Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದಿಢೀರ್ ಹೆಚ್ಚಾಯ್ತು ಕೊರೊನಾ !

 

ದೆಹಲಿ :
ವಿಶ್ವದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಭಾರತಕ್ಕೆ ನಾಲ್ಕನೇ ಅಲೆಯ ಭೀತಿ ಎದುರಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ.

ಆದ್ದರಿಂದ ಕೊರೊನಾ ವೈರಸ್ ನ್ನು ಹೇಗೆ ಎದುರಿಸಬೇಕು ಎಂಬ ಕುರಿತು ಕೇಂದ್ರ ಆರೋಗ್ಯ ಸಚಿವ ಮಾನ್ಸುಕ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ವೈದ್ಯಕೀಯ ತಜ್ಞರು ಭಾಗವಹಿಸಲಿದ್ದಾರೆ. ಕೊರೋನಾ ತವರು ಎನಿಸಿಕೊಂಡಿರುವ ಚೀನಾದಲ್ಲಿ ಕೊರೊನಾ ಸೊಂಕು ಮತ್ತೆ ವ್ಯಾಪಕವಾಗಿದೆ.

ಇದರ ಪರಿಣಾಮ ವಿಶ್ವದ ಇತರ ದೇಶಗಳ ಮೇಲು ಆಗಲಿದೆ ಎಂದು ತಜ್ಞರು ಊಹಿಸಿದ್ದಾರೆ. ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್, ಔಷಧಿ, ಆಮ್ಲಜನಕ ಸೇರಿದಂತೆ ಯಾವೊಂದು ಸೌಲಭ್ಯಗಳು ಸಿಗುತ್ತಿಲ್ಲ. ಸತ್ತಿರುವ ಹೆಣ ಸುಡಲು ಕಷ್ಟವಾಗಿದ್ದು ಟೋಕನ್ ಪಡೆಯಲು ಐದರಿಂದ ಆರು ದಿನಗಳ ಕಾಲ ಬೇಕಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದೀಗ ಚೀನಾದಲ್ಲಿ ಕೊರೊನಾ ಸ್ಪೋಟಗೊಂಡ ನಂತರ ಅಮೆರಿಕ, ಜಪಾನ್, ಕೊರಿಯಾ ಮುಂತಾದ ದೇಶಗಳಲ್ಲೂ ಕೋರೋನಾ ಕೇಸ್ ಬೇರೆ ಬೇರೆ ದೇಶಗಳಿಗೆ ಸಿಡಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಫುಲ್ ಅಲರ್ಟ್ ಆಗಿದೆ.

ದೇಶದಲ್ಲಿನ ಸದ್ಯದ ಕೊರೊನಾ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿ ಚರ್ಚಿಸುವ ನಿರೀಕ್ಷೆ ಇದೆ. ಚೀನಾದ ಕೋವಿಡ್ ಪರಿಸ್ಥಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅಲ್ಲಿಯ ವಾಸ್ತವಗಳು ಬೆಚ್ಚಿ ಬೀಳಿಸುತ್ತಿವೆ. ಚೀನಾದಲ್ಲಿ ಕೊರೊನಾ ವೈರಸ್ ಮಿತಿ ಮೀರಿದೆ. ಇತ್ತೀಚೆಗೆ 13 ರಿಂದ 21 ಲಕ್ಷ ಜನರು ಮೃತಪಟ್ಟಿರಬಹುದು ಎಂದು ಜಾಗತಿಕ ಆರೋಗ್ಯ ತಜ್ಞರು ಸಂದೇಹ ವ್ಯಕ್ತಪಡಿಸಿದ್ದಾರೆ.

ಭಾರತ ಸರ್ಕಾರ ಇದೀಗ ತನ್ನ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಬಗ್ಗೆ ಪತ್ರ ಬರೆದು ಕೊರೊನಾ ವಾಸ್ತವಾಂಶದ ಪರಿಶೀಲನೆ ಮಾಡಬೇಕು ಎಂದು ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ