Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ಪ್ರಭಾವಿ ವಕೀಲೆ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ: ಬೆಳಗಾವಿಯಲ್ಲಿ ಮಧ್ಯರಾತ್ರಿಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ, ನಗರದ ಮಂಡೋಳಿ ರಸ್ತೆಯಲ್ಲಿರುವ ವಕೀಲೆಯೊಬ್ಬರ ಮನೆ ಮೇಲೆ ಫೈರಿಂಗ್ ಮಾಡಿದ ಆತಂಕಕಾರಿ ಘಟನೆ ಶನಿವಾರ ರಾತ್ರಿ ನಡೆದಿದೆ.

ನಿನ್ನೆ ರಾತ್ರಿ 1 ರಿಂದ 2 ಗಂಟೆ ಸುಮಾರಿಗೆ ವಕೀಲೆ ಪೂಜಾ ಕಾಕತಕರ್ ಅವರ ಮನೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿ ಈ ದಾಳಿ ಮಾಡಲಾಗಿದೆ.

ಮನೆಯ ಮೊದಲ ಮಹಡಿಯಲ್ಲಿ ವಕೀಲೆ ಪೂಜಾ ಕಾಕತಕರ್ ಅವರ ಪುತ್ರಿ ಓದುತ್ತಿದ್ದಳು. ಈ ವೇಳೆ ದಾಳಿ ನಡೆದಿದೆ. ಮನೆಯ ಗ್ಲಾಸ್ ಮೇಲೆ ಫೈರಿಂಗ್ ಮಾರ್ಕ್ ಬಿದ್ದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಸುಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಪ್ರಭಾವಿ ವಕೀಲೆಯಾಗಿರುವ ಪೂಜಾ ಕಾಕತಕರ್​ ಅವರು ಕಳೆದ 18 ವರ್ಷಗಳಿಂದ ವಕೀಲೆ ವೃತ್ತಿ ಮಾಡುತ್ತಾ ಬಂದಿದ್ದು, ಹೈ ಪ್ರೊಫೈಲ್ ಕೇಸ್​ಗಳ ಪರ ವಾದ ಮಾಡುತ್ತಿದ್ದರು. ನಿನ್ನೆ ರಾತ್ರಿ ದುಷ್ಕರ್ಮಿಗಳು ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆ ನಂತರ ಪೂಜಾ ಕಾಕತಕರ್​ ಅವರ ಕುಟುಂಬಕ್ಕೆ ರಕ್ಷಣೆ ನೀಡುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ. ಎಫ್‌ಎಸ್‌ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಕರ್ತರ ಸೋಗಿನಲ್ಲಿ 1.60 ಲಕ್ಷ ರೂ.ಸುಲಿಗೆ: ಕೊನೆಗೂ ಯೂಟ್ಯೂಬರ್‌ಗಳ ಬಂಧನ..!!!ಕೊಲೆ ಕೇಸ್‌ನಲ್ಲಿ ಪರಾರಿಯಾಗಿದ್ದ ಆರೋಪಿ ಈಗ ಗಾಂಜಾ ಕೇಸ್‌ನಲ್ಲಿ ಸೆರೆಪ್ರಹ್ಲಾದ ಜೋಶಿಗೆ ಕೇಂದ್ರ ಶಿಕ್ಷಣ ಇಲಾಖೆ ಹೊಣೆನೀಟ್ ಪೇಪರ್ ಸೋರಿಕೆ ಪ್ರಕರಣ : ಹೋರಾಟಕ್ಕೆ ಮಣಿದ ಕೇಂದ್ರ ರಾಜ್ಯದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಅರಬ್ಬಿ ಸಮುದ್ರದ ಬೃಹತ್ ʼವಾಯು ಸುಳಿʼಯೇ ಪಶ್ಚಿಮ ಕರಾವಳಿ-ಗುಜರಾತ್‌ನಲ್ಲಿ ದಿಢೀರ್‌ ಮಳೆ ಆರ್ಭಟಕ್ಕೆ ಕಾರಣ; ಏನಿದು ವಾಯು ಸುಳಿ..?ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬಳಿಕ ಎನ್‌ಟಿಎ ಪುನರ್ರಚನೆ: 47 ಅಧಿಕಾರಿಗಳಿಗೆ ಗೇಟ್‌ಪಾಸ್‌, ಇನ್ನಷ್ಟು ತಲೆದಂಡ ಸಾಧ್ಯತೆಕೇಂದ್ರ ಸಚಿವ ಸ್ಥಾನಕ್ಕೆ ರವ್ನೀತ್ ಸಿಂಗ್ ಬಿಟ್ಟು ರಾಜೀನಾಮೆಶ್ರೀ ಬಸವೇಶ್ವರ ಕೋ-ಆಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸರಳಾ ಹೇರೇಕರ ಆಯ್ಕೆ