Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಷ್ಟೀಯ ಪಕ್ಷಗಳಿಂದ ಜೈನ ಸಮಾಜಕ್ಕೆ ಅನ್ಯಾಯ: ಸಮಾಜದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಆಗ್ರಹ

 

ಬೆಳಗಾವಿ :
ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲಾ ರಾಷ್ಟೀಯ ಪಕ್ಷಗಳು ಜೈನ ಸಮಾಜವನ್ನು ಕಡೆಗಣಿಸಿರುವುದು ಖಂಡನೀಯವಾಗಿದ್ದು, ಬಿಜೆಪಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಸಂಜಯ ಪಾಟೀಲ ಮತ್ತು ಖಾನಾಪುರ ಕ್ಷೇತ್ರದಿಂದ ಪ್ರಮೋದ ಕೊಚೇರಿ ಹಾಗೂ ಕಾಂಗ್ರೆಸ್ ಪಕ್ಷದಿಂದ ತೇರದಾಳ ಮತಕ್ಷೇತ್ರಕ್ಕೆ ಡಾ. ಪದ್ಮಜಿತ ನಾಡಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಬೇಕೆಂದು ಜೈನ ಸಮಾಜದ ಮುಖಂಡ ವಿನೋದ ದೊಡ್ಡಣ್ಣವರ ಆಗ್ರಹಿಸಿದರು.

ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ರಾಷ್ಟೀಯ ಪಕ್ಷಗಳು ಜೈನ ಸಮಾಜವನ್ನು ಕಡೆಗಣಿಸಿವೆ. ಜೈನ ಸಮಾಜ ಎಲ್ಲಾ ಸಮುದಾಯದೊಂದಿಗೆ ಬೆರೆತು ಸಾಮಾಜಿಕ ಸೇವೆಗಳನ್ನು ಕೈಗೊಳ್ಳುವಲ್ಲಿ ಮುಂಚೂಣಿಯಲ್ಲಿದೆ. ಆದರೆ ರಾಜಕೀಯ ಮತ್ತು ಅಧಿಕಾರದ ವಿಷಯ ಬಂದಾಗ ಎಲ್ಲ ರಾಷ್ಟ್ರೀಯ ಪಕ್ಷಗಳು ಜೈನ ಸಮಾಜವನ್ನು ತುಳಿಯುತ್ತ ಬಂದಿವೆ. ಈ ಬೆಳವಣಿಗೆಯನ್ನು ಜೈನ ಸಮಾಜ ಒಕ್ಕೊರಲಿನಿಂದ ಖಂಡಿಸುತ್ತದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಲು ಪ್ರಮೋದ ಕೊಚೇರಿ ಅವರ ಕೊಡುಗೆ ಅಪಾರವಾಗಿದೆ. ಪ್ರತಿ ಬಾರಿ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ. ಈ ಬಾರಿಯಾದರೂ ಅವರಿಗೆ ಟಿಕೆಟ್ ನೀಡಬೇಕು. ಅದರಂತೆ ಬಿಜೆಪಿ ಬೆಳಗಾವಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷರಾಗಿ ಕಳೆದ ಐದು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿ ಹಾಗೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದ ಗೆಲುವಿಗೆ ಕಾರಣಕರ್ತರಾದ ಮಾಜಿ ಶಾಸಕ ಸಂಜಯ ಪಾಟೀಲ ಅವರಿಗೂ ಟಿಕೆಟ್ ನಿರಾಕರಿಸಿವುದು ದುಃಖದ ಸಂಗತಿ. ಇವರಿಬ್ಬರಿಗೂ ಟಿಕೆಟ್ ನೀಡುವ ಮೂಲಕ ಅನ್ಯಾಯ ಸರಿಪಡಿಸಬೇಕೆಂದು ಅವರು ಹೇಳಿದರು.

ಜೈನ ಸಮಾಜದ ಮುಖಂಡರಾದ ಡಾ. ಎನ್,.ಎ. ಮಗದುಮ್ಮ ಮತ್ತು ಅರುಣ ಯಲಗುದ್ರಿ ಮಾತನಾಡಿ, ತೇರದಾಳ ಮತ ಕ್ಷೇತ್ರದಲ್ಲಿ ಜೈನ ಸಮಾಜದ ಡಾ. ಪದ್ಮಜಿತ ನಾಡಗೌಡ ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಕ್ರಿಯಾಶೀಲ ವ್ಯಕ್ತಿಯಾಗಿದ್ದು, ಅವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು.
ಒಟ್ಟಾರೆ ಎಲ್ಲ ರಾಷ್ಟ್ರೀಯ ಪಕ್ಷಗಳು ರಾಜಕೀಯ ಮತ್ತು ಅಧಿಕಾರದ ವಿಷಯ ಬಂದಾಗ ಜೈನ ಸಮಾಜವನ್ನು ಕಡೆಗಣಿಸುತ್ತ ಬಂದಿವೆ. ಆದರೆ ಈ ಬಾರಿ ಈ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲ . ಈ ಬಗ್ಗೆ ಎರಡೂ ಪಕ್ಷದ ಹಿರಿಯರೂ ಗಮನ ಹರಿಸಬೇಕು. ಇಲ್ಲದಿದ್ದಲ್ಲಿ ಸಮಾಜ ಒಂದು ಗಟ್ಟಿಯಾದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಅವರು ತಿಳಿಸಿದರು.
ಪತ್ರಿಕಾಗೊಷ್ಟಿಯಲ್ಲಿ ಹುಕ್ಕೇರಿ ಜೈನ ಸಮಾಜದ ಪ್ರಮುಖ ಮಹಾವೀರ ನಿಲಜಗಿ, ಬಾಹುಬಲಿ ನಾಗನೂರಿ, ಉಗಾರ ಗ್ರಾಮದ ಆನಂದ ಸದಲಗೆ , ರಾಜೇಂದ್ರ ಜೈನ, ಶ್ರೀಪಾಲ ಖೆಮಲಾಪುರೆ , ಜಬರಚಂದ ಸಾಮಸುಖ, ಅಭಯ ಅವಲಕ್ಕಿ ಸೇರಿದಂತೆ ಬೆಳಗಾವಿ ಜಿಲ್ಲೆಯ ಜೈನ ಸಮಾಜದ ಮುಖಂಡರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ