Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದುಬಾರಿಯಾಯ್ತು ನುಗ್ಗೆಕಾಯಿ : ದರ ಎಷ್ಟು ಗೊತ್ತೇ ?

ಬೆಂಗಳೂರು: ನುಗ್ಗೆಕಾಯಿ ಪ್ರಣಯ ಪ್ರಿಯರ ಬಹು ನೆಚ್ಚಿನ ತರಕಾರಿ. ಹಾಗೆಯೇ ಆರೋಗ್ಯಕರ ಆಹಾರವೂ ಹೌದು. ಹೀಗಾಗಿ, ನಗರದಲ್ಲಿ ನುಗ್ಗೆಕಾಯಿ ಬಹುಬೇಡಿಕೆ ಪಡೆದುಕೊಂಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ತರಕಾರಿಗಳ ಬೆಲೆ ಗಗನಕ್ಕೇರಿದೆ. ಅದರಲ್ಲಿಯೂ ನುಗ್ಗೆಕಾಯಿ ಕೆಜಿಗೆ 500 ರು. ಮುಟ್ಟಿದೆ. ಪ್ರತಿ ನುಗ್ಗೆಕಾಯಿ50 ರುಪಾಯಿಗೆ ಮಾರಾಟವಾಗುತ್ತಿದ್ದು, ಇಷ್ಟು ಬೆಲೆಗೆ ಈ ಹಿಂದೆ ನುಗ್ಗೆಕಾಯಿ ಮಾರಾಟವಾದ ಉದಾಹರಣೆಯೇ ಇಲ್ಲ.

ನಗರಕ್ಕೆ ನುಗ್ಗೆಕಾಯಿ ಹೆಚ್ಚಾಗಿ ಪೂರೈಕೆಯಾಗುವುದು ತಮಿಳು ನಾಡಿನಿಂದ. ಆದರೆ, ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದಿಂದ ಬೆಳೆ ನಾಶವಾಗಿದೆ. ಬಹುತೇಕ ತರಕಾರಿಗಳು ನಾಶವಾಗಿವೆ. ನುಗ್ಗೆಕಾಯಿ ಬೆಳೆಯೂ ಕೂಡ ನಾಶವಾಗಿದ್ದು, ನಗರಕ್ಕೆ ಪೂರೈಕೆ ಕಡಿಮೆಯಾಗಿದೆ.

ಈ ಹಿನ್ನೆಲೆಯಲ್ಲಿ ನುಗ್ಗೆಕಾಯಿ ಬೆಲೆ ಗಗನಕ್ಕೇರಿದ್ದು, ಮಹಾರಾಷ್ಟ್ರದಿಂದ ತರಿಸಲಾಗುತ್ತಿದೆ.

ಬೆಳೆಯುವ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನದಲ್ಲಿ ಅಕಾಲಿಕ ಮಳೆಯಾಗಿದ್ದು, ಬೆಳೆ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ತರಕಾರಿ ಬೆಲೆ ಹೆಚ್ಚಾಗಿದೆ.

ನುಗ್ಗೆಕಾಯಿ ಜೀರ್ಣಾಂಗ ವ್ಯವಸ್ಥೆ ಸುಧಾರಣೆಗೆ ಬಳಸುವ ಬಹುಮುಖ್ಯ ತರಕಾರಿಯಾಗಿದೆ. ನುಗ್ಗೆಕಾಯಿಯಲ್ಲಿ ಕೆಲವೊಂದು ಪ್ರಮುಖ ಪೋಷಕಾಂಶಗಳಿದ್ದು, ನಿಯಮಿತವಾಗಿ ಸೇವನೆ ಮಾಡಿದರೆ ರಕ್ತದ ಸಕ್ಕರೆ ಮಟ್ಟ ಕಡಿಮೆ ಮಾಡುವುದು, ಅಷ್ಟೇ ಅಲ್ಲದೇ ಇದರಲ್ಲಿ ವಿಟಮಿನ್ ಸಿ ಇರುವ ಕಾರಣ ಜ್ವರ, ಗಂಟಲ ಬೇನೆ, ಕೆರೆತ, ಶೀತ ಮೊದಲಾದ ಕಾಯಿಲೆಗಳನ್ನು ನಿಯಂತ್ರಿಸ ಬಹುದು.

ಬಂಜೆತನ ನಿವಾರಣೆ, ಮೂಳೆಗಳ ಬಲವರ್ಧನೆಗೆ ನುಗ್ಗೆಕಾಯಿ ಬಹಳ ಉತ್ತಮವಾದ ತರಕಾರಿಯಾಗಿದೆ. ಶ್ವಾಸಕೋಶದ ಸಮಸ್ಯೆ, ಮೂತ್ರಕೋಶದ ಸಮಸ್ಯೆ ನಿವಾರಣೆಗೆ ನುಗ್ಗೆಕಾಯಿ ಬಳಕೆ ಉತ್ತಮ ಪರಿಹಾರ ಎನ್ನಬಹುದು. ಹಾಗಾಗಿ, ನುಗ್ಗೆಕಾಯಿ ಬಹುಬೇಡಿಕೆಯ ತರಕಾರಿಯಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ