Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮರ ಹೆಸರಿಡಲು ಈರಣ್ಣ ಕಡಾಡಿ ಆಗ್ರಹ

ಬೆಳಗಾವಿ: 1824 ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯದ ವಿಜಯೋತ್ಸವದ 201ನೇ ವರ್ಷದ ಹಿನ್ನಲೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ’' ಎಂದು ನಾಮಕರಣ ಮಾಡುವುದು ಹಾಗೂ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಭವ್ಯವಾದ ಪ್ರತಿಮೆ ಸ್ಥಾಪನೆ ಜೊತೆಗೆ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಉನ್ನತೀಕರಣಗೊಳಿಸಬೇಕೆಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರನ್ನು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿ ಮನವಿ ಮಾಡಿದರು.

ನವದೆಹೆಲಿಯಲ್ಲಿ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಯುದ್ಧ ಸಾರಿ ಗೆಲುವು ಸಾಧಿಸಿದ ಮೊದಲ ಮಹಿಳೆಯಾಗಿದ್ದಾರೆ. ಅವರ ತ್ಯಾಗ ಬಲಿದಾನಕ್ಕೆ ಗೌರವ ಸಲ್ಲಿಸುವ ಸಲುವಾಗಿ ಹಾಗೂ ಅವರ ವಿರೋಚಿತ ಕಾರ್ಯಗಳನ್ನು ಮುಂದಿನ ಪೀಳಿಗೆಗೆ ಸ್ಪೂರ್ತಿ ನೀಡುವುದರ ಜೊತಕವಾಗಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭವ್ಯವಾದ ಪ್ರತಿಮೆ ಸ್ಥಾಪನೆ ಮಾಡುವ ಮೂಲಕ ಕರ್ನಾಟಕ ಜನತೆ ಉತ್ತಮ ಕೊಡುಗೆ ನೀಡಬೇಕೆಂದು ವಿನಂತಿಸಿದರು.
ನನ್ನ ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿದ ಸಚಿವರು ಈ ವಿಷಯವನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕಾಗುತ್ತದೆ. ಅದಕ್ಕೆ ತಕ್ಕಂತೆ ಈಗಾಗಲೇ ನಾವು ಸಿದ್ದತೆಗಳನ್ನು ಮಾಡುತ್ತಿದ್ದೇವೆ. ಆದಷ್ಟು ಬೇಗ ಸಚಿವ ಸಂಪುಟದಲ್ಲಿ ಮಂಡನೆ ಮಾಡಿ ಅನುಮೋದನೆ ಪಡೆಯಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದರು.

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಹಾಗೂ ತೆಲಂಗಾಣ ರಾಜ್ಯದ ಪ್ರಭಾರಿ ಅಭಯ ಪಾಟೀಲ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ