Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಆ್ಯಸಿಡ್ ದಾಳಿ ಮಾಡಲು ಪ್ರಯತ್ನಿಸಿದವರನ್ನು ತಕ್ಷಣ ಬಂಧಿಸಲು ಆಗ್ರಹ

ಬೆಳಗಾವಿ : ತಮ್ಮ ಮೇಲೆ ಆ್ಯಸಿಡ್ ದಾಳಿ ಮಾಡಲು ಪ್ರಯತ್ನಿಸಿದವರನ್ನು ತಕ್ಷಣ ಬಂಧಿಸುವಂತೆ ಕಾಂಗ್ರೆಸ್ ಪಕ್ಷದ ಧುರೀಣ ಲಕ್ಕಣ್ಣ ಸಂಸುದ್ದಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಮಾಡಿದ್ದಾರೆ. ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಶ್ರೀಮಂತ ಪೂಜೇರಿ ಮತ್ತು ಶ್ರೀಕಾಂತ ಪೂಜೇರಿ ಹಾಗೂ ಇತರ 30 ಜನರನ್ನು ಬಂಧಿಸುವ ಕುರಿತು ಅವರು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಮಾಡಿದ್ದಾರೆ.

ನಮ್ಮ ಕುಟುಂಬದವರ ಮೇಲೆ ಹಲ್ಲೆ ಮಾಡಿದ್ದಲ್ಲದೆ ಆಸಿಡ್ ಎರಚುವ ಪ್ರಯತ್ನ ಮಾಡಲಾಗಿದೆ. ಈ ಬಗ್ಗೆ ಈಗಾಗಲೇ ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಿಸಿಟಿವಿ ಫೋಟೋ ಸಹ ಒದಗಿಸಲಾಗಿದೆ. ಆದರೆ, ಆರೋಪಿಗಳನ್ನು ಇದುವರೆಗೂ ಬಂಧಿಸದೇ ಇರುವುದು ತೀವ್ರ ಖಂಡನೀಯ. ಶ್ರೀಮಂತ ಪೂಜೇರಿ ಅವರು ಹಲವು ವರ್ಷಗಳಿಂದ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಹಾಗೂ ಶ್ರೀಮಂತ ಮಹಾರಾಜ ಸ್ವಾಮಿ ವೇಷ ಹಾಕಿಕೊಂಡು ತಿರುಗುತ್ತಿದ್ದು ಅನೇಕ ಜನರಿಗೆ ಮೋಸ ಮಾಡಿರುವುದು ಈಗಾಗಲೇ ಬೆಳಕಿಗೆ ಬಂದಿದೆ. ಇವರು ಮಳಲಿ ಶಿಕ್ಷಕರು ಮುಧೋಳ ಇವರಿಗೆ ನಲವತ್ತು ಲಕ್ಷದಷ್ಟು ದುಡ್ಡನ್ನು ಪಡೆದು ಮೋಸ ಮಾಡಿ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದು ಈಗಾಗಲೇ ಈ ಬಗ್ಗೆ ಬಾಗಲಕೋಟೆ ಎಸ್ಪಿ ಮತ್ತು ಡಿವೈಎಸ್ಪಿ ಜಮಖಂಡಿ ಅವರಿಗೆ ದೂರು ನೀಡಿದ್ದು, ಇವರಿಗೆ ಸಹಾಯ ಮಾಡಿದ್ದೇನೆ ಎಂದು ತಿಳಿದುಕೊಂಡು ಮಹಾಲಿಂಗಪುರ ಪಟ್ಟಣದ 30 ಜನ ರೌಡಿಗಳನ್ನು ಕರೆದುಕೊಂಡು ನಮ್ಮ ಮೇಲೆ ಹಲ್ಲೆ ಮಾಡಿರುತ್ತಾರೆ. ಆದ ಕಾರಣ ತಕ್ಷಣ ಅವರನ್ನು ಬಂಧಿಸಿ ನ್ಯಾಯ ಒದಗಿಸಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಎಸ್.ಪಿ ಕಚೇರಿ ಮುಂದೆ ಪ್ರತಿಭಟಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ