ತಡೆಯಬೇಕಾದರೆ ಆಡಳಿತ ನಡೆಸುವವರಿಗೆ ಕಾನೂನಿನ ಜ್ಞಾನ ಇರಬೇಕಾಗುತ್ತದೆ ಎಂದು ಹೇಳಿದರು.

ಹೈಕೋರ್ಟ್ ನ್ಯಾಯಮೂರ್ತಿ ಜಿ.‌ ನರೇಂದರ್ ಮಾತನಾಡಿ, 'ನ್ಯಾಯಾಂಗದಲ್ಲಿ ಕನ್ನಡದ‌ ಬಳಕೆಯಿಂದ ಜನಸಾಮಾನ್ಯರಲ್ಲಿ ಕಾನೂನಿನ ಅರಿವು ಮೂಡುತ್ತದೆ.‌ ಕಾನೂನು ಉಲ್ಲಂಘನೆ ಮತ್ತು ಅಪರಾಧಗಳು ತಗ್ಗುತ್ತವೆ' ಎಂದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.‌ಸುನಿಲ್ ಕುಮಾರ್, ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್. ಮಂಜುಳಾ, ವಿಶ್ರಾಂತ ಕುಲಪತಿ ಮಲ್ಲೇಪುರಂ‌ ಜಿ. ವೆಂಕಟೇಶ್, ಕನ್ನಡ‌ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ