Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚುಟುಕುಗಳು ಕಾವ್ಯವೆನ್ನುವುದನ್ನು ಮರೆಯಬಾರದು : ಡಾ. ಗೋವಿಂದ ಹೆಗಡೆ

 

ಬೆಳಗಾವಿ :
ಚುಟುಕುಗಳು ಚಿಕ್ಕದಾಗಿದ್ದರೆ ಸಾಲದು, ಅವು ಕಾವ್ಯಲಕ್ಷಣಗಳನ್ನೂ ಹೊಂದಿರಬೇಕಾಗುತ್ತದೆ" ಎಂದು ಖ್ಯಾತ ಚುಟುಕು , ಗಜಲ್ ಕವಿಗಳೂ, ಅರಿವಳಿಕೆ ತಜ್ಞರೂ ಆದ ಡಾ. ಗೋವಿಂದ ಹೆಗಡೆ ಹುಬ್ಬಳ್ಳಿ ಹೇಳಿದರು.

ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚುಟುಕು ವಾಚನ ಸ್ಪರ್ಧೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಡಾ. ಗೋವಿಂದ ಹೆಗಡೆಯವರು ಚುಟುಕು ಕಾವ್ಯ ಹಲವು ಹೆಸರುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು ವಚನ, ಸುಭಾಷಿತ, ಮುಕ್ತಕ, ಉರ್ದುವಿನ ಫರ್ದ್, ರುಬಾಬ್, ಜಪಾನಿನ ಹೈಕು, ಇಂಗ್ಲಿಷ್ ನ ಲಿಮೆರಿಕ್, ಎಪಿಗ್ರಂ , ಹನಿಗವನ ಮೊದಲಾದ ಸ್ವರೂಪ ಪಡೆದಿದೆ. ತನಗ ಎನ್ನುವ ಹೊಸ ಪ್ರಕಾರವನ್ನು ಈಚೆಗೆ ನಾನು ಕನ್ನಡದಲ್ಲಿ ಬಳಕೆಗೆ ತಂದಿದ್ದೇನೆ ಎಂದು ಹೇಳಿದರಲ್ಲದೆ ಅವುಗಳನ್ನು ಉದಾಹರಿಸಿ ತೋರಿಸಿದರು.

ಡಾ. ಹೆಡೆಯವರನ್ನು ಚುಸಾಪ ಪರವಾಗಿ ಸನ್ಮಾನಿಸಲಾಯಿತು. ಶಿಕ್ಷಣ ತಜ್ಞ ಬಿ. ಎಸ್. ಗವಿಮಠ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚುಟುಕು ಸಾಹಿತ್ಯ ಪ್ರಕಾರವನ್ನು ಜನಪ್ರಿಯಗೊಳಿಸಿ ಹೊಸ ಕಾವ್ಯಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಚುಟುಕು ಸಾಹಿತ್ಯ ಪರಿಷತ್ತನ್ನು ಅಭಿನಂದಿಸಿದರು. ಕಾರ್ಯಾಧ್ಯಕ್ಷ ಡಾ. ಸಿ. ಕೆ. ಜೋರಾಪುರ ಅಧ್ಯಕ್ಷತೆ ವಹಿಸಿದ್ದರು. ಚುಸಾಪ ಜಿಲ್ಲಾಧ್ಯಕ್ಷ ಎಲ್. ಎಸ್. ಶಾಸ್ತ್ರಿ ವೇದಿಕೆಯಲ್ಲಿದ್ದರು. ಪ್ರಧಾನ ಕಾರ್ಯದರ್ಶಿ ಬಸವರಾಜ ಗಾರ್ಗಿ ಸ್ವಾಗತಿಸಿದರು. ಮಮತಾ ಶಂಕರ ಪರಿಚಯಿಸಿದರು. ಅನ್ನಪೂರ್ಣಾ ಹಿರೇಮಠ ಮತ್ತು ಭಾರತಿ ಮಠದ ನಿರೂಪಿಸಿದರು.

ಜಿಲ್ಲಾ ಮಟ್ಟದ ಚುಟುಕು ವಚನ ಸ್ಪರ್ಧೆಯ ನಿರ್ಣಾಯಕರಾಗಿದ್ದ ಡಾ. ಎಚ್. ಐ. ತಿಮ್ಮಾಪುರ, ಎ. ಎ. ಸನದಿ, ಮತ್ತು ದೀಪಿಕಾ ಚಾಟೆ ಇವರನ್ನು ಸತ್ಕರಿಸಲಾಯಿತು. ಸ್ಪರ್ಧೆಯಲ್ಲಿ ರವಿ ಹಲಕರ್ಣಿ ಪ್ರಥಮ ಸ್ಥಾನ, ಬಿ. ಎಚ್. ಶೀಗೀಹಳ್ಳಿ ದ್ವಿತೀಯ, ಮೈತ್ರೇಯಿಣಿ ಗದಿಗೆಪ್ಪಗೌಡರ ತೃತೀಯ, ಬಸವರಾಜ ಘೋಡಗೇರಿ ಮತ್ತು ಶೈಲಜಾ ತಳವಾರ
ಇವರು ಪ್ರೋತ್ಸಾಹಕ ಬಹುಮಾನ ಪಡೆದರು. ವಿವಿಧ ತಾಲೂಕು ಘಟಕಗಳ ಅಧ್ಯಕ್ಷರು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ