Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶ್ವೇತಪತ್ರ ಹೊರಡಿಸಲು ಈರಣ್ಣ ಕಡಾಡಿ ಆಗ್ರಹ

 

ಬೆಳಗಾವಿ:
ಕೇಂದ್ರದ ಮೇಲೆ‌ ಬೊಟ್ಟು ಮಾಡುವ ಕಾಂಗ್ರೆಸ್ ಸರ್ಕಾರ ಮೊದಲು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಹಾಗೂ ಕಳೆದ 20 ವರ್ಷಗಳಿಂದ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಒಟ್ಟು ಅನುದಾನ, ತೆರಿಗೆ ಹಂಚಿಕೆ ಸೇರಿದಂತೆ ಎಲ್ಲ ಅಂಶಗಳನ್ನೊಳಗೊಂಡ ಶ್ವೇತಪತ್ರವನ್ನು ಹೊರಡಿಸುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬೆಳಗಾವಿಯ ಮಹಾವೀರ ಭವನದಲ್ಲಿ ಸೋಮವಾರ ನಡೆದ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ನವರು ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದು ಸತ್ಯವಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮ್ಯಯನವರೇ, ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುವುದನ್ನು ಬಿಟ್ಟು, ಶ್ವೇತಪತ್ರ ಹೊರಡಿಸಿ ಬೆಳಗಾವಿ ಜಿಲ್ಲೆ ಒಂದಕ್ಕೆ 12 ಲಕ್ಷ ಪಡಿತರದಾರರಿಗೆ ಉಚಿತ ಅಕ್ಕಿ, 3.46 ಲಕ್ಷ ಜನರಿಗೆ ಉಜ್ವಾಲಾ ಗ್ಯಾಸ್, 12.5 ಸಾವಿರ ಕೋಟಿ ರೈಲ್ವೆ ಯೋಜನೆ ಹೀಗೆ ಪಟ್ಟಿ ಮಾಡುತ್ತಾ ಹೋದರೆ ಹಿಂದೆದೂ ಸಿಗದಷ್ಟು ಅನುದಾನ ರಾಜ್ಯಕ್ಕೆ ಸಿಕ್ಕೆದೆ ಎಂದರು.

ವಿಧಾನ ಪರಿಷತ್ತಿನ ಸದಸ್ಯ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್.ಅರುಣ ಮಾತನಾಡಿ,
ಯುಪಿಎ ಅವಧಿಗೆ ಹೋಲಿಸಿದರೆ ಎನ್‌ಡಿಎ ಅವಧಿಯಲ್ಲಿ ದೇಶದ ಚಿತ್ರಣವೆ ಬದಲಾಗಿದೆ. ಯುವಕರಿಗೆ ಸ್ವಯಂ ಉದ್ಯೋಗ, ಕುಶಲಕರ್ಮಿ ಶ್ರಮಯೊಜನೆ ಮೂಲಕ ಕರ್ನಾಟಕಕ್ಕೆ ಹಿಂದಿನಕ್ಕಿಂತ ಮೂರು ಪಟ್ಟು ಹಣ ದೊರೆತಿದೆ. ಈ ಸತ್ಯ ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿದೆ.
ಜಲಜೀವನ್ ಮಿಷನ್, ಅಮೃತ್ ಯೋಜನೆ, ಸ್ಮಾರ್ಟ್‌ಸಿಟಿ, ಪಿಎಂ ಅವಾಸ್ ಯೋಜನೆ, ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಇದುವರೆಗೆ ಎಷ್ಟು ಅನುದಾನ ನೀಡಿದೆ. ಎಷ್ಟರ ಮಟ್ಟಿಗೆ ಈ ಅನುದಾನ ಬಳಕೆಯಾಗಿದೆ ಎಂಬ ಶ್ವೇತಪತ್ರ ಹೊರಡಿಸುವ ಧಮ್ಮು-ತಾಕತ್ತು ನಿಮಗಿದೆಯೇ ಎಂದು ಬಿಜೆಪಿ ವಿ.ಪ ಸದಸ್ಯ ಡಿ.ಎಸ್.ಅರುಣ ಅವರು ಸವಾಲು ಹಾಕಿದರು.

ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಪಟಾಲಮ್ ಕಟ್ಟಿಕೊಂಡು ಬೊಬ್ಬೆ ಹೊಡೆಯುತ್ತಿರುವ ಸಿದ್ದರಾಮಯ್ಯನವರೇ, ಕನ್ನಡಿಗರ ಶ್ರಮದ ಹಣವನ್ನು ವಾಮಮಾರ್ಗದಲ್ಲಿ ಸಂಗ್ರಹಿಸಿ ಛತ್ತೀಸ್‌ಗಢ, ಮಧ್ಯ ಪ್ರದೇಶ ಚುನಾವಣೆಗೆ ನೀಡಿದ ನಿಮಗೆ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿರಬಹುದು. 10 ತಿಂಗಳ ಕಾಂಗ್ರೆಸ್ ಸರ್ಕಾರ ಜನತೆಗೆ ಬೇಸರವಾಗಿದ್ದು ಸದ್ಯದಲ್ಲಿ ಮರು ಚುನಾವಣೆ ನಡೆದರೆ ಬಿಜೆಪಿ 140 ಕ್ಕೂ ಅಧಿಕ ಸ್ಥಾನ ಗೆಲ್ಲಲಿದೆ. ಕಾರ್ಯಕರ್ತರು ಯಾವುದೆ ಕಾರಣಕ್ಕೂ ಎದೆಗುಂದದೆ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಂಬರುವ ಲೊಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ವಿಜಯ ಸಾಧಿಸೋಣ. ಬೈಲಹೊಂಗಲ, ಸವದತ್ತಿ ಹಾಗೂ ರಾಮದುರ್ಗದಲ್ಲಿ ಪಕ್ಷಕ್ಕೆ ಹೆಚ್ಚು ಮತಗಳು ದೊರೆಯುವಂತೆ ಶ್ರಮ ವಹಿಸೋಣ ಪಕ್ಷದ ಕಾರ್ಯಕರ್ತರೊಂದಿಗೆ ನಾನಿದ್ದೆನೆ ಎಂದರು.

ಖಾನಾಪುರ ಶಾಸಕ‌ ವಿಠಲ‌ ಹಲಗೇಕರ, ಸಂಸದೆ ಮಂಗಳಾ ಅಂಗಡಿ, ಮಾಜಿ ಶಾಸಕ ಅರವಿಂದ ಪಾಟೀಲ, ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ, ಮಾಜಿ‌ ಶಾಸಕ‌ ಸಂಜಯ ಪಾಟೀಲ ಮಾತನಾಡಿದರು.
ವಿಭಾಗ ಪ್ರಭಾರಿ ಪ್ರಕಾಶ ಅಕ್ಕಲಕೋಟ ಸಮಘಟನಾತ್ಮಕ ಅವಧಿ ತಗೆದುಕೊಂಡರು. ಸಂದೀಪ ದೇಶಪಾಂಡೆ ಮೊದಿಯವರಿಗೆ ರಾಮ ಮಂದಿರ ಕಾರ್ಯನಿರ್ವಹಿಸಿದ್ದಕ್ಕೆ ಅಭಿನಂದನೆ ನಿರ್ಣಯ ಮಂಡಿಸಿದರೆ ನಿತಿನ್ ಚೌಗಲೆ ಅನಮೋದನೆ ಮಾಡಿದರು.

ಮಾಜಿ ಶಾಸಕ, ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ, ಜಗದೀಶ ಮೆಟಗುಡ್, ಸುರೇಶ ಮಾರಿಹಾಳ, ಪ್ರಮೋದ ಕೊಚೇರಿ, ಬಿ.ಎಫ್.ಕೊಳದೂರ, ಮಾರುತಿ ಕೊಪ್ಪದ, ಲಕ್ಷ್ಮಣ ತಪಸಿ, ಧನಶ್ರೀ ದೇಸಾಯಿ, ರತ್ನಾ ಗೋಧಿ, ಸೊನ್ನದ, ಮಂಜುಳಾ ಹಿರೇಮಠ, ಯುವರಾಜ ಜಾಧವ, ಜಗದೀಶ ಕೌಜಗೇರಿ, ಡಾ.ಗುರುಪ್ರಸಾದ ಕೋತಿನ,ಜಿಲ್ಲಾ‌ ಮಾಧ್ಯಮ ಸಂಚಾಲಕ ಎಫ್.ಎಸ್. ಸಿದ್ದನಗೌಡರ ಇದ್ದರು.

ಗುರುಪಾದ ಕಳ್ಳಿ, ಈರಣ್ಣ ಚಂದರಗಿ, ಸಂಜಯ ಕೂಬಲ, ಡಾ. ಬಸವರಾಜ ಪರವಣ್ಣವರ, ರಾಜೇಂದ್ರ ಗೌಡಪ್ಪಗೋಳ, ಮಹಾದೇವ ಶಕ್ಕಿ, ಧನಂಜಯ ಜಾಧವ, ಭೀಮಶಿ ಭರಮಣ್ಣವರ, ರಾಜೇಶ ಬೀಳಗಿ, ಗುರು ಮೆಟಗುಡ್, ಯಲ್ಲೇಶ ಕೊಲಕಾರ, ಸಂತೋಷ ದೇಶನೂರ, ವಿಠಲ‌ ಸಾಯಣ್ಣವರ, ವೀರಭದ್ರ ಪುಜಾರಿ, ಈರಣ್ಣ ಅಂಗಡಿ, ಭಿಮಶಿ ಮಳೆದವರ ನೂರಾರು ಪದಾಧಿಕಾರಿಗಳು ಇದ್ದರು.
ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯಲ್ಲಿ ಯಜಮಾನ ಸ್ಥಾನ ವಹಿಸಿದ ನರೇಂದ್ರ ಮೋದಿಯವರಿಗೆ ಅಭಿನಂದನಾ ಪತ್ರ ಬರೆದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ