Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಪುಣ್ಯಾರಾಧನೆ ಅಂಗವಾಗಿ ಸಸಿ ವಿತರಣೆ

 

ಇಟಗಿ :
ಹುಟ್ಟು ಸಾವುಗಳ ಮಧ್ಯದ ಬದುಕನ್ನು ಸಮಾಜಮುಖಿಯಾಗಿ ಸಮರ್ಪಣಮಾಡಿದವರ ಬದುಕನ್ನು ಮುಂದಿನ ಜನಾಂಗವು ಸ್ಮರಿಸುತ್ತದೆ ಎಂದು ಗಂದಿಗವಾಡದ ಮೃತ್ಯುಂಜಯಸ್ವಾಮಿ ಹಿಿರೇಮಠ ಹೇಳಿದರು. ಅವರೊಳ್ಳಿ-ಬೀಳಕಿಯ ಶ್ರೀ ರುದ್ರಸ್ವಾಮಿ ಮಠದ ಲಿಂಗೈಕ್ಯ ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಆರನೇ ಪುಣ್ಯಾರಾಧನೆ ಅಂಗವಾಗಿ ನಡೆದ ಸಸಿ ವಿತರಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಮಾನವನ ಬದುಕು ಸಮಾಜಮುಖಿಯಾಗಬೇಕು. ಸ್ವಾರ್ಥ ಬದುಕಿನ ನಮ್ಮನ್ನು ಸಮಾಜ ದಿಕ್ಕರಿಸುತ್ತದೆ. ಇಂದಿನ ಪೂಜ್ಯರಾದ ಚನ್ನಬಸವದೇವರು ಹಿರಿಯ ಗುರುಗಳ ಸ್ಮರಣೋತ್ಸವವನ್ನು ಭಕ್ತರಿಗೆ ಸಸಿಗಳನ್ನು ಹಂಚುವ ಮೂಲಕ ಹಾಗೂ ಆರೋಗ್ಯ ಶಿಬಿರಗಳನ್ನು ಮಾಡುವ ಮೂಲಕ ಆಚರಿಸುತ್ತಿರುವುದು ಅಭಿನಂದನಾರ್ಹವಾಗಿದೆ ಎಂದರು.
ಶ್ರೀಮಠದ ಪೀಠಾಧಿಪತಿ ಶ್ರೀ ಚನ್ನಬಸವದೇವರು ಮಾತನಾಡಿ, ಆರೋಗ್ಯವೇ ಭಾಗ್ಯವೆಂದು ನಮ್ಮ ನಾಣ್ಣುಡಿ ಹೇಳುತ್ತದೆ. ಆದರೆ ಇಂದು ಎಲ್ಲರೂ ಒಂದಿಲ್ಲ ಒಂದು ರೀತಿಯಲ್ಲಿ ಆರೋಗ್ಯವನ್ನು ಕಳೆದುಕೊಂಡವರೇ ಆಗಿದ್ದೇವೆ. ಆದಕಾರಣ ಆಧ್ಯಾತ್ಮ ಹಾಗೂ ಆರೋಗ್ಯ ಒಂದು ನಾಣ್ಯದ ಎರಡು ಮುಖಗಳು ಎಂದರು.
ಹಿರೇಮುನವಳ್ಳಿಯ ಶಾಂಡಿಲ್ಯೇಶ್ವರ ಮಠದ ಶಂಭುಲಿಂಗಶಿವಾಚಾರ್ಯರು ಮಾತನಾಡಿ, ನಮ್ಮ ಪೂರ್ವದ ಮಹಾತ್ಮರು ಗಿಡಮರಗಳನ್ನು ದೇವರೆಂದು ಪೂಜಿಸಿದರು ಆ ಮೂಲಕ ಪ್ರಕೃತಿಯಲ್ಲಿನ ವಾಯು ಮಂಡಲವು ದಟ್ಟವಾಗಿತ್ತು. ಆದರೆ ಇಂದು ಮಾನವನ ಸ್ವೇಚ್ಚಾಚಾರದ ಆಸೆಗೆ ಸಸ್ಯಲೋಕವು ಅವನತಿಯನ್ನು ಮುಟ್ಟಿದ ಕಾರಣ ನಾವೆಲ್ಲ ಪ್ರಾಣವಾಯುವನ್ನು ಖರೀದಿಸಬೇಕಾಗದ ಅನಿವಾರ್ಯತೆ ಬಂದಿದೆ. ಅವುಗಳನ್ನು ರಕ್ಷಿಸಿ ಬೆಳೆಸಬೇಕಾದ ಹೊಣೆ ನಮ್ಮೆಲ್ಲರದಾಗಿದೆ. ಮಹಾತ್ಮರನ್ನು ಹಾಗೂ ನಮ್ಮ ಹಿರಿಯರನ್ನು ನೆನೆಯುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ ಎಂದರು.

ಧಾರವಾಡದ ಮನೋವೈದ್ಯ ಡಾ.ಆದಿತ್ಯ ಪಾಂಡುರಂಗಿ, ಬೆಳಗಾವಿಯ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಬಾನು ಜಿ.ಪಿ.,ಶಿವರುದ್ರಪ್ಪ ಕಬಾಡಗಿ, ವಾಣಿಶ್ರೀ ಹೆಗಡೆ, ಸಂತೋಷ ಚವ್ಹಾನ,ಮಲ್ಲಿಕಾರ್ಜುನ ವಾಲಿ ಹಾಗೂ ಇತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ