Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಧಿವೇಶನ ಈ ಸಲದ ವೈಶಿಷ್ಟ್ಯ ಏನು ಗೊತ್ತೇ ?

 

ಬೆಳಗಾವಿ :
ಬೆಳಗಾವಿ ಸುವರ್ಣಸೌಧದಲ್ಲಿ
ವಿಧಾನ ಮಂಡಲದ ವಿಶೇಷ ಅಧಿವೇಶನದ ಸಿದ್ಧತೆಗಳು ಭರದಿಂದ ಸಾಗಿವೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಸಿದ್ಧತೆಗಳನ್ನು ವೀಕ್ಷಿಸಿ ಪತ್ರಕರ್ತರಿಗೆ ಮಾಹಿತಿ ನೀಡಿದರು.

* ಡಿಸೆಂಬರ್ 19 ರಿಂದ 30 ರವರೆಗೆ 15ನೇ ವಿಧಾನಸಭೆಯ 14 ನೇ ಅಧಿವೇಶನ ನಡೆಯಲಿದೆ.
* ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಪೂರ್ವಸಿದ್ಧತೆಗಳು ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ.
* ಯಾವುದೇ ರೀತಿಯ ಲೋಪದೋಷಗಳಿಲ್ಲದೇ ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ.

* ಕಳೆದ ಬಾರಿಯ ಅನುಭವದ ಆಧಾರದ ಮೇಲೆ ಉತ್ತಮ ರೀತಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆ ಕಲ್ಪಿಸಲಾಗುವುದು.

* ಸದನದ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ವಿಭಾಗದ ಅಧಿಕಾರಿಗಳ ಜತೆ ಚರ್ಚಿಸಿ, ನಿರ್ದೇಶನಗಳನ್ನು ನೀಡಲಾಗಿದೆ.

* ಬೆಳಗಾವಿಯಲ್ಲಿ ಹತ್ತನೇ ಅಧಿವೇಶನ ನಡೆಯುತ್ತಿದೆ. ಏಳು ಅಧಿವೇಶನ ಸುವರ್ಣಸೌಧದಲ್ಲಿ ನಡೆದಿದ್ದು, ಎರಡು ಹೊರಗಡೆ ನಡೆಸಲಾಗಿರುತ್ತದೆ.

* ಈ ಬಾರಿ ಮಹತ್ವದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದೆ.

* ಕೋವಿಡ್ ಇಲ್ಲದಿರುವುದರಿಂದ ಈ ಬಾರಿ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಆದ್ದರಿಂದ ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಮಸೂದೆ ಅಂಗೀಕಾರ ಸೇರಿದಂತೆ ಕಲಾಪದ ಎಲ್ಲ ಚಟುವಟಿಕೆಗಳು ಯಥಾ ಪ್ರಕಾರ ನಡೆಯಲಿವೆ.

* ಸಾರ್ವಜನಿಕರಿಗೆ ಕಲಾಪ ವೀಕ್ಷಿಸಲು ಮುಕ್ತ ಅವಕಾಶ ನೀಡಲಾಗುವುದು. ಪ್ರವೇಶದ್ವಾರದ ಬಳಿ ಅಗತ್ಯ ಗುರುತಿನ ಚೀಟಿಯನ್ನು ನೀಡಿ ಪ್ರವೇಶ ಕಲ್ಪಿಸಲಾಗುತ್ತದೆ.

* 6 ಮಸೂದೆಗಳನ್ನು ಈ ಅಧಿವೇಶನದಲ್ಲಿ ತರಲಾಗುತ್ತಿದೆ. ಇದರಲ್ಲಿ ಎರಡು ಮಸೂದೆಗಳನ್ನು ಈಗಾಗಲೇ ಮಂಡಿಸಲಾಗಿದ್ದು, ಚರ್ಚಿಸಿ ಅವುಗಳನ್ನು ಅಂಗೀಕರಿಸುವ ಪ್ರಕ್ರಿಯೆ ನಡೆಯಲಿದೆ.
ಇದಲ್ಲದೇ ನಾಲ್ಕು ಹೊಸ ವಿಧೇಯಕಗಳು ಬಂದಿರುತ್ತವೆ. ಬೇರೆ ಯಾವುದೇ ವಿಧೇಯಕ ಇದ್ದರೆ ಸರಕಾರ ಅವುಗಳನ್ನು ಮಂಡಿಸಲಿದೆ.

* ಮೊದಲ ದಿನ ವಿಧಾನ ಸಭೆ ಉಪಾಧ್ಯಕ್ಷ ಆನಂದ ಮಾಮನಿ ಸೇರಿದಂತೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು.

* ವಿಧಾನಸಭೆ ಅಧ್ಯಕ್ಷರಾದ ಬಳಿಕ ಅತ್ಯುತ್ತಮ ಶಾಸಕರನ್ನು ಆಯ್ಕೆಗೆ ತೀರ್ಮಾನಿಸಲಾಗಿದೆ. ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುವುದು.

* ಆಯ್ಕೆ ಸಮಿತಿಯು ನೀಡುವ ವರದಿ ಆಧರಿಸಿ ಅತ್ಯುತ್ತಮ ಶಾಸಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.

* ಸಮಗ್ರ ಕರ್ನಾಟಕದ ಜತೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಸೂಕ್ತ ದಿನಗಳನ್ನು ನಿಗದಿಪಡಿಸಲಾಗುವುದು.

* ಅಧಿವೇಶನ ಹೊರತುಪಡಿಸಿ ಉಳಿದ ಅವಧಿಯಲ್ಲಿ ಸುವರ್ಣ ವಿಧಾನಸೌಧ ಸದ್ಬಳಕೆ ಅಗಬೇಕು. ಇಡೀ ವರ್ಷ ಕಡ್ಡದಲ್ಲಿ ಲವಲವಿಕೆಯಿಂದ ಚಟುವಟಿಕೆಗಳು ನಡೆಯಬೇಕು ಎಂಬ ಅಭಿಪ್ರಾಯಗಳಿವೆ.
ಶಾಸಕರ ಭವನ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

* ಅಧಿವೇಶನದ ಕಲಾಪಗಳಲ್ಲಿ ಸಚಿವರು ಮತ್ತು ಶಾಸಕರು ಕಡ್ಡಾಯವಾಗಿ ಹಾಜರಾಗಬೇಕು. ಅನಿವಾರ್ಯ ಸಂದರ್ಭಗಳಲ್ಲಿ ತಮ್ಮ ಅನುಮತಿ ಮೇರೆಗೆ ಕಲಾಪಗಳ ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು.

ಸದನದಲ್ಲಿ ನಾನು ಭಾಗವಹಿಸುವುದಿಲ್ಲ ಎಂಬ ಮಾತುಗಳನ್ನು ನಾನು ಒಪ್ಪುವುದಿಲ್ಲ. ಪ್ರಜಾಸಂಸದೀಯ ಪಾವಿತ್ರ್ಯತೆ ಕಾಪಾಡಲು ಎಲ್ಲ ಜನಪ್ರತಿನಿಧಿಗಳು ಸಹಕರಿಸಬೇಕು.

* ಜನರ ಆಶಯಗಳನ್ನು ಈಡೇರಿಸುವ ಸಂಸದೀಯ ಮಾರ್ಗ ಅಧಿವೇಶನದ ಉದ್ದೇಶವಾಗಿರುತ್ತದೆ. ಆದ್ದರಿಂದ ಜನರ ಭಾವನೆಗಳಿಗೆ ಸ್ಪಂದಿಸಿ ಎಲ್ಲರೂ ಸದನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿಕೊಂಡರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ