ಬೆಳಗಾವಿ: ಬೆಳಗಾವಿ ತಾಲೂಕು ಭರಮ್ಯಾನಟ್ಟಿ ಗ್ರಾಮದ ವಿವಾಹಿತೆಯೊಂದಿಗೆ ಪರಾರಿಯಾದ ಎಂಬ ಕಾರಣಕ್ಕೆ ಯುವಕನ ಮನೆ ಧ್ವಂಸ ಮಾಡಿದ್ದ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿವಾಹಿತೆ ನಾಗವ್ವ ಎಂಬಾಕೆಯೊಂದಿಗೆ ಹೋಗಿದ್ದ ಯಲ್ಲಪ್ಪ ನಾಯಕನ ಮನೆ ಮೇಲೆ ದಾಳಿ ಮಾಡಿ ಮನೆ ಧ್ವಂಸ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ನಾಗರಾಜ ನಾಯಕ, ರವಿ ಬೀಜಗತ್ತಿ, ಈಶ್ವರ ಮುಚ್ಚಂಡಿ ಎಂಬುವರನ್ನು ಬೆಳಗಾವಿ ಮಾರಿಹಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಮೂವರು ಆರೋಪಿಗಳು ಸೇರಿ ಹಲವರ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳ ಬಂಧಿಸಲಾಗಿದೆ. ಮೂವರು ಆರೋಪಿಗಳು ನಾಗವ್ವ ಮತ್ತು ಪತಿ ಬಸಪ್ಪ ಸಂಬಂಧಿಕರಾಗಿದ್ದಾರೆ.