Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಗಲಿದ ಅಜಿತ ಪವಾರಗೆ ಡಾ.ಪ್ರಭಾಕರ ಕೋರೆ ಅಶ್ರುತರ್ಪಣ


ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ ಪವಾರ ಅವರು ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿರುವ ಸುದ್ದಿಯು ಆಘಾತವನ್ನುಂಟು ಮಾಡಿದೆ. ಬಾರಾಮತಿ ಕ್ಷೇತ್ರದ ಜನಪ್ರಿಯ ನಾಯಕರಾಗಿ ರಾಜ್ಯದ ಡಿಸಿಎಂ ಹುದ್ದೆಯಲ್ಲಿ ಜನಸೇವೆಗೆ ತೊಡಗಿದ್ದ ಅವರ ನಿಧನ ಮಹಾರಾಷ್ಟಕ್ಕೆ ಹಾಗೂ ದೇಶಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ‍್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ದುಃಖ ವ್ಯಕ್ತಪಡಿಸಿದ್ದಾರೆ.




ಒಬ್ಬ ಡೈನಾಮಿಕ ರಾಜಕೀಯ ಮುಖಂಡರಾಗಿ ಹಲವಾರು ದಶಕಗಳಿಂದ ನ್ಯಾಷಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸೇವೆಗೆ ತೊಡಗಿದ್ದರು. ಜನಾನುರಾಗಿಯಾಗಿದ್ದ ಅವರು ರೈತರ ಹಾಗೂ ದೀನದಲಿತರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ಪಾರದರ್ಶಕ ವ್ಯಕ್ತಿತ್ವದ ಅಜಿತ ಪವಾರ ಸಮಾಜಮುಖಿಯಾಗಿ ಗುರುತಿಸಿಕೊಂಡಿದ್ದರು. ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಿದ್ದರು. ಮಹಾರಾಷ್ಟ್ರ ರಾಜ್ಯದ ಅಭಿವೃದ್ಧಿಯಲ್ಲಿ ಮೌಲಿಕ ಯೋಗದಾನ ನೀಡಿದ್ದರು.
ವಿಶೇಷವಾಗಿ ಹಣಕಾಸು, ನೀರಾವರಿ ಮತ್ತು ಕೃಷಿ ಕ್ಷೇತ್ರಗಳಲ್ಲಿ ಅವರ ಕಾರ್ಯಕ್ಷಮತೆ ಗಮನಾರ್ಹವಾಗಿತ್ತು. ರೈತ ಸಮಸ್ಯೆಗಳು, ನೀರಿನ ನಿರ್ವಹಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಕುರಿತು ಅವರು ತೆಗೆದುಕೊಂಡ ಕ್ರಮಗಳು ಚರ್ಚೆಗೆ ಒಳಗಾಗಿದ್ದವು. ಕೆಲವೊಮ್ಮೆ ಅವರ ನಿರ್ಧಾರಗಳು ವಿವಾದಗಳಿಗೆ ಕಾರಣವಾದರೂ, ಬಲವಾದ ನಾಯಕತ್ವ ಗುಣದಿಂದ ಎಲ್ಲವನ್ನೂ ನಿಭಾಯಿಸಿದ್ದರು. ಅಜಿತ್ ಪವಾರ್ ಅವರು ಶರದ್ ಪವಾರ್ ಅವರ ರಾಜಕೀಯ ಪರಂಪರೆಯನ್ನು ಮುಂದುವರೆಸಿದ ನಾಯಕನಾಗಿಯೂ ಪರಿಗಣಿಸಲ್ಪಟ್ಟಿದ್ದರು. ಮಹಾರಾಷ್ಟ್ರದ ರಾಜಕೀಯ ಸ್ಥಿತಿಗತಿಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು,
ಕಳೆದ ಡಿಸೆಂಬರದಲ್ಲಿ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದನ್ನು ನೆನೆಪಿಸಿಕೊಂಡ ಡಾ.ಕೋರೆಯವರು, ಪವಾರ ಕುಟುಂಬದೊಂದಿಗೆ ನನ್ನದು ಆತ್ಮೀಯ ಒಡನಾಟ ಹಾಗೂ ಗರಿಷ್ಠ ಸಂಬಂಧವಿದೆ. ಸಹೋದರ ಸಮಾನನಾಗಿದ್ದ ಅಜಿತ ಪವಾರ  ಒಬ್ಬ ಸರ್ವೋತ್ತಮ ನಾಯಕನಾಗಿದ್ದ, ಹೃದಯವಂತ ನಾಯಕನನ್ನು ಸಮಾಜವು ಬಹುಬೇಗನೆ ಕಳೆದುಕೊಳ್ಳುವಂತಾಯಿತು. ಮಹಾರಾಷ್ಟçದಲ್ಲಿ ಕೆಎಲ್‌ಇ ಸಂಸ್ಥೆಯ ಬೆಳವಣಿಗೆಯಲ್ಲಿ ಅಜಿತ ಪವಾರ ಹಾಗೂ ಶರದ ಪವಾರ ಕುಟುಂಬದವರು ಬಹಳಷ್ಟು ಸಹಾಯ ಸಹಕಾರ ನೀಡಿದ್ದನ್ನು ಮರೆಯುವಂತಿಲ್ಲ. ಅಂತೆಯೇ ಶರದ ಪವಾರ ಹಾಗೂ ಅಜಿತ ಪವಾರ ಅವರು ಬಾರಾಮತಿಯಲ್ಲಿ ಕೃಷಿಕ್ಷೇತ್ರದಲ್ಲಿ ಮಾಡಿರುವ ಸಾಧನೆಯು ನನ್ನ ಮೇಲೆ ಅತೀಯಾದ ಪ್ರಭಾವ ಬೀರಿತು. ಅಂತೆಯೆ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದ ಸ್ಥಾಪನೆಯಲ್ಲಿ ಪವಾರ ಕುಟುಂಬದ ಕೊಡುಗೆ ಬಹುದೊಡ್ಡದು. ಕೆಲಸದ ವಿಷಯದಲ್ಲಿ ಅವರದು ಕೇವಲ ಆಶ್ವಾಸನೆಯಾಗಿರಲಿಲ್ಲ, ಅದನ್ನು ತಕ್ಷಣ ಕೃತಿಯಲ್ಲಿ ತರುತ್ತಿದ್ದರು. ಅವರೊಬ್ಬ ನೇರವಾದಿ ಮತ್ತು ಸ್ಪಷ್ಟವಾದಿಯಾಗಿದ್ದರು.  ಅವರ ಅಗಲಿಕೆ ವೈಯಕ್ತಿಕವಾಗಿ ಬಹಳ ದುಃಖ ತಂದಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಅವರ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಕರುಣಿಸಲೆಂದು ಪ್ರಾರ್ಥಿಸುತ್ತೇನೆಂದು ಡಾ.ಕೋರೆಯವರು ಕಂಬನಿ ಮಿಡಿಸಿದ್ದಾರೆ.




Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ