Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ : ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆಗೆ ಕ್ಷಣಗಣನೆ

 

ಬೆಳಗಾವಿ :
ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ರಾಜ್ಯಾದ್ಯಂತ ಕಳೆದ ಒಂದು ತಿಂಗಳಿಂದ ನಡೆದಿರುವ ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ ಕಾರ್ಯಕ್ರಮ ಡಿ.23ರಂದು ಸಂಜೆ 4 ಗಂಟೆಗೆ ನಗರದ ಲಿಂಗರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಸದೃಢ ಸಮಾಜದ ನಿರ್ಮಾಣಕ್ಕೆ ಆಧ್ಯಾತ್ಮ ವಿದ್ಯೆಯ ಆಕರವಾದ ಭಗವದ್ಗೀತೆಯ ಮೂಲಕ ಸಂಸ್ಕಾರ ನೀಡಿ ಸುಸಂಸ್ಕೃತ ಸಮಾಜದ ನಿರ್ಮಾಣದ ಆಶಯದೊಂದಿಗೆ ಸೊಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರು 2007ರ ಅಕ್ಟೋಬರ್ ನಲ್ಲಿ ರಾಜ್ಯಾದ್ಯಂತ ಭಗವದ್ಗೀತಾ ಅಭಿಯಾನವನ್ನು ಪ್ರಾರಂಭಿಸಿದರು. ಈ ಬಾರಿ ರಾಜ್ಯ ಮಟ್ಟದ 17ನೇ ಅಭಿಯಾನ ಬೆಳಗಾವಿ ಕೇಂದ್ರಿತವಾಗಿ ನಡೆದಿದೆ.
ನ.21ರಂದು ಬೆಳಗಾವಿಯಲ್ಲಿ ಅಭಿಯಾನ ಉದ್ಘಾಟನೆಗೊಂಡಿತು. ಅಭಿಯಾನದ ಅಂಗವಾಗಿ ಶ್ಲೋಕ ಪಠಣ, ವಿಚಾರಸಂಕಿರಣ, ಪ್ರವಚನ, ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಭಗವದ್ಗೀತೆ ಶ್ಲೋಕ ಪಠಣ ಸ್ಪರ್ಧೆಗಳು, ಭಗವದ್ಗೀತೆ ಮತ್ತು ಕಾನೂನು, ಭಗವದ್ಗೀತೆ ಮತ್ತು ನಿರ್ವಹಣಾ ಶಾಸ್ತ್ರ, ಹಾಗೂ ಗೀತಾಸಮನ್ವಯ ಎಂಬ ಅತ್ಯಂತ ಮಹತ್ವಪೂರ್ಣವಾದ 3 ವಿಚಾರ ಸಂಕಿರಣ ನಡೆಯಿತು.

ಕಳೆದ ಒಂದು ತಿಂಗಳ ಅವಧಿಯಲ್ಲಿ ಬೆಳಗಾವಿ ನಗರದಲ್ಲಿ 80, ಗ್ರಾಮೀಣ ಭಾಗದಲ್ಲಿ 50 ಕ್ಕೂ ಹೆಚ್ಚು ಹಾಗೂ ರಾಜ್ಯದ ವಿವಿಧೆಡೆ 269 ಕೇಂದ್ರಗಳು ಸೇರಿದಂತೆ ಒಟ್ಟು ಸುಮಾರು 400 ಕೇಂದ್ರಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ನಡೆದಿದೆ. ಈಗಾಗಲೇ ನಗರದಲ್ಲಿ 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹಾಗೂ ತಾಲೂಕುಗಳಲ್ಲಿ 13 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಕಲಿಸಿಕೊಡಲಾಗಿದೆ.
ಶುಕ್ರವಾರ ಗೀತಾ ಜಯಂತಿ ದಿನ ಬೆಳಗಾವಿ ನಗರದ ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಮತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಮಗ್ರ ಗೀತಾಪಠಣ ನಡೆಯಿತು.

*ಮಹಾಸಮರ್ಪಣೆ*
ಸವರ್ಣವಲ್ಲೀ ಸಂಸ್ಥಾನದ ಭಗವದ್ಗೀತಾ ಅಭಿಯಾನ ಟ್ರಸ್ಟ್ ಕರ್ನಾಟಕ ಹಾಗೂ ಬೆಳಗಾವಿಯ ಜನಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಡಿ.23 ರಂದು ಬೆಳಗಾವಿಯ ಕಾಲೇಜು ರಸ್ತೆಯ ಲಿಂಗರಾಜ ಮೈದಾನದಲ್ಲಿ ರಾಜ್ಯಮಟ್ಟದ ಮಹಾಸಮರ್ಪಣೆ ನಡೆಯಲಿದೆ.

ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕೇಂದ್ರ ಕಾನೂನು, ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ರಾಜ್ಯಸಭಾ ಸದಸ್ಯ ಹಾಗೂ ಚಿಂತಕ ಸುದಾಂಶು ತ್ರಿವೇದಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಭಗವದ್ಗೀತಾ ಅಭಿಯಾನ ಸಮಿತಿಯ ಗೌರವಾಧ್ಯಕ್ಷ ಡಾ. ಪ್ರಭಾಕರ ಕೋರೆ, ಸಮಿತಿಯ ಅಧ್ಯಕ್ಷ ಗೋಪಾಲ ಜಿನಗೌಡ ಮೊದಲಾದವರು ಉಪಸ್ಥಿತರಿರುವರು.
ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೆಳಗಾವಿ ಜಿಲ್ಲೆಯೂ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಒಟ್ಟು 20 ಸಾವಿರಕ್ಕೂ ಹೆಚ್ಚು ಜನ ಭಗವದ್ಗೀತೆ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಗರದ ವಿವಿಧ ಕಡೆಗಳಿಂದ ಈ ಮಹಾಸಮರ್ಪಣೆಗೆ ಆಗಮಿಸಲಿರುವ ಮಕ್ಕಳಿಗೆ, ಮಾತೆಯರಿಗೆ ಮತ್ತು ಮಹನೀಯರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಸಭಾ ಕಾರ್ಯಕ್ರಮದ ಬಳಿಕ ನೃತ್ಯರೂಪಕ ಪ್ರದರ್ಶನ ನಡೆಯಲಿದೆ.

*ಸಿದ್ಧತೆ*
ಲಿಂಗರಾಜ ಮೈದಾನದಲ್ಲಿ ಭಗವದ್ಗೀತೆ ಮಹಾಸಮರ್ಪಣೆ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. 60 ಅಡಿಯ ಬೃಹತ್ ವೇದಿಕೆ ಸಿದ್ಧಗೊಳ್ಳುತ್ತಿದೆ. 12 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ, ನೀರು, ಬಾಳೆಹಣ್ಣು, ಲಘು ಉಪಹಾರ ಮೊದಲಾದ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ