Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್ 141 ಕ್ಷೇತ್ರ ಗೆಲ್ಲುವುದು ಖಚಿತ : ಡಿಕೆಶಿ ವಿಶ್ವಾಸ

 

ಬೆಂಗಳೂರು :
ವಿಧಾನಸಭಾ ಚುನಾವಣೆಯಲ್ಲಿ
ನಮ್ಮ ಪಕ್ಷ 141 ಕ್ಷೇತ್ರಗಳನ್ನು ಗೆಲ್ಲುವುದು ಖಚಿತ. ಬಿಜೆಪಿ 65-70 ಕ್ಷೇತ್ರಗಳನ್ನು ಗೆಲ್ಲಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮ ಪ್ರತಿಕ್ರಿಯೆ
ನೀಡಿದರು.

ಬಿಜೆಪಿ ಹಾಗೂ ನಿಮ್ಮ ಪಟ್ಟಿ ನೋಡಿದರೆ ಅಲೆ ಯಾರ ಪರವಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 'ನಮ್ಮ ಪಕ್ಷ ಮುಂದಿನ ಚುನಾವಣೆಯಲ್ಲಿ 141 ಕ್ಷೇತ್ರಗಳನ್ನು ಗೆಲ್ಲುವುದು ಖಚಿತ. ಬಿಜೆಪಿ 65-70 ಕ್ಷೇತ್ರಗಳನ್ನು ಗೆಲ್ಲಲಿದೆ' ಎಂದು ತಿಳಿಸಿದರು.

ರಾಜಕಾರಣ ಫುಟ್ಬಾಲ್ ಆಟವಲ್ಲ, ಅದೊಂದು ಚದುರಂಗದಾಟ. ಬಿಜೆಪಿಯವರು ಚದುರಂಗದ ದಾಳಗಳನ್ನು ಉರುಳಿಸುತ್ತಿದ್ದಾರೆ. ಉರುಳಿಸಲಿ ಬಿಡಿ. ಅವರಿಗೆ ಶುಭವಾಗಲಿ. ರಾಜಕಾರಣದಲ್ಲಿ ಪ್ರತಿಸ್ಪರ್ಧೆ ಇರಬೇಕು. ಇಂತಹ ಹೋರಾಟ ನನಗೆ ಹೊಸತಲ್ಲ. ನಾನು 1985ರಲ್ಲಿ ದೇವೇಗೌಡರ ವಿರುದ್ಧ ಹೋರಾಡಿದ್ದೆ. ಕುಮಾರಸ್ವಾಮಿ ಅವರ ವಿರುದ್ಧವೂ ಹೋರಾಡಿದ್ದೆ. ಈಗಲೂ ಹೋರಾಡುತ್ತೇನೆ. ನನ್ನ ಜೀವನ ಹೋರಾಟದಿಂದಲೇ ಕೂಡಿದೆ.

ಪದ್ಮನಾಭನಗರದಲ್ಲಿ ಅಶೋಕ್ ವಿರುದ್ಧ ದುರ್ಬಲ ಅಭ್ಯರ್ಥಿ ಕಣಕ್ಕಿಳಿಸಿದ್ದು, ಒಪ್ಪಂದ ಮಾಡಿಕೊಳ್ಳಲಾಗಿದೆಯಾ ಎಂಬ ಪ್ರಶ್ನೆಗೆ, 'ನಾನು ಯಾರ ಜತೆಗೂ ಒಪ್ಪಂದ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಕಳೆದ ಬಾರಿ ಚುನಾವಣೆಯಲ್ಲಿ ಜೆಡಿಎಸ್ ನಿಂದ ನಾಯ್ಡು ಸಮುದಾಯದವರನ್ನು ಹಾಕಿದ್ದರು. ನಾವು ಒಕ್ಕಲಿಗ ಸಮುದಾಯದವರನ್ನು ಕಣಕ್ಕಿಳಿಸಿದ್ದೆವು. ಆದರೆ ನಮ್ಮ ತಂತ್ರ ಫಲ ನೀಡಲಿಲ್ಲ. ನಾಯ್ಡು ಸಮುದಾಯದ ಅಭ್ಯರ್ಥಿ ಎರಡನೇ ಸ್ಥಾನ ಪಡೆದು ನಮ್ಮ ಅಭ್ಯರ್ಥಿ ಮೂರನೇ ಸ್ಥಾನ ಪಡೆದಿದ್ದರು. ಬೆಂಗಳೂರಿನಲ್ಲಿ ಅತಿ ಹೆಚ್ಚು ನಾಯ್ಡು ಸಮುದಾಯದ ಜನರು ಇರುವುದು ಪದ್ಮನಾಭನಗರದಲ್ಲಿ. ಪಕ್ಷದ ಅಭ್ಯರ್ಥಿಯಾಗಿರುವವರು ಪಕ್ಷದ ಪ್ರಮುಖ ಕಾರ್ಯಕರ್ತ. ಯಾರೂ ಇಲ್ಲದ ಸಂದರ್ಭದಲ್ಲೂ ಆತ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ಈ ಕ್ಷೇತ್ರದಲ್ಲಿ ಕನಕಪುರದಿಂದ ಬಂದು ನೆಲೆಸಿರುವ ಮತದಾರರೂ ಇದ್ದಾರೆ. ಅಲ್ಪಸಂಖ್ಯಾತರು ಇದ್ದಾರೆ. ಅಶೋಕ್ ವಿರುದ್ಧ ಅನೇಕ ಅಸಮಾಧಾನಗಳಿವೆ. ಹೀಗಾಗಿ ಪದ್ಮನಾಭನಗರದಲ್ಲಿ ಅಶೋಕ್ ಸೋಲನುಭವಿಸಿ, ನಮ್ಮ ಅಭ್ಯರ್ಥಿ ಗೆಲುವು ದಾಖಲಿಸಲಿದ್ದಾರೆ' ಎಂದು ತಿಳಿಸಿದರು.

ಪದ್ಮನಾಭನಗರದಲ್ಲಿ ಬೇರೆ ಅಭ್ಯರ್ಥಿ ಹಾಕುತ್ತೀರಾ, ಸುರೇಶ್ ಅವರನ್ನು ಕಣಕ್ಕಿಳಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ, 'ಸುರೇಶ್ ಅವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಡ ಇದೆ. ಆದರೆ ಪಕ್ಷ ಈಗಾಗಲೇ ರಘುನಾಥ್ ನಾಯ್ಡು ಅವರಿಗೆ ಟಿಕೆಟ್ ನೀಡಿದ್ದು, ಅವರೇ ಸ್ಪರ್ಧಿಸುತ್ತಾರೆ' ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿ ಹಾಕುತ್ತೀರಾ? ವಿನಯ್ ಕುಲಕರ್ಣಿ ಅವರ ಹೆಸರು ಚರ್ಚೆಯಾಗಿದೆಯಲ್ಲ ಎಂಬ ಪ್ರಶ್ನೆಗೆ, 'ವಿನಯ್ ಕುಲಕರ್ಣಿ ಪ್ರಬಲ ನಾಯಕರು. ಅವರ ಹೆಸರನ್ನು ಧಾರವಾಡ ಕ್ಷೇತ್ರಕ್ಕೆ ಘೋಷಣೆ ಮಾಡಿದ್ದೇವೆ. ಅವರ ಕಾರ್ಯಕರ್ತರ ಜತೆ ಮಾತನಾಡುತ್ತೇವೆ' ಎಂದು ತಿಳಿಸಿದರು.

 

ಬಿಜೆಪಿ ಅಸಮಾಧಾನಿತರು ನಿಮ್ಮನ್ನು ಸಂಪರ್ಕಿಸಿದ್ದರಾ ಎಂಬ ಪ್ರಶ್ನೆಗೆ, 'ನಾನು ಈಗಲೇ ಯಾರ ವಿಚಾರವನ್ನೂ ಮಾತನಾಡುವುದಿಲ್ಲ. ಬಿಜೆಪಿಯಲ್ಲಿ ಸರಣಿ ರಾಜೀನಾಮೆ ನೀಡಲಾಗುತ್ತಿದೆ. ನಾವು ಯಾರ ಸಂಪರ್ಕದಲ್ಲೂ ಇಲ್ಲ. ನಮ್ಮ ಶಾಸಕರು, ಕಾರ್ಯಕರ್ತರ ಜತೆ ಮಾತುಕತೆ ನಡೆಸಿದ್ದೇವೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ