Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆನೆಗಾಗಿ ಹೋರಾಟ: ಜಿಯೊ ಸಿಮ್ ಎಸೆದು ಪ್ರತಿಭಟನೆ

Advertisement
ಬೆಳಗಾವಿ : ಮಹಾರಾಷ್ಟ್ರದ ನಾಂದಣಿ ಮಠದಲ್ಲಿದ್ದ ಆನೆಯನ್ನು ಮರಳಿ ಮಠಕ್ಕೆ ಒಪ್ಪಿಸುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ.

ಆನೆ ಒಯ್ಯಲು ಕಾರಣರಾಗಿದ್ದಾರೆ ಎಂದು ಸಿಟ್ಟಿಗೆದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯ ಅಸಂಖ್ಯ ಭಕ್ತರು ಅಂಬಾನಿ ಒಡೆತನದ ಜಿಯೊ ಸಿಮ್‌ ಕಾರ್ಡ್ ಕಿತ್ತೆಸೆದಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲ್ಲೂಕಿನ ನಾಂದಣಿಯ ಸ್ವಸ್ತಿಶ್ರೀ ಭಟ್ಟಾರಕ ಪಟ್ಟಾಚಾರ್ಯ ಜೈನ ಮಠದ ಮಹಾದೇವಿ (ಮಾಧುರಿ) ಎಂಬ ಆನೆಯನು ಸುಪ್ರೀಂ ಕೋರ್ಟ್ ಆದೇಶದಂತೆ
ವೈದ್ಯಾಧಿಕಾರಿಗಳು ಆನೆ ಆರೋಗ್ಯ ತಪಾಸಣೆ ನಡೆಸಿ, ಸರಿಯಾದ ಪಾಲನೆ ಆಗದೆ ಆರೋಗ್ಯ ಕ್ಷೀಣಿಸಿದೆ ಎಂದು ವರದಿ ನೀಡಿದ್ದರು.

ವಿಚಾರಣೆ ನಡೆಸಿದ ಮುಂಬೈ ಹೈಕೋರ್ಟ್ ಆನೆಯನ್ನು ಅರಣ್ಯಕ್ಕೆ ಬಿಡಬೇಕು ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಮಠದ ಭಕ್ತರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅಲ್ಲಿಯೂ ಸೋಲಾಯಿತು. ಆದೇಶದಂತೆ, ಜುಲೈ 28ರಂದು ಅರಣ್ಯಾಧಿಕಾರಿಗಳು ಆನೆಯನ್ನು ವಶಕ್ಕೆ ಪಡೆದು, ವನತಾರ ಪ್ರಾಣಿ ರಕ್ಷಣಾ ಕೇಂದ್ರಕ್ಕೆ ಸೇರಿಸಿದ್ದಾರೆ.

ಜೈನ ಮಠಗಳ ಅಸ್ತಿತ್ವಕ್ಕೆ ಧಕ್ಕೆ ತರಲಾಗಿದೆ. ಉದ್ಯಮಿ ಅಂಬಾನಿ ಒಡೆತನದ ಕೇಂದ್ರಕ್ಕೆ ಆನೆಯನ್ನು ಸೇರಿಸಿದ್ದು ಸರಿಯಲ್ಲ ಎಂದು ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ಇದೇ ಕಾರಣಕ್ಕೆ ಅಪಾರ ಸಂಖ್ಯೆಯ ಭಕ್ತರು ಜಿಯೊ ನೆಟವರ್ಕ್ ಬಳಕೆಯನ್ನೂ ಕೈಬಿಟ್ಟಿದ್ದಾರೆ' ಎಂದು ಜೈನ ಸಮಾಜದ ಮುಖಂಡರು ತಿಳಿಸಿದ್ದಾರೆ.

ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲ್ಲೂಕಿನ ನಾಂದಣಿಯ ಸ್ವಸ್ತಿಶ್ರೀ ಭಟ್ಟಾರಕ ಪಟ್ಟಾಚಾರ್ಯ ಜೈನ ಮಠದ ಮಹಾದೇವಿ (ಮಾಧುರಿ) ಎಂಬ ಆನೆಯನ್ನು ಸುಪ್ರಿಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ, ಗುಜರಾತ್ ರಾಜ್ಯದ ವನತಾರ ಪ್ರಾಣಿ ರಕ್ಷಣಾ ಕೇಂದ್ರಕ್ಕೆ (ಅಂಬಾನಿ ಒಡೆತನ) ಕರೆದೊಯ್ಯಲಾಗಿದೆ. ಇದನ್ನು ಖಂಡಿಸಿದ ಭಕ್ತರು, ನಾಂದಣಿಯಿಂದ ಕೊಲ್ಲಾಪುರ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

30 ವರ್ಷಗಳಿಂದ ಆನೆ ಮಠದಲ್ಲಿತ್ತು. ಈಗ ಅದಕ್ಕೆ 35 ವರ್ಷ ವಯಸ್ಸು. ಮಠದಲ್ಲಿ ಪರಂಪರಾಗತವಾಗಿ ಆನೆ ಸಾಕುವ ಪದ್ಧತಿ ಇದೆ. ಇದನ್ನು ಪ್ರಶ್ನಿಸಿ ಮಹಾರಾಷ್ಟ್ರದ ಪ್ರಾಣಿ ದಯಾ ಸಂಘಟನೆ ದೂರು ಸಲ್ಲಿಸಿತ್ತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ