Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಸವ ಜಯಂತಿ ಅಂಗವಾಗಿ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ

ಬೆಳಗಾವಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ನಿಮಿತ್ತ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಮತ್ತು ಎಲ್ಲ ವಯೋಮಿತ ಹಿರಿಯ ನಾಗರಿಕರಿಗೆ ಐದು ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಬುಧವಾರ 8 ಏಪ್ರಿಲ್ 2026 ರಂದು ಮುಂಜಾನೆ 10.00 ಗಂಟೆಗೆ ಕೆಎಲ್‌ಇ ಸಂಸ್ಥೆಯ ಬೆಳಗಾವಿಯ ಜಿ. ಎ. ಪ್ರೌಢಶಾಲೆಯಲ್ಲಿ ಆಯೋಜಿಸಿದೆ.

ಪ್ರಾಥಮಿಕ ವಿಭಾಗಕ್ಕೆ ‘ಬಾಲಕ ಬಸವಣ್ಣ’, ಮಾಧ್ಯಮಿಕ ವಿಭಾಗಕ್ಕೆ ‘ವಚನಗಳಲ್ಲಿ ಸರ್ವಸಮಾನತೆ’, ಪದವಿಪೂರ್ವ ವಿಭಾಗಕ್ಕೆ ‘ಸಮಾಜಕ್ಕೆ ಶರಣರ ಕೊಡುಗೆ’, ಪದವಿ ಹಾಗೂ ಸ್ನಾತಕೋತ್ತರ ವಿಭಾಗಕ್ಕೆ ‘ವಚನಗಳಲ್ಲಿ ಪ್ರಕೃತಿದರ್ಶನ’ ಎಲ್ಲ ವಯೋಮಾನದವರಿಗೆ ‘ಶರಣರ ದೃಷ್ಟಿಯಲ್ಲಿ ದೇವರು’ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಪ್ರಬಂಧವು ಒಂದು ಗಂಟೆಯದಾಗಿದ್ದು, 4 ಪುಟ ಮೀರದಂತೆ ರಚಿಸಬೇಕು.

ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪತ್ರಗಳನ್ನು ಬಸವ ಜಯಂತಿಯ ಉದ್ಘಾಟನಾ ಸಮಾರಂಭದಲ್ಲಿ ವಿತರಿಸಲಾಗುವುದು. ಆಸಕ್ತ ಸ್ಪರ್ಧಾಳುಗಳು 7 ಏಪ್ರಿಲ್ 2025 ರ ಒಳಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ, ಲಿಂಗಾಯತ ಭವನದಲ್ಲಿ ಹೆಸರನ್ನು ನೋಂದಾಯಿಸಬಹುದು ಅಥವಾ ಕಾರ್ಯಾಲಯದ ಪ್ರವೀಣ ತವಕರಿ ಮೊ.ನಂ. 9164345208 ಇವರನ್ನು ಸಂಪರ್ಕಿಸಬೇಕೆಂದು ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಹಾಗೂ ಜಯಂತಿ ಉತ್ಸವದ ಅಧ್ಯಕ್ಷ ಬಾಲಚಂದ್ರ ಬಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ