Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರತಿಪಕ್ಷ ನಾಯಕನ ಆಯ್ಕೆಗೆ ಕಸರತ್ತು

 

ಬೆಂಗಳೂರು :
ಮುಂದಿನ ವಾರ ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೊನೆ ಕ್ಷಣದ ಕಸರತ್ತು ನಡೆದಿದೆ.

ಮೂರ್ನಾಲ್ಕು ದಿನಗಳಲ್ಲಿ ಘೋಷಣೆಯಾಗುವ ಸಾಧ್ಯತೆಯಿದ್ದು, ಅಂತಿಮವಾಗಿ ಯಾರ ಹೆಗಲಿಗೆ ಪ್ರತಿಪಕ್ಷದ ನಾಯಕನ ಜವಾಬ್ದಾರಿ ಬೀಳಲಿದೆ ಎಂಬುದು ಸ್ಪಷ್ಟವಾಗಲಿದೆ.

ಶಾಸಕಾಂಗ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಸ್ಥಾನ ಎರಡೂ ಒಂದಕ್ಕೊಂದು ತಳಕು ಹಾಕಿಕೊಂಡಿರುವುದರಿಂದ ಜಾತಿ ಸಮೀಕರಣದ ಲೆಕ್ಕಾಚಾರ ನಡೆಯುತ್ತಿದೆ. ಲಿಂಗಾಯತ, ಒಕ್ಕಲಿಗ ಅಥವಾ ಇತರ ಹಿಂದುಳಿದ ವರ್ಗದ (ಒಬಿಸಿ) ಪೈಕಿ ಒಂದು ಸಮುದಾಯದ ಶಾಸಕರಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ನೀಡುವ ಸಾಧ್ಯತೆಯಿದೆ.

ಈ ಪೈಕಿ ಸದ್ಯಕ್ಕೆ ಆರು ಮಂದಿ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಲಿಂಗಾಯತ ಸಮುದಾಯದಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಒಕ್ಕಲಿಗ ಸಮುದಾಯದಿಂದ ಆರ್‌.ಅಶೋಕ್‌, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಒಬಿಸಿ ಸಮುದಾಯದಿಂದ ವಿ.ಸುನೀಲ್‌ಕುಮಾರ್‌ ಅವರ ಹೆಸರುಗಳು ಪರಿಶೀಲನೆಯಲ್ಲಿವೆ.

 

ಈಗಾಗಲೇ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಪಕ್ಷದ ಶಾಸಕರೊಂದಿಗೆ ಶಾಸಕಾಂಗ ಪಕ್ಷದ ನಾಯಕ ಯಾರಾಗಬೇಕು ಎಂಬುದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಆದರೆ, ಶಾಸಕರು ಯಾರ ಪರ ಬ್ಯಾಟಿಂಗ್‌ ಮಾಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ. ಈ ನಡುವೆ ಪಕ್ಷದ ವರಿಷ್ಠರು ರಾಜ್ಯ ಘಟಕದ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದಿದ್ದಾರೆ. ಇನ್ನೇನು ಘೋಷಣೆ ಮಾಡುವ ಹಂತಕ್ಕೆ ಬಂದು ನಿಂತಿದೆ.

ಪಕ್ಷದ ಹಿರಿಯ ನಾಯಕರು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಪರ ಒಲವು ಹೊಂದಿದ್ದಾರೆ. ಹಿಂದಿನ ಸರ್ಕಾರದ ನೇತೃತ್ವ ವಹಿಸಿರುವುದರಿಂದ ಈಗಿನ ಸರ್ಕಾರವನ್ನು ಎದುರಿಸಲು ಅವರೇ ಸೂಕ್ತ ಎಂಬ ಅಭಿಪ್ರಾಯವಿದೆ. ಆದರೆ, ಪಕ್ಷದ ಕೆಳಹಂತದಲ್ಲಿ ಬೊಮ್ಮಾಯಿ ಪರ ಒಲವಿಲ್ಲ. ಹೀಗಾಗಿಯೇ ಕುತೂಹಲ ಮೂಡಿದೆ.

 

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಂತಿಮಗೊಂಡ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಹೊಸಬರ ನೇಮಕಕ್ಕೆ ಹಾದಿ ಸುಗಮವಾಗಲಿದೆ. ಹೆಚ್ಚೂ ಕಡಿಮೆ ಎರಡೂ ಹುದ್ದೆಗಳಿಗೆ ಒಂದೇ ಸಮಯದಲ್ಲಿ ನೇಮಕಗೊಂಡರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ