Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್‌ನ ಮೊದಲ ಪಟ್ಟಿ ಪ್ರಕಟ

 

ದೆಹಲಿ :
ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಮೊದಲ
ಪ್ರಕಟಗೊಂಡಿದ್ದು, ರಾಜ್ಯದ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ 6, ತೆಲಂಗಾಣದ 4, ಛತ್ತೀಸ್​ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ​ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಒಟ್ಟು 36 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಘೋಷಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಶಶಿ ತರೂರ್​ ತಿರುವನಂತಪುರಂನಿಂದ ಟಿಕೆಟ್ ಪಡೆದಿದ್ದಾರೆ.

ಕರ್ನಾಟಕದ 6 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ.
ಕರ್ನಾಟಕದ 6 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸಲಾಗಿದೆ. ವಿಜಯಪುರ, ಶಿವಮೊಗ್ಗ, ಹಾಸನ, ತುಮಕೂರು, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಶಿವಮೊಗ್ಗದಿಂದ ಗೀತಾ ಶಿವರಾಜ್​ ಕುಮಾರ್, ತುಮಕೂರಿನಿಂದ ಎಸ್​ಪಿ ಮುದ್ದಹನುಮೇಗೌಡ, ಮಂಡ್ಯದಿಂದ ವೆಂಕಟರಾಮೇಗೌಡ (ಸ್ಟಾರ್ ಚಂದ್ರು),ಹಾಸನಿಂದ ಶ್ರೇಯಸ್ ಪಟೇಲ್, ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್, ಬಿಜಾಪುರದಿಂದ ಎಚ್​ಆರ್​ ಅಲ್ಗೂರ್​ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಚಿತ್ರದುರ್ಗದಿಂದ ಬಿಎನ್ ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರಿನಿಂದ ಜಯಪ್ರಕಾಶ್ ಹೆಗ್ಡೆ ಹೆಸರನ್ನು ಕಾಯ್ದಿರಿಸಲಾಗಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮವಾಗಿಲ್ಲ.

ಉಡುಪಿ ಚಿಕ್ಕಮಗಳೂರು- ಜಯಪ್ರಕಾಶ್ ಹೆಗ್ಡೆ ಕಾಯ್ದಿರಿಸಲಾಗಿದೆ.

ತುಮಕೂರು- ಮುದ್ದಹನುಮೇಗೌಡ

ಶಿವಮೊಗ್ಗ- ಗೀತಾ ಶಿವರಾಜ್ ಕುಮಾರ್

ಹಾಸನ- ಶ್ರೇಯಸ್ ಪಟೇಲ್

ಚಿತ್ರದುರ್ಗ- ಬಿ.ಎಸ್.ಚಂದ್ರಪ್ಪ

ವಿಜಯಪುರ- ರಾಜು ಆಲಗೂರು

ಮಂಡ್ಯ- ಸ್ಟಾರ್ ಚಂದ್ರು

ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್

ಪಟ್ಟಿ ಅಂತಿಮವಾಗಿದ್ದು, ಅಧಿಕೃತವಾಗಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ