Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಾಯು ವಿಹಾರಗಳನ್ನು ಭೇಟಿಯಾಗಿ ಮತಯಾಚಿಸಿದ ವೈದ್ಯರು !


ಬೆಳಗಾವಿ :ಬೆಳಗಾವಿ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ರವಿವಾರ ನಸುಕಿನಲ್ಲಿ ವಾಯುವಿಹಾರಿಗಳನ್ನು ಭೇಟಿಯಾಗಿ ಮತಯಾಚಿಸಿದರು.ನಗರದ ರೇಸ್ ಕೋರ್ಸ್ ಮೈದಾನ ಸೇರಿದಂತೆ ವಿವಿಧಡೆ ಅವರು ಹಿರಿಯರಲ್ಲಿ ಈ ಬಾರಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.


ಡಾ. ರವಿ ಪಾಟೀಲ ಅವರಿಗೆ ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಈ ಬಾರಿ ಬಿಜೆಪಿಯಿಂದ ಟಿಕೆಟ್ ದೊರೆಯಲಿದೆ ಎಂದು ಜನಜೀವಾಳ ಸಾಕಷ್ಟು ಮೊದಲೇ ಭವಿಷ್ಯ ನುಡಿದಿತ್ತು.



ಬೆಳಗಾವಿ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರವಿ ಪಾಟೀಲ ಅವರನ್ನು ಪಕ್ಷ ಅಚ್ಚರಿ ರೀತಿಯಲ್ಲಿ ಈ ಬಾರಿ ಆಯ್ಕೆ ಮಾಡಿದೆ. ಯುವಕರು ಹಾಗೂ ಕ್ರಿಯಾಶೀಲರಾಗಿ ಸಮಾಜ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಅವರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಇಡೀ ಕ್ಷೇತ್ರದಲ್ಲಿ ಸುತ್ತಾಡಿ ಸಂಚಲನ ಮೂಡಿಸುತ್ತಿರುವ ಅವರ ಕಾರ್ಯವೈಖರಿ ಎಲ್ಲರ ಮನ ಗೆದ್ದಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹಾಗೂ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನತೆಗೆ ಮನವರಿಕೆ ಮಾಡಿದರು. ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಈ ಬಾರಿ ತಾನು ಗೆಲ್ಲುವುದರಲ್ಲಿ ಯಾವ ಸಂಶಯವೂ ಇಲ್ಲ. ತಾನು ಶಾಸಕನಾದರೆ ನನ್ನದೇ ಆದ ಯೋಜನೆಗಳ ಮೂಲಕ ಬೆಳಗಾವಿಯನ್ನು ಅಭಿವೃದ್ಧಿಪಥದಲ್ಲಿ ಮುನ್ನಡೆಸುವೆ. ಬೆಳಗಾವಿಯನ್ನು ಮಾದರಿ ನಗರವನ್ನಾಗಿ ಅಭಿವೃದ್ಧಿ ಪಡಿಸುವೆ. ಜನರ ಆರೋಗ್ಯ ದೃಷ್ಟಿಯಿಂದ ಹೆಚ್ಚಿನ ಆದ್ಯತೆ ನೀಡಿ ಆರೋಗ್ಯ ಸೇವೆಯನ್ನು ವಿಸ್ತರಿಸುವ ಯೋಜನೆ ಇದೆ. ಈ ನಿಟ್ಟಿನಲ್ಲಿ ಸಮಾಜಕ್ಕೆ ಮಾರ್ಗದರ್ಶಕರಾಗಿರುವ ತಾವೆಲ್ಲರೂ ನನ್ನ ಬೆಂಬಲಕ್ಕೆ ಬರಬೇಕು ಎಂದು ಅವರು ಮನವಿ ಮಾಡಿದರು.

ನಿಸರ್ಗ ಯೋಗ ಮಂಡಲದ ಪದಾಧಿಕಾರಿಗಳಾದ ಗಿರೀಶ ಹತ್ತರಕಿ, ಉಲ್ಲಾಸ ಬಾಳೇಕುಂದ್ರಿ, ಡಾ. ಶ್ರಾವಗೆ, ಹರಗುಡೆ, ಪ್ರವೀಣ ಖೋಡಾ, ರಾಜೇಶ ಕಾಮತ, ಆನಂದ ಜಮಖಂಡಿ, ಶಿವಾಜಿರಾವ ಪವಾರ, ಏಳಕೋಟಿ ಎಸ್, ಚಂದುಬಾಯಿ ಶಾ ಹಾಜರಿದ್ದರು.

ಡಾ. ರವಿ ಪಾಟೀಲ ಅವರಿಗೆ ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಈ ಬಾರಿ ಬಿಜೆಪಿಯಿಂದ ಟಿಕೆಟ್ ದೊರೆಯಲಿದೆ ಎಂದು ಜನಜೀವಾಳ ಸಾಕಷ್ಟು ಮೊದಲೇ ಭವಿಷ್ಯ ನುಡಿದಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ