Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೇ 15 ರಂದು ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದ ಡಿಕೆಶಿ !

 

ಬೆಂಗಳೂರು:
ರಾಜ್ಯದಲ್ಲಿ ಈ ಸಲ ಕಾಂಗ್ರೆಸ್ ಸರಕಾರ ಶತಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದು,
ನಿಮ್ಮ ಗುರಿ 113 ಮುಟ್ಟುತ್ತದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ, ‘113 ನಿಮ್ಮ ಲೆಕ್ಕ. ನಮ್ಮ ಗುರಿ 141. ಮೇ 13 ರಂದು ನೋಡಿ, 15 ರಂದು ನಾವು ಸರ್ಕಾರ ರಚನೆ ಮಾಡುತ್ತೇವೆ. ಮೊದಲ ಸಂಪುಟದಲ್ಲೇ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ’ ಎಂದು ತಿಳಿಸಿದರು.

ಈ ಗ್ಯಾರಂಟಿ ಯೋಜನೆ ಜಾರಿ ಮಾಡುವ ಸಚಿವ ಸಂಪುಟ ಯಾರ ನೇತೃತ್ವದ್ದಾಗಿರುತ್ತದೆ ಎಂದು ಕೇಳಿದಾಗ, ‘ಮೇ 15 ರಂದು ಮಲ್ಲಿಕಾರ್ಜುನ ಖರ್ಗೆ ಅವರು ಘೋಷಣೆ ಮಾಡಲಿದ್ದಾರೆ’ ಎಂದು ತಿಳಿಸಿದರು.

‘ಬಿಜೆಪಿಗೆ ಮತ ಹಾಕದಿದ್ದರೆ ರಾಜ್ಯಕ್ಕೆ ಕೇಂದ್ರದ ಯೋಜನೆ ನೀಡುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳಾಗುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಜನರಿಗೆ ಬೆದರಿಕೆ ಹಾಕಿದ್ದಾರೆ. ಇಂತಹ ಬೆದರಿಕೆಗಳಿಗೆ ಕನ್ನಡಿಗರು ಹೆದರುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

‘ಬಿಜೆಪಿಯವರು ರಾಜ್ಯದ ಜನರಿಗೆ ಬೆದರಿಕೆ ಹಾಕಿ ಮತ ಪಡೆಯಲು ಮುಂದಾಗಿದ್ದಾರೆ. ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ. ಈ ದೇಶ ಒಕ್ಕೂಟ ವ್ಯವಸ್ಥೆಯಿಂದ ರೂಪುಗೊಂಡಿದೆ. ಕೇಂದ್ರ ಸರ್ಕಾರದ ಆದಾಯದಲ್ಲಿ ಶೇ.41ರಷ್ಟು ಕರ್ನಾಟಕ ರಾಜ್ಯದಿಂದ ಹೋಗುತ್ತಿದೆ. ಇದರಲ್ಲಿ ನಮಗೆ ಮರಳಿ ಬರುತ್ತಿರುವುದು ಬಿಡಿಗಾಸಿನಷ್ಟು ಮಾತ್ರ. ನಡ್ಡಾ ಅವರ ಬೆದರಿಕೆಗೆ ನಾವು ಕನ್ನಡಿಗರು ಹೆದರುವುದಿಲ್ಲ. ಯಾವುದ್ಯಾವುದಕ್ಕೋ ನಾವು ಹೆದರಲಿಲ್ಲ, ಇನ್ನು ಇದಕ್ಕೆ ಹೆದರುತ್ತೇವಾ? ಇನ್ನು ಗೃಹಮಂತ್ರಿಗಳು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗಲಭೆಗಳಾಗುತ್ತವೆ ಎಂದು ಬೆದರಿಕೆ ಹಾಕಿದ್ದರು. ಈ ರೀತಿ ರಾಜ್ಯದ ಜನರನ್ನು ಹೆದರಿಸುತ್ತಿದ್ದಾರೆ.

ಇದು ಕರ್ನಾಟಕದ ಸ್ವಾಭಿಮಾನದ ಚುನಾವಣೆ. ಮೇಕೆದಾಟು ಪಾದಯಾತ್ರೆ ಸಮಯದಲ್ಲಿ ಬಿಜೆಪಿ ಸರ್ಕಾರ ಈ ಯೋಜನೆಗೆ 1 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದರು. ಈ ಡಬಲ್ ಇಂಜಿನ್ ಸರ್ಕಾರ ಇದ್ದಾಗ ನಡ್ಡಾ ಅವರು ಶಿಫಾರಸ್ಸು ಮಾಡಿ ಎಲ್ಲಾ ಇಲಾಖೆ ಅನುಮತಿ ಕೊಡಿಸಿ ಕೆಲಸ ಆರಂಭಿಸಲು ಅವರಿಂದ ಸಾಧ್ಯವಾಗಲಿಲ್ಲ. ಈ ಯೋಜನೆಯಲ್ಲಿ ಆಣೆಕಟ್ಟು ನಿರ್ಮಾಣದ ಕಾಮಗಾರಿಗೆ ಬೇಕಾದ ಭೂಮಿ ವಶಕ್ಕೆ ಪಡೆಯಲು ಸರ್ಕಾರ ಯಾಕೆ ಮುಂದಾಗಲಿಲ್ಲ? ಮಹದಾಯಿ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರು ಸಂಭ್ರಮಾಚರಣೆ ಮಾಡಿದರಲ್ಲಾ ಇನ್ನು ಯಾಕೆ ಕೆಲಸ ಆರಂಭಿಸಿಲ್ಲ? ಇವರು ಕೇವಲ ಈ ರೀತಿ ಸುಳ್ಳು ಹಾಗೂ ಬೆದರಿಕೆ ಒಡ್ಡುತ್ತಿದ್ದಾರೆ.

ಕರ್ನಾಟಕವೇ ಕೇಂದ್ರಕ್ಕೆ ಆದಾಯ ನೀಡಿ ಸಹಾಯ ಮಾಡುತ್ತಿದೆ. ಇಲ್ಲಿರುವ ವಿದ್ಯಾವಂತರು, ಪ್ರಜ್ಞಾವಂತರು ದೇಶಕ್ಕೆ ಆದಾಯ ನೀಡುತ್ತಿದ್ದಾರೆ. ವಿಶ್ವವೇ ಕರ್ನಾಟಕ ಹಾಗೂ ಬೆಂಗಳೂರು ಮೂಲಕ ಇಡೀ ದೇಶವವನ್ನು ನೋಡುತ್ತಿದೆ ಎಂದು ವಾಜಪೇಯಿ ಅವರೇ ಹೇಳಿದ್ದಾರೆ. ಇದು ಈ ರಾಜ್ಯದ ಶಕ್ತಿ.’

ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನವಾಗಿದ್ದು, ಪಕ್ಷದ ಅಧ್ಯಕ್ಷರಾಗಿ ನಿಮ್ಮ ಆತ್ಮವಿಶ್ವಾಸ ಹೇಗಿದೆ ಎಂದು ಕೇಳಿದ ಪ್ರಶ್ನೆಗೆ, ‘ನಾನು ಕೊನೆ ದಿನ ನನ್ನ ಕ್ಷೇತ್ರ ಕನಕಪುರದಲ್ಲಿ ಮತ ಕೇಳಲು ಹೋಗುತ್ತಿದ್ದೇನೆ. ನಾಮಪತ್ರ ಸಲ್ಲಿಸುವಾಗ ಅಲ್ಲಿನ ಜನರಿಗೆ ಕೈಮುಗಿದು ಬಂದಿದ್ದೆ. ಈಗ ಮತ್ತೆ ಹೋಗುತ್ತಿದ್ದೇನೆ. ಅಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಏನು ಮಾಡಲಿದೆ, ಹೇಗೆ ದಕ್ಷ ಆಡಳಿತ ನೀಡುತ್ತೇವೆ. ಮಹಿಳೆಯರಿಗಾಗಿ ಪ್ರತಿ ತಾಲೂಕಿನಲ್ಲಿ ಹೆರಿಗೆ ಆಸ್ಪತ್ರೆ ಸ್ಥಾಪಿಸಿ ಉಚಿತ ಹೆರಿಗೆ ಮಾಡುವ ವ್ಯವಸ್ಥೆ ನೀಡುತ್ತೇವೆ. ಎಲ್ಲಾ ಸಮಾಜವನ್ನು ಸಮಾನವಾಗಿ ನೋಡಿ, ಶಾಂತಿಯ ತೋಟ ನೀರ್ಮಾಣ ಮಾಡುತ್ತೇವೆ. ಪಂಚಾಯ್ತಿ ಮಟ್ಟದಲ್ಲಿ ಉತ್ತಮ ಶಿಕ್ಷಣ ಸಿಗುವಂತೆ ಮಾಡುತ್ತೇವೆ. 2ನೇ ಹಂತಗಳ ನಗರಗಳಲ್ಲಿ ಉದ್ಯೋಗ ಸೃಷ್ಟಿಸಸಲು ನಮ್ಮದೇ ಆದ ಯೋಜನೆಗಳಿವೆ’ ಎಂದರು.

 

ಪಕ್ಷದ ಜಾಹೀರಾತಿನ ವಿಚಾರವಾಗಿ ಚುನಾವಣಾ ಆಯೋಗದ ನೋಟೀಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ 24 ತಾಸಿನಲ್ಲಿ ಉತ್ತರ ನೀಡುವಂತೆ ಚುನಾವಣಾ ಆಯೋಗ ನೋಟೀಸ್ ನೀಡಿದ್ದು, ನಾವು ಉತ್ತರ ನೀಡಿದ್ದೇವೆ. ಈ ವಿಚಾರವಾಗಿ ಆಧಆರ ಏನು ಎಂದು ಕಳಿದ್ದು, ಅವರ ರೇಟ್ ಪಟ್ಟಿಯಲ್ಲಿ ಮುಖ್ಯಮಂತ್ರಿ ಹುದ್ದೆ ಹಾಗೂ ಮಂತ್ರಿಗಿರಿ ಹುದ್ದೆಯ ರೇಟ್ ಅನ್ನು ಯತ್ನಾಳ್ ಅವರು ಹೇಳಿದ್ದಾರೆ. ಉಳಿದಂತೆ ಮಾಧ್ಯಮ ವರದಿಗಳು, ಬಿಜೆಪಿ ನಾಯಕರಾದ ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಅವರ ಹೇಳಿಕೆಗಳೇ ಸಾಕ್ಷಿ. ನೀವು ಕೊಟ್ಟಿರುವ ಸಾಕ್ಷಿ ಆಧಾರದ ಮೇಲೆ ನಾವು ಜಾಹೀರಾತು ನೀಡಿದ್ದೇವೆ. ಆಯೋಗದ ನೋಟೀಸ್ ಗೆ ಉತ್ತರ ನೀಡಿದ್ದೇವೆ. ಅಮಿತ್ ಶಾ ಅವರು ಗಲಭೆ ನಡೆಯಲಿದೆ ಎಂಬ ಬೆದರಿಕೆಗೆ ನೋಟೀಸ್ ನೀಡುವುದಿಲ್ಲವೇ? ನಿಮ್ಮಿಂದ ಸಿಯಾಗಿ ಅಧಿಕಾರ ಮಾಡಲಾಗದೇ, ಪಾಪ ಪ್ರಧಾನಿಗಳನ್ನು ಬೀದಿ ಬೀದಿ ತಿರುಗಿಸುತ್ತಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ