Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್‌ನ ಮೊದಲ ಪಟ್ಟಿ ಪ್ರಕಟ

 

ದೆಹಲಿ :
ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಮೊದಲ
ಪ್ರಕಟಗೊಂಡಿದ್ದು, ರಾಜ್ಯದ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ 6, ತೆಲಂಗಾಣದ 4, ಛತ್ತೀಸ್​ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ​ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಒಟ್ಟು 36 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಘೋಷಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಶಶಿ ತರೂರ್​ ತಿರುವನಂತಪುರಂನಿಂದ ಟಿಕೆಟ್ ಪಡೆದಿದ್ದಾರೆ.

ಕರ್ನಾಟಕದ 6 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ.
ಕರ್ನಾಟಕದ 6 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸಲಾಗಿದೆ. ವಿಜಯಪುರ, ಶಿವಮೊಗ್ಗ, ಹಾಸನ, ತುಮಕೂರು, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಶಿವಮೊಗ್ಗದಿಂದ ಗೀತಾ ಶಿವರಾಜ್​ ಕುಮಾರ್, ತುಮಕೂರಿನಿಂದ ಎಸ್​ಪಿ ಮುದ್ದಹನುಮೇಗೌಡ, ಮಂಡ್ಯದಿಂದ ವೆಂಕಟರಾಮೇಗೌಡ (ಸ್ಟಾರ್ ಚಂದ್ರು),ಹಾಸನಿಂದ ಶ್ರೇಯಸ್ ಪಟೇಲ್, ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್, ಬಿಜಾಪುರದಿಂದ ಎಚ್​ಆರ್​ ಅಲ್ಗೂರ್​ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಚಿತ್ರದುರ್ಗದಿಂದ ಬಿಎನ್ ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರಿನಿಂದ ಜಯಪ್ರಕಾಶ್ ಹೆಗ್ಡೆ ಹೆಸರನ್ನು ಕಾಯ್ದಿರಿಸಲಾಗಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮವಾಗಿಲ್ಲ.

ಉಡುಪಿ ಚಿಕ್ಕಮಗಳೂರು- ಜಯಪ್ರಕಾಶ್ ಹೆಗ್ಡೆ ಕಾಯ್ದಿರಿಸಲಾಗಿದೆ.

ತುಮಕೂರು- ಮುದ್ದಹನುಮೇಗೌಡ

ಶಿವಮೊಗ್ಗ- ಗೀತಾ ಶಿವರಾಜ್ ಕುಮಾರ್

ಹಾಸನ- ಶ್ರೇಯಸ್ ಪಟೇಲ್

ಚಿತ್ರದುರ್ಗ- ಬಿ.ಎಸ್.ಚಂದ್ರಪ್ಪ

ವಿಜಯಪುರ- ರಾಜು ಆಲಗೂರು

ಮಂಡ್ಯ- ಸ್ಟಾರ್ ಚಂದ್ರು

ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್

ಪಟ್ಟಿ ಅಂತಿಮವಾಗಿದ್ದು, ಅಧಿಕೃತವಾಗಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ