Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರುನಾಡಿಗೆ ಇನ್ನಷ್ಟು ಸಹಾಯಮಾಡಿ : ಕೇಂದ್ರಕ್ಕೆ ಈರಣ್ಣ ಕಡಾಡಿ ಮನವಿ

 

 

ಮೂಡಲಗಿ:
ಕರ್ನಾಟಕ ರಾಜ್ಯದಲ್ಲಿ ಬರಗಾಲದಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿ ಪರಿಹರಿಸಲು ಕೇಂದ್ರ ಸರ್ಕಾರ ರಾಜ್ಯದ ಬರಗಾಲದ ಸಮಸ್ಯೆಗೆ ಸ್ಪಂದಿಸಿ ಸಹಾಯ ಮಾಡಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯವೇಳೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರಿನ ಈ ಎರಡು ಅವಧಿಯಲ್ಲಿ ಪ್ರತಿವರ್ಷ ಸಾಮಾನ್ಯವಾಗಿ 131 ಮೀ.ಮೀ ನಿಂದ 138 ಮೀ.ಮೀ ವರೆಗೆ ವಾಡಿಕೆಯ ಮಳೆಯಾಗುತ್ತಿತ್ತು. ಆದರೆ ಪ್ರಸ್ತುತ ವರ್ಷದಲ್ಲಿ 47 ಮೀ.ಮೀ ನಿಂದ 107 ಮೀ.ಮೀ ಮಳೆಯಾಗಿದ್ದು, ಶೇ.47 ರಿಂದ ಶೇ.65 ರಷ್ಟು ಮಳೆಯ ಕೊರತೆಯಾಗಿದೆ.

ಕರ್ನಾಟಕ ರಾಜ್ಯದಲ್ಲಿ 14 ಜಲಾಶಯಗಳಿದ್ದು ಒಟ್ಟು ನೀರಿನ ಸಂಗ್ರಹದ ಸಾಮರ್ಥ್ಯ 896 ಟಿ.ಎಂ.ಸಿ ಇರುತ್ತದೆ. ಪ್ರಸ್ತುತ ವರ್ಷ ಈ ಜಲಾಶಯಗಳಲ್ಲಿ ಕೇವಲ 404 ಟಿ.ಎಂ.ಸಿ ಪ್ರಮಾಣದಷ್ಟು ಮಾತ್ರ ನೀರಿನ ಸಂಗ್ರಹವಿದೆ. ರಾಜ್ಯದ ಒಟ್ಟಾರೆ ಜಲಾಶಯಗಳಲ್ಲಿ ಶೇ.45ರಷ್ಟು ಪ್ರಮಾಣದ ನೀರಿನ ಸಂಗ್ರಹವಿದ್ದು, ಶೇ.55 ರಷ್ಟು ಪ್ರಮಾಣದ ನೀರಿನ ಕೊರತೆ ಜಲಾಶಯಗಳಲ್ಲಿ ಕಂಡು ಬರುತ್ತದೆ.

ತೀವ್ರ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ರಾಜ್ಯದಲ್ಲಿ ಶೇ 11 ರಷ್ಟು ಕುಸಿತ ಕಂಡಿದೆ.ಇದರ ಪರಿಣಾಮ ರಾಜ್ಯದ 236 ತಾಲ್ಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತÀ ಪ್ರದೇಶವೆಂದು ಘೋಷಿಸಲಾಗಿದೆ. ರಾಜ್ಯದ ಸುಮಾರು 600 ಗ್ರಾಮ ಪಂಚಾಯತಗಳಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ ಉಂಟಾಗುವ ಸಂಭವವಿದೆ.

ರಾಜ್ಯದಲ್ಲಿ ಪ್ರತಿವರ್ಷ 83 ಲಕ್ಷ ಹೆಕ್ಟೇರ್ ಬೆಳೆ ಬಿತ್ತನೆಯಾಗಬೇಕು. ಆದರೆ ಈ ವರ್ಷ ಕೇವಲ 74 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಅದರಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನೀರಿನ ಅಭಾವದಿಂದ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ದನ ಕರುಗಳಿಗೆ ಮುಂದಿನ ಬೇಸಿಗೆ ತಿಂಗಳುಗಳಲ್ಲಿ ಮೇವಿನ ಕೊರತೆ ಕಾಣಿಸಿಕೊಳ್ಳುವ ಸಂಭವವಿದೆ.

ಈ ಆರ್ಥಿಕ ವರ್ಷದಲ್ಲಿ ಸುಮಾರು 456 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಅತ್ಯಂತ ದುರ್ದೈವದ ಹಾಗೂ ನೋವಿನ ಸಂಗತಿ. ಇಷ್ಟೋಂದು ಗಂಭೀರ ಸಮಸ್ಯೆಗಳನ್ನು ಜನತೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಕೇವಲ ಕೇಂದ್ರ ಸರ್ಕಾರದ ಕಡೆಗೆ ಬೆರಳು ತೋರಿಸುವ ಕೆಲಸ ಮಾಡುತ್ತಿದೆ.

ನಾವು ಹಿಂದಿನ ಅಂಕಿ ಸಂಖ್ಯೆ ಪರಿಶೀಲಿಸಿದಾಗ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರದ ಆಡಳಿತದ ಸಮಯದಲ್ಲಿ ಕರ್ನಾಟಕಕ್ಕೆ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಕೇವಲ 812 ಕೋಟಿ ರೂಪಾಯಿ ಮತ್ತು ಎನ್.ಡಿ.ಆರ್.ಎಫ್ ಅಡಿಯಲ್ಲಿ 3232 ಕೋಟಿ ರೂ.ಗಳ ನೆರವು ನೀಡಲಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಎಸ್.ಡಿ.ಆರ್.ಎಫ್ ಅಡಿ 2778 ಕೋಟಿ ರೂಪಾಯಿ ಮತ್ತು ಎನ್.ಡಿ.ಆರ್.ಎಫ್ ಅಡಿ 12542 ಕೋಟಿ ರೂಪಾಯಿ ನೆರವನ್ನು ನೀಡಲಾಗಿದೆ. ಆದರೂ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಟೀಕೆ ಮಾಡುವುದನ್ನು ನಿಲ್ಲಿಸಿಲ್ಲ.

ವಿಧಾನಸಭಾ ಚುನಾವಣೆಗೆ ಮುಂಚೆ ಕರ್ನಾಟಕದಲ್ಲಿ ಕಾಂಗ್ರೆಸ್ ತಾನು ನೀಡಿದ ಗ್ಯಾರಂಟಿಗಳನ್ನು ಸರ್ಕಾರ ರಚನೆಯಾದ ನಂತರ ಜಾರಿಗೊಳಿಸಲು ವಿಫಲವಾಗಿದೆ ಹಾಗೂ ಭೀಕರ ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ರೈತರ ನೆರವಿಗೂ ಬರಲಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಸುಳ್ಳು ಭರವಸೆ ಮತ್ತು ಸಂಪೂರ್ಣ ವಿಫಲತೆಯ ಕಾರಣದಿಂದ ನಮ್ಮ ರಾಜ್ಯದ ರೈತರು ಕಂಗಾಲಾಗಿದ್ದಾರೆ. ಕರ್ನಾಟಕ ರಾಜ್ಯದ ರೈತರಿಗೆ ಏಕೈಕ ಆಶಾಭಾವನೆ ಎಂದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾತ್ರ. ಆದ್ದರಿಂದ ಕರ್ನಾಟಕದ ಜನತೆಯ ಹಿತದೃಷ್ಠಿಯಿಂದ ತೊಂದರೆಯಲ್ಲಿರುವ ರೈತರಿಗೆ ನೆರವಾಗಲು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನಮ್ಮ ರಾಜ್ಯದ ಬರಗಾಲದ ಸಮಸ್ಯೆಗೆ ಸ್ಪಂದಿಸಿ ಸಹಾಯ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ