Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಬಿಗ್ ಶಾಕ್ ನೀಡಿದ ಸರಕಾರ ; ಬಸ್‌ ‍ಪ್ರಯಾಣ ದರ ಹೆಚ್ಚಳ: ಇಂದು ಮಧ್ಯರಾತ್ರಿಯಿಂದಲೇ ಜಾರಿ- ಪ್ರಯಾಣಿಕರ ಜೇಬಿಗೆ ಕತ್ತರಿ

ಬೆಂಗಳೂರು: ಹಲವಾರು ತಿಂಗಳುಗಳಿಂದ ಬಸ್ ಪ್ರಯಾಣ ದರ ಏರಿಕೆಯಾಗುತ್ತದೆ ಎಂಬ ಊಹಾಪೋಹಗಳು ಹರಡಿದ್ದವು. ಆದೀಗ ನಿಜವಾಗಿದೆ. ಇಂದಿನಿಂದಲೇ ಅನ್ವಯವಾಗುವಂತೆ ಬಸ್ ಪ್ರಯಾಣ ದರ ಏರಿಕೆಯಾಗುತ್ತಿದೆ. ಇದು ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದ್ದು ಪ್ರಯಾಣಿಕರು ಇನ್ನು ಮೇಲೆ ತಮ್ಮ ಜೇಬಿನಿಂದ ಹೆಚ್ಚಿನ ಹಣ ತೇರುವ ಅನಿವಾರ್ಯತೆ ಸೃಷ್ಟಿಯಾಗಿದೆ.

ಬಸ್‌ ‍ಪ್ರಯಾಣ ದರವು ಏರಿಕೆ ಎಲ್ಲ ನಾಲ್ಕು ನಿಗಮಗಳಲ್ಲಿ ಶನಿವಾರ (ಜ.4) ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ.

ಬಸ್‌ಗಳ ಟಿಕೆಟ್‌ ದರವನ್ನು ಶೇ 15ರಷ್ಟು ಏರಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿತ್ತು. ಜ.4ರ ಮಧ್ಯರಾತ್ರಿ 12 ಗಂಟೆಯ ಬಳಿಕ (ಜ.5) ಹೊರಡುವ ಬಸ್‌ಗಳಿಗೆ ಅನ್ವಯವಾಗಲಿದೆ.

ಬೆಂಗಳೂರು ನಗರದಲ್ಲಿ ವಿಮಾನ ನಿಲ್ದಾಣಕ್ಕೆ ಸಂಚರಿಸುವ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಉಳಿದವುಗಳಲ್ಲಿ ಕನಿಷ್ಠ ₹ 1 ಮತ್ತು ಗರಿಷ್ಠ ₹ 3 ಹೆಚ್ಚಳವಾಗಲಿದೆ. ಮೊದಲ ಸ್ಟೇಜ್‌ಗೆ ಸದ್ಯ ₹ 5 ದರ ಇದ್ದು, ಇನ್ನು ಮುಂದೆ ₹ 6 ಆಗಲಿದೆ. ಎರಡನೇ ಸ್ಟೇಜ್‌ನಿಂದ ದರ ಇದೇ ಮಾದರಿಯಲ್ಲಿ ಹೆಚ್ಚಾಗಲಿದೆ. ₹ 10 ಇದ್ದಿದ್ದು ₹ 12, ₹ 20 ಇದ್ದಿದ್ದು ₹ 23, ₹ 25 ಇದ್ದಿದ್ದು ₹ 28, ₹ 30 ಇದ್ದಿದ್ದು ₹ 32 ಆಗಲಿದೆ.

ಕೆಎಸ್‌ಆರ್‌ಟಿಸಿ, ವಾಯವ್ಯ ಕರ್ನಾಟಕ ಎಸ್‌ಆರ್‌ಟಿಸಿ (ಎನ್‌ಡಬ್ಲ್ಯುಆರ್‌ಟಿಸಿ), ಕಲ್ಯಾಣ ಕರ್ನಾಟಕ ಎಸ್‌ಆರ್‌ಟಿಸಿ (ಕೆಕೆಆರ್‌ಟಿಸಿ) ಬಸ್‌ಗಳಲ್ಲಿ ವಿವಿಧ ಜಿಲ್ಲಾ ಕೇಂದ್ರಗಳಿಗೆ ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಕನಿಷ್ಠ ₹ 11 (ಹತ್ತಿರದ ಜಿಲ್ಲೆ), ಗರಿಷ್ಠ ₹ 115ರವರೆಗೆ (ದೂರದ ಜಿಲ್ಲೆ) ಹೆಚ್ಚಳವಾಗಲಿದೆ. ಇದೇ ಮಾದರಿಯಲ್ಲಿ ಪ್ರತಿಷ್ಠಿತ ಬಸ್‌ಗಳಲ್ಲಿ ಅವುಗಳ ಈಗಿನ ದರದಲ್ಲಿ ಶೇ 15 ಹೆಚ್ಚಳವಾಗಲಿದೆ.

ನಾಲ್ಕು ನಿಗಮಗಳಲ್ಲಿ ತಿಂಗಳ ವರಮಾನವು ₹ 1,052 ಕೋಟಿ ಇದ್ದು, ಬೆಲೆ ಏರಿಕೆಯಾದ ಬಳಿಕ ಪ್ರತಿ ತಿಂಗಳು ಹೆಚ್ಚುವರಿಯಾಗಿ ₹ 74.85 ಕೋಟಿ ಸಂಗ್ರಹವಾಗಲಿದೆ.

ಐಷಾರಾಮಿ ಬಸ್‌ಗಳಿಗೂ ಅನ್ವಯ
ಸಾಮಾನ್ಯ ವೇಗದೂತ ಬಸ್‌ಗಳ ಟಿಕೆಟ್‌ ದರ ಏರಿಕೆಯನ್ನು ಸರ್ಕಾರ ನಿರ್ಧರಿಸುತ್ತದೆ. ಪ್ರತಿಷ್ಠಿತ ಬಸ್‌ಗಳ ದರ ಏರಿಕೆಯನ್ನು ನಿಗಮಗಳ ಮಟ್ಟದಲ್ಲಿಯೇ ನಿರ್ಧಾರವಾಗುತ್ತದೆ. ಆದರೂ ಶೇ 15 ಬೆಲೆ ಏರಿಕೆ ಎಲ್ಲ ಬಸ್‌ಗಳಿಗೂ ಅನ್ವಯವಾಗಲಿದೆ. ‘ಐಷಾರಾಮಿ ಬಸ್‌ಗಳ ಟಿಕೆಟ್‌ ದರವನ್ನು ಹೆಚ್ಚಿಸದೇ ಐದು ವರ್ಷಗಳಾಗಿವೆ. ಹಾಗಾಗಿ ಅವುಗಳ ದರಗಳು ಸಾಮಾನ್ಯ ಬಸ್‌ಗಳ ಜೊತೆಗೇ ಆಗಲಿವೆ’ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್‌ ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ