Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚುನಾವಣಾ ಪ್ರಚಾರ ವೆಚ್ಚ: ದರಗಳ ನಿಗದಿ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ

 

ಬೆಳಗಾವಿ:
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ತಗಲುವ ಖರ್ಚು-ವೆಚ್ಚಗಳನ್ನು ಲೆಕ್ಕಾಚಾರ ಮಾಡಲು ಅನುಕೂಲವಾಗುವಂತೆ ವಿವಿಧ ಸೇವೆಗಳಿಗೆ ನಿಗದಿಪಡಿಸಲಾದ ಮಾರುಕಟ್ಟೆ ದರಗಳನ್ನು ಆಧರಿಸಿಯೇ ವೆಚ್ಚವನ್ನು ಲೆಕ್ಕ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಎಸ್.ಆರ್. ದರ ನಿಗದಿಪಡಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್.ಆರ್. ದರಗಳನ್ನು ಆರು ತಿಂಗಳ ಹಿಂದೆಯೇ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಿಗದಿಪಡಿಸಲಾಗಿರುತ್ತದೆ. ಆದಾಗ್ಯೂ ಪ್ರಸ್ತುತ ಮಾರುಕಟ್ಟೆ ದರಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಲಹೆಗಳನ್ನು ಆಧರಿಸಿ ದರಗಳಲ್ಲಿ ಅಗತ್ಯ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು.

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಳಕೆ ಮಾಡುವ ಹೂವುಗಳ ದರವನ್ನು ಕಡಿಮೆಗೊಳಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಪ್ರತಿನಿಧಿಗಳು ಸಲಹೆ ನೀಡಿದರು.

ನಗರದಲ್ಲಿರುವ ಪುಷ್ಪ ಹರಾಜು ಕೇಂದ್ರದಿಂದ ಸಗಟು ಮಾರುಕಟ್ಟೆ ದರಗಳನ್ನು ಪಡೆದುಕೊಂಡು ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಇನ್ನೂ ಸಾಕಷ್ಟು ಕಾಲವಕಾಶ ಇರುವುದರಿಂದ ದರ ಪರಿಷ್ಕರಣೆ ಹಾಗೂ ಹೊಸ ಸಾಮಗ್ರಿಅಥವಾ ಸೇವೆಗಳ ಸೇರ್ಪಡೆಯನ್ನು ಮಾಡಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮ ಸಲಹೆ-ಅಭಿಪ್ರಾಯಗಳನ್ನು ತಿಳಿಸಬೇಕು ಎಂದು ಹೇಳಿದರು.

ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ:

ಜನವರಿ 1 ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಲ್ಲಿಯವರೆಗೂ ಚುನಾವಣಾ ಆಯೋಗದ ಮಾರ್ಗಸೂಚಿ ಮತ್ತು ನಿರ್ದೇಶನದ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
27 ಅಕ್ಟೋಬರ್ ನಿಂದ ಡಿಸೆಂಬರ್ 9 ರವರೆಗಿನ ಅವಧಿಯಲ್ಲಿ ಕೈಗೊಳ್ಳಲಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿಯನ್ನು ಒದಗಿಸಲಾಯಿತು.

ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರುಗಳ ಸೇರ್ಪಡೆ, ತೆಗೆದುಹಾಕುವಿಕೆ, ತಿದ್ದುಪಡಿ ಮತ್ತಿತರ ಪರಿಷ್ಕರಣೆ ಒಳಗೊಂಡ ಮತದಾರರ ಪಟ್ಟಿಯನ್ನು ನೀಡಲಾಯಿತು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ, ಮಹಾನಗರ ಪಾಲಿಕೆಯ ಉಪ ಆಯುಕ್ತೆ ರೇಷ್ಮಾ ತಾಳಿಕೋಟೆ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ