Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆರೋಗ್ಯಪೂರ್ಣ ಜೀವನಕ್ಕೆ ಯೋಗ ದಿವ್ಯೌಷಧಿ : ಡಾ.ಪ್ರಭಾಕರ ಕೋರೆ

 

ಅಂಕಲಿ :
ಆರೋಗ್ಯಪೂರ್ಣ ಜೀವನಕ್ಕೆ ಯೋಗ ದಿವ್ಯೌಷಧಿ. ನಮ್ಮ ಸಂಸ್ಕೃತಿಯ ಬೇರುಗಳಿರುವುದು ಯೋಗದಲ್ಲಿಯೇ. ವಿಶ್ವಕ್ಕೆ ಭಾರತ ಕೊಟ್ಟ ಬಹುದೊಡ್ಡ ಕೊಡುಗೆ ಯೋಗವಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.

ಚಿಕ್ಕೋಡಿ ತಾಲೂಕಿನ ಅಂಕಲಿಯ ಶ್ರೀಮತಿ ಶಾರದಾ ದೇವಿ ಕೋರೆ ಸಂಯುಕ್ತ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಯೋಗವು ಭಾರತೀಯತೆಯ ಪ್ರತಿಬಿಂಬವಾಗಿದೆ. ನಮ್ಮ ಋಷಿಮುನಿಗಳು ಯೋಗವನ್ನು ಸಂಸ್ಕೃತಿಯ ಭಾಗವಾಗಿ ನೋಡಿದರು ಆರಾಧಿಸಿದರು. ಸರ್ವ ರೋಗಗಳಿಗೂ ಯೋಗ ಒಂದು ಮಂತ್ರವೆಂದು ಗುರುತಿಸಿದರು. ಅದು ಕೇವಲ ಶಾರೀರಕ ಮಾತ್ರವಲ್ಲ ನಮ್ಮ ಮಾನಸಿಕ ಆರೋಗ್ಯದ ಬುನಾದಿಯೆಂದು ಅರಿವು ಮೂಡಿಸಿದರು. ಶತಶತಮಾನಗಳಿಂದ ನಮ್ಮ ಪರಂಪರೆಯಲ್ಲಿ ಹಾಸುಹೊಕ್ಕಾಗಿರುವ ಯೋಗವನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯಲ್ಲಿ ಮಾನ್ಯತೆ ದೊರೆಯುವಂತೆ ಮಾಡಿರುವುದು ಒಂದು ಅಭಿಮಾನದ ಸಂಗತಿ. ಯೋಗದ ನೆಲೆಯಲ್ಲಿ ಜಗತ್ತು ಭಾರತವನ್ನು ನೋಡುವಂತೆ ಕಾಲ ಬದಲಾಗಿದೆ. ನಮ್ಮ ಜೀವನಕ್ರಮದಲ್ಲಿ ನಿತ್ಯ ಯೋಗವನ್ನು ವ್ರತದಂತೆ ಸ್ವೀಕರಿಸಬೇಕು. ಮಕ್ಕಳು ತಪ್ಪದೇ ಯೋಗವನ್ನು ರೂಢಿಸಿಕೊಳ್ಳಬೇಕು. ಯೋಗ ಮಾಡುವವನು ನಿರೋಗಿಯಾಗಿರುತ್ತಾನೆ. ಅದನ್ನು ಅಭ್ಯಾಸಬಲವನ್ನಾಗಿ ಮಾಡಿಕೊಂಡರೆ ಜೀವನದಲ್ಲಿ ಹತ್ತುಹಲವಾರು ಸಮಸ್ಯೆಗಳನ್ನು ಎದುರಿಸಲು ಸಾಧ್ಯ. ನಮ್ಮ ಆತ್ಮಬಲವನ್ನು ಹೆಚ್ಚಿಸುವಲ್ಲಿ ಯೋಗದ ಪಾತ್ರ ಪ್ರಧಾನವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.



ಪಂತಜಲಿ ಯೋಗ ಕೇಂದ್ರ ರಾಯಬಾಗದ ಯೋಗ ಶಿಕ್ಷಕ ಸಂಜಯ ಕುಸ್ತಿಗಾರ, ಪ್ರಭಾವತಿ ಕುಸ್ತಿಗಾರ, ಭಾರತಿ ಮೋರೆ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿದರು.

ನಂತರ ಡಾ.ಪ್ರಭಾಕರ ಕೋರೆಯವರು ಯೋಗ ಶಿಕ್ಷಕರಿಗೆ ಗೌರವಿಸಿ ಸತ್ಕರಿಸಿದರು. ಜೆ.ಎಸ್.ತಮಗೊಂಡ ಸ್ವಾಗತಿಸಿದರು. ಬಿ.ಜಿ.ಜಾವೂರ, ಆಜೀವ ಸದಸ್ಯರಾದ ಬಿ.ಎಸ್. ಅಂಬಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ