Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಸದೀಯ ಭಾಷೆ ಕಲಿತು ವಿಷಯ ತಜ್ಞರಾಗಿ: ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

 

ಬೆಂಗಳೂರು:
ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಿ. ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಅದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡರೆ ಜನರ ಸಮಸ್ಯೆಗಳನ್ನು ನಿಯಮಬದ್ದವಾಗಿ ಸದನದ ಮುಂದೆ ಮಂಡಿಸಬಹುದು ಎಂದರು.
ಸಂವಿಧಾನಕ್ಕೆ ವಿರುದ್ಧವಾದ ಕಾನೂನು-ಕಾಯ್ದೆಗಳನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಂವಿಧಾನದ ಓದು ಅತ್ಯಗತ್ಯ ಎಂದರು.
ಬಸವಣ್ಣನವರ ಬಜೆಟ್
ಶಾಸಕರು ಸಂಸದರು ಬಜೆಟ್ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೇ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್ ಬಗ್ಗೆ ಹೇಳಿದ್ದಾರೆ. ಕಾಯಕ ಮತ್ತು ದಾಸೋಹ ಬಜೆಟ್ ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ. ಬಜೆಟ್ ಅಂದರೆ ಇಷ್ಟೆ, ಎಲ್ಲಿಂದ ಉತ್ಪಾದನೆ ಬರುತ್ತದೆ ಅದನ್ನು ಸಮಾಜದ ಯಾರಿಗೆ ಹಂಚುತ್ತೇವೆ ಎನ್ನುವುದೇ ಬಜೆಟ್ ನ ಮೌಲ್ಯ ಎಂದು ವಿವರಿಸಿದರು.
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಉಪಸ್ಥಿತರಿದ್ದರು. ನೂರು ಕುರಿ ಎಣಿಸಕ್ಕೆ ಬಾರದವನು
ನಾನು ಮೊದಲ ಬಾರಿ ಹಣಕಾಸು ಸಚಿವನಾದಾಗ “ನೂರು ಕುರಿ ಎಣಿಸಲು ಬಾರದವನು ಬಜೆಟ್ ಹೇಗೆ ಮಾಡ್ತಾರೆ?” ಎಂದು ಪತ್ರಿಕೆಯೊಂದು ಟೀಕಿಸಿತ್ತು. ಟೀಕೆಯನ್ನು ನಾನು ಸವಾಲಾಗಿ ಸ್ವೀಕರಿಸಿ ನಿರಂತರ ವಿಷಯ ತಜ್ಞರ ಜತೆ ಚರ್ಚಿಸಿ ಬಜೆಟ್ ಮಂಡಿಸಿದೆ. ಮರುದಿನ “THE HINDU” ಪತ್ರಿಕೆ ನನ್ನ ಬಜೆಟ್ ಅನ್ನು ಅತ್ಯುತ್ತಮ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಹೀಗಾಗಿ ಜ್ಞಾನ ದಾಹ ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಳ್ಳಿ ಎಂದು ತಮ್ಮದೇ ಉದಾಹರಣೆ ಮೂಲಕ ಶಾಸಕರಿಗೆ ತಿಳಿ ಹೇಳಿದರು.
ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಈಶ್ವರಪ್ಪ ಶಾಸಕರಾಗಲು ಸಾಧ್ಯವಿರಲಿಲ್ಲ. ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ಸಂವಿಧಾನದ ಮೌಲ್ಯ ಅರಿತುಕೊಳ್ಳಿ ಎಂದು ಮುಖ್ಯಮಂತ್ರಿ ಮನವರಿಕೆ ಮಾಡಿಸಿದರು.
ವಾಟಾಳ್ ಮಾಡೆಲ್
ವಾಟಾಳ್ ನಾಗರಾಜ್ ಅವರು ಒಬ್ಬ ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಇದನ್ನು ಪ್ರತಿಯೊಬ್ಬರೂ ಪಾಲಿಸಿ ಎಂದು ಸೂಚಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ